ಶಿಕ್ಷಣ

ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಬ್ರೇಕ್‌ ಹಾಕಲು ಸರ್ಕಾರ ಬಿಗಿ ಕ್ರಮ

ಶಾಲಾ ಹಂತದಲ್ಲಿ ಆತ್ಮರಕ್ಷಣಾ ತರಬೇತಿ ನೀಡಲು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಸಂಬಂಧಪಟ್ಟಂತೆ ಸರ್ಕಾರ ಬಿಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಶಾಲಾ ಹಂತದಲ್ಲಿ ಆತ್ಮರಕ್ಷಣಾ ತರಬೇತಿ ನೀಡುತ್ತಿದೆ ಎಂದು ಮಕ್ಕಳ ಮತ್ತು ಮಹಿಳಾ ಅಭಿವೃದ್ದಿ ಸಚಿವ ಆಚಾರ್ ಹಾಲಪ್ಪ ತಿಳಿಸಿದ್ದಾರೆ.
ವಿಧಾನಪರಿಷತ್‌ನಲ್ಲಿ ಸದಸ್ಯರಾದ ಸಲೀಂ ಅಹಮ್ಮದ್ ಪರವಾಗಿ ವಿಪಕ್ಷ ನಾಉಕ ಬಿ.ಕೆ.ಹರಿಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ ಮಹಿಳೆಉರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ವಿವರ ನೀಡಿದರು. ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಲು ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಶಾಲೆಗಳಲ್ಲಿ ಕರಾಟೆ, ಜೂಡೋ, ತಾಕ್ವಾಂಡೊ ಆತ್ಮರಕ್ಷಣಾ ತರಬೇತಿಉನ್ನು ನೀಡಲಾಗುತ್ತಿದೆ. ಈವರೆಗೂ 1,754 ಮೆಟ್ರಿಕ್ ಪೂರ್ವ, 25 ಸಾವಿರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರು ತರಬೇತಿ ಪಡೆದಿದ್ದಾರೆ ಎಂದರು.
ಆದರೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರು, ಈ ರೀತಿಯ ತರಬೇತಿಗಳಿಂದ ದೌರ್ಜನ್ಯ ನಿಲ್ಲುವುದಿಲ್ಲ. ಪೊಲೀಸ್ ಠಾಣೆಗಳನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಬೇಕು ಎಂದರು.
ಸದಸ್ಯೆ ಭಾರತಿ ಶೆಟ್ಟಿ ಅವರು ಸ್ವಾತಂತ್ರ್ಯದ  ನಂತರದಿಂದಲೂ ಈ ರೀತಿಯ ಪ್ರಕರಣದಿಂದ ತಲೆತಗ್ಗಿಸುವ ವಾತಾವರಣವಿದೆ. ಸರ್ಕಾರ ಶಾಲಾ ಶಿಕ್ಷಣದಲ್ಲಿ ನೈತಿಕ ಪಠ್ಯವನ್ನು ಅಳವಡಿಸಬೇಕೆಂದು ಹಲವಾರು ಬಾರಿ ಮನವಿ ಮಾಡಿದ್ದೇವೆ. ಆದರೆ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ದೌರ್ಜನ್ಯ ಪ್ರಕರಣಗಳು ತೀವ್ರಗೊಂಡಿವೆ ಎಂದು ಆಕ್ಷೇಪಿಸಿದರು.

andolanait

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

9 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

9 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

10 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

10 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

11 hours ago