ಮನರಂಜನೆ

10 ದಿನಗಳಲ್ಲಿ 20 ಕೋಟಿ ರೂ. ಗಳಿಕೆ ಮಾಡಿದ ಮಾರ್ಟಿನ್

ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍ ಕಳೆದ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದೆ. ಕನ್ನಡದ ಅತೀ ಹೆಚ್ಚು ಬಜೆಟ್‍ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾರ್ಟಿನ್‍ ಬಿಡುಗಡೆಯಾದ 10 ದಿನಗಳಲ್ಲಿ ಕೊನೆಗೂ 20 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗಿದೆ.

ಮಾರ್ಟಿನ್‍ ಚಿತ್ರ ಬಿಡಗುಡೆಯಾದ ಸಂದರ್ಭದಲ್ಲಿ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹಬ್ಬದ ಸೀಸನ್‍ ಆಗಿದ್ದರೂ, ನಿರೀಕ್ಷಿತ ಕಲೆಕ್ಷನ್‍ ಕಾಣಲಿಲ್ಲ. ಬಾಕ್ಸ್ ಆಫೀಸ್‍ ಗಳಿಕೆ ಟ್ರಾಕ್‍ ಮಾಡುವ ಸಕ್ನಿಕ್‍ ಡಾಟ್‍ಕಾಮ್‍ ಪ್ರಕಾರ, ಮಾರ್ಟಿನ್‍ ಚಿತ್ರವು ಮೊದಲ ಮೂರು ದಿನಗಳಲ್ಲಿ ಗಳಿಕೆ ಮಾಡಿರುವ ಮೊತ್ತ ಕೇವಲ 15.50 ಕೋಟಿ ರೂ. ಮಾತ್ರ. ಈ ಪೈಕಿ ಮೊದಲ ದಿನ ಚಿತ್ರವು 6.7 ಕೋಟಿ ರೂ. ಗಳಿಕೆ ಮಾಡಿದರೆ, ಎರಡನೇ ದಿನ 5.5 ಕೋಟಿ ರೂ. ಸಂಗ್ರಹ ಮಾಡಿದೆ. ಮೂರನೆಯ ದಿನ 3.35 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ ಮೂರು ದಿನಗಳಲ್ಲಿ ಚಿತ್ರವು ಇಡೀ ದೇಶಾದ್ಯಂತ ಗಳಿಕೆ ಮಾಡಿರುವ ಮೊತ್ತ ಕೇವಲ 15.5 ಕೋಟಿ ರೂ. ಮಾತ್ರ.

100 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದ್ದ ಮತ್ತು ಕನ್ನಡದ ಅತ್ಯಂತ ದೊಡ್ಡ ಬಜೆಟ್‍ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ಗ ‘ಮಾರ್ಟಿನ್‍ ಒಟ್ಟಾರೆ ಎಷ್ಟು ಗಳಿಕೆ ಮಾಡಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಅದೇ ಸಕ್ನಿಕ್ ಪ್ರಕಾರ, 10 ದಿನಗಳ ಅಂತ್ಯಕ್ಕೆ ಚಿತ್ರವು 20 ಕೋಟಿ 60 ಲಕ್ಷ ರೂ. ಗಳಿಕೆ ಮಾಡಿದೆಯಂತೆ. ಇನ್ನು. ಮೊದಲ ವಾರದ ಅಂತ್ಯಕ್ಕೆ ಚಿತ್ರವು 19.4 ಕೋಟಿ ರೂ. ಸಂಗ್ರಹಿಸಿತ್ತು ಎಂಬ ಮಾಹಿತಿ ಇದೆ.

ಕೆಲವು ದಿನಗಳ ಹಿಂದೆ ಚಿತ್ರದ ಸಂತೋಷ ಕೂಟ ನಡೆದ ಸಂದರ್ಭದಲ್ಲಿ ಚಿತ್ರದ ಕಲೆಕ್ಷನ್‍ ಕುರಿತು ಮಾತನಾಡಿದ್ದ ಧ್ರುವ ಸರ್ಜಾ, ‘ಚಿತ್ರದ ಕಲೆಕ್ಷನ್‍ ಈಗಲೇ ಗೊತ್ತಾಗುವುದಿಲ್ಲ. ಸದ್ಯ ಎರಡು ದಿನಗಳ ಕೆಲಕ್ಷನ್‍ ಅಷ್ಟೇ ಗೊತ್ತಾಗಿದೆ ಎಂದು ಹೇಳಿದ್ದರು.

ಮಾರ್ಟಿನ್‍ ಚಿತ್ರವನ್ನು ವಾಸವಿ ಕಂಬೈನ್ಸ್ನಡಿ ಉದಯ್‍ ಮೆಹ್ತಾ ನಿರ್ಮಾಣ ಮಾಡಿದ್ದಾರೆ. ಅರ್ಜುನ್‍ ಸರ್ಜಾ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಮಾಳವಿಕಾ ಅವಿನಾಶ್‍, ಅಚ್ಯುತ್‍ ಕುಮಾರ್‍ ಮುಂತಾದವರು ನಟಿಸಿದ್ದು, ಎ.ಪಿ.ಅರ್ಜುನ್‍ ನಿರ್ದೇಶನ ಮಾಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

12 mins ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

20 mins ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

27 mins ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

4 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

4 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…

4 hours ago