ಮನರಂಜನೆ

10 ದಿನಗಳಲ್ಲಿ 20 ಕೋಟಿ ರೂ. ಗಳಿಕೆ ಮಾಡಿದ ಮಾರ್ಟಿನ್

ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍ ಕಳೆದ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದೆ. ಕನ್ನಡದ ಅತೀ ಹೆಚ್ಚು ಬಜೆಟ್‍ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾರ್ಟಿನ್‍ ಬಿಡುಗಡೆಯಾದ 10 ದಿನಗಳಲ್ಲಿ ಕೊನೆಗೂ 20 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗಿದೆ.

ಮಾರ್ಟಿನ್‍ ಚಿತ್ರ ಬಿಡಗುಡೆಯಾದ ಸಂದರ್ಭದಲ್ಲಿ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹಬ್ಬದ ಸೀಸನ್‍ ಆಗಿದ್ದರೂ, ನಿರೀಕ್ಷಿತ ಕಲೆಕ್ಷನ್‍ ಕಾಣಲಿಲ್ಲ. ಬಾಕ್ಸ್ ಆಫೀಸ್‍ ಗಳಿಕೆ ಟ್ರಾಕ್‍ ಮಾಡುವ ಸಕ್ನಿಕ್‍ ಡಾಟ್‍ಕಾಮ್‍ ಪ್ರಕಾರ, ಮಾರ್ಟಿನ್‍ ಚಿತ್ರವು ಮೊದಲ ಮೂರು ದಿನಗಳಲ್ಲಿ ಗಳಿಕೆ ಮಾಡಿರುವ ಮೊತ್ತ ಕೇವಲ 15.50 ಕೋಟಿ ರೂ. ಮಾತ್ರ. ಈ ಪೈಕಿ ಮೊದಲ ದಿನ ಚಿತ್ರವು 6.7 ಕೋಟಿ ರೂ. ಗಳಿಕೆ ಮಾಡಿದರೆ, ಎರಡನೇ ದಿನ 5.5 ಕೋಟಿ ರೂ. ಸಂಗ್ರಹ ಮಾಡಿದೆ. ಮೂರನೆಯ ದಿನ 3.35 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ ಮೂರು ದಿನಗಳಲ್ಲಿ ಚಿತ್ರವು ಇಡೀ ದೇಶಾದ್ಯಂತ ಗಳಿಕೆ ಮಾಡಿರುವ ಮೊತ್ತ ಕೇವಲ 15.5 ಕೋಟಿ ರೂ. ಮಾತ್ರ.

100 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದ್ದ ಮತ್ತು ಕನ್ನಡದ ಅತ್ಯಂತ ದೊಡ್ಡ ಬಜೆಟ್‍ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ಗ ‘ಮಾರ್ಟಿನ್‍ ಒಟ್ಟಾರೆ ಎಷ್ಟು ಗಳಿಕೆ ಮಾಡಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಅದೇ ಸಕ್ನಿಕ್ ಪ್ರಕಾರ, 10 ದಿನಗಳ ಅಂತ್ಯಕ್ಕೆ ಚಿತ್ರವು 20 ಕೋಟಿ 60 ಲಕ್ಷ ರೂ. ಗಳಿಕೆ ಮಾಡಿದೆಯಂತೆ. ಇನ್ನು. ಮೊದಲ ವಾರದ ಅಂತ್ಯಕ್ಕೆ ಚಿತ್ರವು 19.4 ಕೋಟಿ ರೂ. ಸಂಗ್ರಹಿಸಿತ್ತು ಎಂಬ ಮಾಹಿತಿ ಇದೆ.

ಕೆಲವು ದಿನಗಳ ಹಿಂದೆ ಚಿತ್ರದ ಸಂತೋಷ ಕೂಟ ನಡೆದ ಸಂದರ್ಭದಲ್ಲಿ ಚಿತ್ರದ ಕಲೆಕ್ಷನ್‍ ಕುರಿತು ಮಾತನಾಡಿದ್ದ ಧ್ರುವ ಸರ್ಜಾ, ‘ಚಿತ್ರದ ಕಲೆಕ್ಷನ್‍ ಈಗಲೇ ಗೊತ್ತಾಗುವುದಿಲ್ಲ. ಸದ್ಯ ಎರಡು ದಿನಗಳ ಕೆಲಕ್ಷನ್‍ ಅಷ್ಟೇ ಗೊತ್ತಾಗಿದೆ ಎಂದು ಹೇಳಿದ್ದರು.

ಮಾರ್ಟಿನ್‍ ಚಿತ್ರವನ್ನು ವಾಸವಿ ಕಂಬೈನ್ಸ್ನಡಿ ಉದಯ್‍ ಮೆಹ್ತಾ ನಿರ್ಮಾಣ ಮಾಡಿದ್ದಾರೆ. ಅರ್ಜುನ್‍ ಸರ್ಜಾ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಮಾಳವಿಕಾ ಅವಿನಾಶ್‍, ಅಚ್ಯುತ್‍ ಕುಮಾರ್‍ ಮುಂತಾದವರು ನಟಿಸಿದ್ದು, ಎ.ಪಿ.ಅರ್ಜುನ್‍ ನಿರ್ದೇಶನ ಮಾಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

3 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

19 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

20 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

21 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

23 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

1 day ago