ಮನರಂಜನೆ

ಮೊದಲ ಎರಡು ದಿನ 12.70 ಕೋಟಿ ರೂ. ಗಳಿಕೆ ಮಾಡಿದ ‘ಮ್ಯಾಕ್ಸ್’

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಕ್ರಿಸ್ಮಸ್‍ ಹಬ್ಬದ ಪ್ರಯುಕ್ತ ಬುಧವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಭರ್ಜರಿ ಓಪನಿಂಗ್‍ ಸಿಕ್ಕಿರುವುದಷ್ಟೇ ಅಲ್ಲ, ಚಿತ್ರದ ಬಗ್ಗೆ ಒಳ್ಳೆಯ ಅಭಿಪ್ರಾಯ ಮತ್ತು ವಿಮರ್ಶೆಗಳು ಸಿಕ್ಕಿವೆ. ಎರಡೂವರೆ ವರ್ಷಗಳ ಹಿಂದೆ ಬಿಡುಗಡೆಯಾದ ‘ವಿಕ್ರಾಂತ್‍ ರೋಣ’ ಚಿತ್ರದ ನಂತರ ಸುದೀಪ್‍ ಯಾವೊಂದು ಚಿತ್ರದಲ್ಲೂ ಪೂರ್ಣಪ್ರಮಾಣ ನಾಯಕನಾಗಿ ಕಾಣಿಸಿಕೊಂಡಿರಲಿಲ್ಲ. ‘ಮ್ಯಾಕ್ಸ್’ ಚಿತ್ರದ ಮೂಲಕ ಅವರು ಮಾಸ್‍ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ವರ್ಷ ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ‘UI’ ಆಗಿತ್ತು. ಚಿತ್ರವು ಮೊದಲ ದಿನ 6.95 ಕೋಟಿ ರೂ.ನಷ್ಟು ಗಳಿಕೆ ಮಾಡಿತ್ತು. ಈಗ ’ಮ್ಯಾಕ್ಸ್’ ಮೊದಲ ದಿನ 8.7 ಕೋಟಿ ರೂ.ನಷ್ಟು ಗಳಿಕೆ ಮಾಡಿದೆ ಎಂದು ಬಾಕ್ಸ್ ಆಫೀಸ್‍ ಟ್ರಾಕರ್ ಸಚ್ನಿಕ್ ಡಾಟ್‍ಕಾಮ್‍ ಹೇಳಿದೆ. ಎರಡನೆಯ ದಿನ ನಾಲ್ಕು ಕೋಟಿ ರೂ. ಗಳಿಕೆಯಾಗಿದ್ದು, ಎರಡು ದಿನಗಳಿಂದ 12.70 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ.

‘ಮ್ಯಾಕ್ಸ್’ ಚಿತ್ರವು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿವೆ ಎಂಬ ಸುದ್ದಿ ಮೊದಲು ಕೇಳಿಬಂದಿತ್ತು. ಆದರೆ, ಚಿತ್ರವು ಕನ್ನಡವಲ್ಲದೆ, ತೆಲುಗು ಮತ್ತು ತಮಿಳಿನಲ್ಲಿ ಮಾತ್ರ ಬಿಡುಗಡೆಯಾಗುತ್ತಿದೆ. ಚಿತ್ರದ ಕನ್ನಡ ಅವತರಣಿಕೆಯು ಡಿ. 25ರಂದು ಬಿಡುಗಡೆಯಾಗಿದ್ದರೆ, ತೆಲುಗು ಮತ್ತು ತಮಿಳು ಅವತರಣಿಕೆಗಳು ಇಂದು (ಡಿ. 27) ಆಂಧ್ರ ಪ್ರದೇಶ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಬಿಡುಗಡೆಯಾಗುತ್ತಿದೆ.

‘ಮ್ಯಾಕ್ಸ್’ ಒಂದು ಆ್ಯಕ್ಷನ್‍ ಥ್ರಿಲ್ಲರ್‍ ಚಿತ್ರವಾಗಿದ್ದು, ಒಂದು ರಾತ್ರಿಯಲ್ಲಿ ನಡೆಯುವ ಕಥೆ ಈ ಚಿತ್ರದಲ್ಲಿದೆ. ಚಿತ್ರದಲ್ಲಿ ಸುದೀಪ್‍, ಅರ್ಜುನ್ ಮಹಾಕ್ಷಯ್‍ ಎಂಬ ಪೊಲೀಸ್ ‍ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಈ ಚಿತ್ರದಲ್ಲಿ ಅವರಿಗೆ ನಾಯಕಿ ಇಲ್ಲ.

‘ಮ್ಯಾಕ್ಸ್’ ಚಿತ್ರದಲ್ಲಿ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಸುನೀಲ್‍, ಸುಧಾ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ವಿ ಕ್ರಿಯೇಷನ್ಸ್ ಬ್ಯಾನರ್‍ನಡಿ ಕಲೈಪುಲಿ ಎಸ್ ಧನು ಮತ್ತು ಕಿಚ್ಚ ಕ್ರಿಯೇಷನ್ಸ್ ಸಂಸ್ಥೆಯಡಿ ಸುದೀಪ್‍ ನಿರ್ಮಿಸಿರುವ ಈ ಚಿತ್ರಕ್ಕೆ ವಿಜಯ್‍ ಕಾರ್ತಿಕೇಯ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಭೂಮಿಕಾ

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

1 hour ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

3 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

3 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

4 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

4 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

5 hours ago