ಮನರಂಜನೆ

ಮೊದಲ ಎರಡು ದಿನ 12.70 ಕೋಟಿ ರೂ. ಗಳಿಕೆ ಮಾಡಿದ ‘ಮ್ಯಾಕ್ಸ್’

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಕ್ರಿಸ್ಮಸ್‍ ಹಬ್ಬದ ಪ್ರಯುಕ್ತ ಬುಧವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಭರ್ಜರಿ ಓಪನಿಂಗ್‍ ಸಿಕ್ಕಿರುವುದಷ್ಟೇ ಅಲ್ಲ, ಚಿತ್ರದ ಬಗ್ಗೆ ಒಳ್ಳೆಯ ಅಭಿಪ್ರಾಯ ಮತ್ತು ವಿಮರ್ಶೆಗಳು ಸಿಕ್ಕಿವೆ. ಎರಡೂವರೆ ವರ್ಷಗಳ ಹಿಂದೆ ಬಿಡುಗಡೆಯಾದ ‘ವಿಕ್ರಾಂತ್‍ ರೋಣ’ ಚಿತ್ರದ ನಂತರ ಸುದೀಪ್‍ ಯಾವೊಂದು ಚಿತ್ರದಲ್ಲೂ ಪೂರ್ಣಪ್ರಮಾಣ ನಾಯಕನಾಗಿ ಕಾಣಿಸಿಕೊಂಡಿರಲಿಲ್ಲ. ‘ಮ್ಯಾಕ್ಸ್’ ಚಿತ್ರದ ಮೂಲಕ ಅವರು ಮಾಸ್‍ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ವರ್ಷ ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ‘UI’ ಆಗಿತ್ತು. ಚಿತ್ರವು ಮೊದಲ ದಿನ 6.95 ಕೋಟಿ ರೂ.ನಷ್ಟು ಗಳಿಕೆ ಮಾಡಿತ್ತು. ಈಗ ’ಮ್ಯಾಕ್ಸ್’ ಮೊದಲ ದಿನ 8.7 ಕೋಟಿ ರೂ.ನಷ್ಟು ಗಳಿಕೆ ಮಾಡಿದೆ ಎಂದು ಬಾಕ್ಸ್ ಆಫೀಸ್‍ ಟ್ರಾಕರ್ ಸಚ್ನಿಕ್ ಡಾಟ್‍ಕಾಮ್‍ ಹೇಳಿದೆ. ಎರಡನೆಯ ದಿನ ನಾಲ್ಕು ಕೋಟಿ ರೂ. ಗಳಿಕೆಯಾಗಿದ್ದು, ಎರಡು ದಿನಗಳಿಂದ 12.70 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ.

‘ಮ್ಯಾಕ್ಸ್’ ಚಿತ್ರವು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿವೆ ಎಂಬ ಸುದ್ದಿ ಮೊದಲು ಕೇಳಿಬಂದಿತ್ತು. ಆದರೆ, ಚಿತ್ರವು ಕನ್ನಡವಲ್ಲದೆ, ತೆಲುಗು ಮತ್ತು ತಮಿಳಿನಲ್ಲಿ ಮಾತ್ರ ಬಿಡುಗಡೆಯಾಗುತ್ತಿದೆ. ಚಿತ್ರದ ಕನ್ನಡ ಅವತರಣಿಕೆಯು ಡಿ. 25ರಂದು ಬಿಡುಗಡೆಯಾಗಿದ್ದರೆ, ತೆಲುಗು ಮತ್ತು ತಮಿಳು ಅವತರಣಿಕೆಗಳು ಇಂದು (ಡಿ. 27) ಆಂಧ್ರ ಪ್ರದೇಶ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಬಿಡುಗಡೆಯಾಗುತ್ತಿದೆ.

‘ಮ್ಯಾಕ್ಸ್’ ಒಂದು ಆ್ಯಕ್ಷನ್‍ ಥ್ರಿಲ್ಲರ್‍ ಚಿತ್ರವಾಗಿದ್ದು, ಒಂದು ರಾತ್ರಿಯಲ್ಲಿ ನಡೆಯುವ ಕಥೆ ಈ ಚಿತ್ರದಲ್ಲಿದೆ. ಚಿತ್ರದಲ್ಲಿ ಸುದೀಪ್‍, ಅರ್ಜುನ್ ಮಹಾಕ್ಷಯ್‍ ಎಂಬ ಪೊಲೀಸ್ ‍ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಈ ಚಿತ್ರದಲ್ಲಿ ಅವರಿಗೆ ನಾಯಕಿ ಇಲ್ಲ.

‘ಮ್ಯಾಕ್ಸ್’ ಚಿತ್ರದಲ್ಲಿ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಸುನೀಲ್‍, ಸುಧಾ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ವಿ ಕ್ರಿಯೇಷನ್ಸ್ ಬ್ಯಾನರ್‍ನಡಿ ಕಲೈಪುಲಿ ಎಸ್ ಧನು ಮತ್ತು ಕಿಚ್ಚ ಕ್ರಿಯೇಷನ್ಸ್ ಸಂಸ್ಥೆಯಡಿ ಸುದೀಪ್‍ ನಿರ್ಮಿಸಿರುವ ಈ ಚಿತ್ರಕ್ಕೆ ವಿಜಯ್‍ ಕಾರ್ತಿಕೇಯ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಭೂಮಿಕಾ

Recent Posts

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

7 mins ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

10 mins ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

15 mins ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

3 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

3 hours ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

3 hours ago