ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರವು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬುಧವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿರುವುದಷ್ಟೇ ಅಲ್ಲ, ಚಿತ್ರದ ಬಗ್ಗೆ ಒಳ್ಳೆಯ ಅಭಿಪ್ರಾಯ ಮತ್ತು ವಿಮರ್ಶೆಗಳು ಸಿಕ್ಕಿವೆ. ಎರಡೂವರೆ ವರ್ಷಗಳ ಹಿಂದೆ ಬಿಡುಗಡೆಯಾದ ‘ವಿಕ್ರಾಂತ್ ರೋಣ’ ಚಿತ್ರದ ನಂತರ ಸುದೀಪ್ ಯಾವೊಂದು ಚಿತ್ರದಲ್ಲೂ ಪೂರ್ಣಪ್ರಮಾಣ ನಾಯಕನಾಗಿ ಕಾಣಿಸಿಕೊಂಡಿರಲಿಲ್ಲ. ‘ಮ್ಯಾಕ್ಸ್’ ಚಿತ್ರದ ಮೂಲಕ ಅವರು ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ವರ್ಷ ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ‘UI’ ಆಗಿತ್ತು. ಚಿತ್ರವು ಮೊದಲ ದಿನ 6.95 ಕೋಟಿ ರೂ.ನಷ್ಟು ಗಳಿಕೆ ಮಾಡಿತ್ತು. ಈಗ ’ಮ್ಯಾಕ್ಸ್’ ಮೊದಲ ದಿನ 8.7 ಕೋಟಿ ರೂ.ನಷ್ಟು ಗಳಿಕೆ ಮಾಡಿದೆ ಎಂದು ಬಾಕ್ಸ್ ಆಫೀಸ್ ಟ್ರಾಕರ್ ಸಚ್ನಿಕ್ ಡಾಟ್ಕಾಮ್ ಹೇಳಿದೆ. ಎರಡನೆಯ ದಿನ ನಾಲ್ಕು ಕೋಟಿ ರೂ. ಗಳಿಕೆಯಾಗಿದ್ದು, ಎರಡು ದಿನಗಳಿಂದ 12.70 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ.
‘ಮ್ಯಾಕ್ಸ್’ ಚಿತ್ರವು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿವೆ ಎಂಬ ಸುದ್ದಿ ಮೊದಲು ಕೇಳಿಬಂದಿತ್ತು. ಆದರೆ, ಚಿತ್ರವು ಕನ್ನಡವಲ್ಲದೆ, ತೆಲುಗು ಮತ್ತು ತಮಿಳಿನಲ್ಲಿ ಮಾತ್ರ ಬಿಡುಗಡೆಯಾಗುತ್ತಿದೆ. ಚಿತ್ರದ ಕನ್ನಡ ಅವತರಣಿಕೆಯು ಡಿ. 25ರಂದು ಬಿಡುಗಡೆಯಾಗಿದ್ದರೆ, ತೆಲುಗು ಮತ್ತು ತಮಿಳು ಅವತರಣಿಕೆಗಳು ಇಂದು (ಡಿ. 27) ಆಂಧ್ರ ಪ್ರದೇಶ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಬಿಡುಗಡೆಯಾಗುತ್ತಿದೆ.
‘ಮ್ಯಾಕ್ಸ್’ ಒಂದು ಆ್ಯಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಒಂದು ರಾತ್ರಿಯಲ್ಲಿ ನಡೆಯುವ ಕಥೆ ಈ ಚಿತ್ರದಲ್ಲಿದೆ. ಚಿತ್ರದಲ್ಲಿ ಸುದೀಪ್, ಅರ್ಜುನ್ ಮಹಾಕ್ಷಯ್ ಎಂಬ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಈ ಚಿತ್ರದಲ್ಲಿ ಅವರಿಗೆ ನಾಯಕಿ ಇಲ್ಲ.
‘ಮ್ಯಾಕ್ಸ್’ ಚಿತ್ರದಲ್ಲಿ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಸುನೀಲ್, ಸುಧಾ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ವಿ ಕ್ರಿಯೇಷನ್ಸ್ ಬ್ಯಾನರ್ನಡಿ ಕಲೈಪುಲಿ ಎಸ್ ಧನು ಮತ್ತು ಕಿಚ್ಚ ಕ್ರಿಯೇಷನ್ಸ್ ಸಂಸ್ಥೆಯಡಿ ಸುದೀಪ್ ನಿರ್ಮಿಸಿರುವ ಈ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…