ಮನರಂಜನೆ

ಸಲ್ಮಾನ್ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿಗೆ ಲಾರೆನ್ಸ್‌ ಗ್ಯಾಂಗ್‌ನಿಂದ 4 ಲಕ್ಷ ರೂ ಸುಪಾರಿ!

ಮುಂಬೈ: ಇದೇ ತಿಂಗಳ 14ರಂದು‌ ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಮನೆ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ಮುಂಬೈ ಕ್ರೈಮ್‌ ಬ್ರ್ಯಾಂಚ್‌ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿದ್ದು, ತನಿಖೆ ಚುರುಕುಗೊಳಿಸಲಾಗಿದೆ.

ಸದ್ಯ ಶಾಕಿಂಗ್ ವಿಚಾರ ಎಂದರೆ ಗುಂಡು ಹಾರಿಸಿದವರಿಗೆ ಲಕ್ಷ ಲಕ್ಷ ರೂಪಾಯಿ ಹಣ ಸಿಕ್ಕಿತ್ತು. ಈ ಪ್ರಕರಣದ ಹಿಂದೆ ಅನ್ಮೋಲ್ ಬಿಷ್ಣೋಯ್ ಕೈವಾಡ ಇದೆ ಎನ್ನಲಾಗಿದೆ. ಬಂಧಿತ ಸಾಗರ್ ಪಾಲ್ ಹಾಗೂ ವಿಕ್ಕಿ ಗುಪ್ತಾ ಅನ್ಮೋಲ್ ಬಿಷ್ಣೋಯ್ ಜೊತೆ ಇಂಟರ್​ನೆಟ್ ಕಾಲ್ ಮೂಲ ಸಂಪರ್ಕದಲ್ಲಿ ಇದ್ದರು. ಇಬ್ಬರೂ ಆರೋಪಿಗಳಿಗೆ 1 ಲಕ್ಷ ರೂಪಾಯಿ ಅಡ್ವಾನ್ಸ್ ನೀಡಲಾಗಿತ್ತು. ಕೆಲಸ ಮುಗಿದ ಬಳಿಕ 3 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ಕೊಡಲಾಗಿತ್ತು ಎನ್ನಲಾಗಿದೆ.

ಸಲ್ಲು ಮನೆಯ ಮೇಲೆ ನಾಲ್ಕು ಬಾರಿ ಗುಂಡು ಹಾರಿಸಿ ಬಂಧಿತರು ಅಲ್ಲಿಂದ ಪರಾರಿಯಾಗಿದ್ದರು. ಆಟೋ, ಟ್ರೇನ್, ಕಾರು, ಬಸ್​ ಮೂಲಕ ಗುಜರಾತ್​ನ ಕಚ್ ತಲುಪಿದ್ದರು. ಅಲ್ಲಿಯವರೆಗೆ ಮೊಬೈಲ್​ ಸ್ವಿಚ್​ ಆಫ್ ಮಾಡಿಯೇ ಇಟ್ಟಿದ್ದರು. ಕಚ್​ನ ಭುಜ್​ಗೆ ಹೊಗಿ ಅನ್ಮೋಲ್ ಜೊತೆ ಮಾತನಾಡಲು ಮೊಬೈಲ್ ಸ್ವಿಚ್ ಆನ್ ಮಾಡಿದಾಗ ಇವರು ಸಿಕ್ಕಿ ಬಿದ್ದಿದ್ದಾರೆ.

ಸಲ್ಮಾನ್ ಖಾನ್ ಅವರು ಕೃಷ್ಣ ಮೃಗ ಹತ್ಯೆ ಮಾಡಿರುವ ಆರೋಪ ಹೊತ್ತಿದ್ದಾರೆ. ಬಿಷ್ಣೋಯ್ ಸಮುದಾಯದವರು ಕೃಷ್ಣ ಮೃಗವನ್ನು ದೇವರಂತೆ ನೋಡುತ್ತಾರೆ. ಈ ಕಾರಣಕ್ಕೆ ಸಲ್ಲು ಮೇಲೆ ಲಾರೆನ್ಸ್ ಗ್ಯಾಂಗ್​ನವರು ದ್ವೇಷ ಸಾಧಿಸುತ್ತಿದ್ದಾರೆ‌ ಎಂದು ಈ ಹಿಂದಿನಿಂದಲೂ ಹೇಳಲಾಗುತ್ತಿದೆ. ಸಲ್ಮಾನ್ ಖಾನ್ ವಿರುದ್ಧ ದ್ವೇಷ ಸಾಧಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಸದ್ಯ ಜೈಲಿನಲ್ಲಿದ್ದಾನೆ. ಅಲ್ಲಿಯೇ ಇದ್ದುಕೊಂಡು ಆತ ಸಲ್ಲು ವಿರುದ್ಧ ಸಂಚು ರೂಪಿಸುತ್ತಿದ್ದಾನೆ. ದಾಳಿ ನಂತರ ಸಲ್ಲು ಮನೆಯ ಬಳಿ ಭದ್ರತೆ ಹೆಚ್ಚಿಸಲಾಗಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

2 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

2 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

2 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

3 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

3 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

3 hours ago