ಮನರಂಜನೆ

ಸಲ್ಮಾನ್ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿಗೆ ಲಾರೆನ್ಸ್‌ ಗ್ಯಾಂಗ್‌ನಿಂದ 4 ಲಕ್ಷ ರೂ ಸುಪಾರಿ!

ಮುಂಬೈ: ಇದೇ ತಿಂಗಳ 14ರಂದು‌ ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಮನೆ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ಮುಂಬೈ ಕ್ರೈಮ್‌ ಬ್ರ್ಯಾಂಚ್‌ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿದ್ದು, ತನಿಖೆ ಚುರುಕುಗೊಳಿಸಲಾಗಿದೆ.

ಸದ್ಯ ಶಾಕಿಂಗ್ ವಿಚಾರ ಎಂದರೆ ಗುಂಡು ಹಾರಿಸಿದವರಿಗೆ ಲಕ್ಷ ಲಕ್ಷ ರೂಪಾಯಿ ಹಣ ಸಿಕ್ಕಿತ್ತು. ಈ ಪ್ರಕರಣದ ಹಿಂದೆ ಅನ್ಮೋಲ್ ಬಿಷ್ಣೋಯ್ ಕೈವಾಡ ಇದೆ ಎನ್ನಲಾಗಿದೆ. ಬಂಧಿತ ಸಾಗರ್ ಪಾಲ್ ಹಾಗೂ ವಿಕ್ಕಿ ಗುಪ್ತಾ ಅನ್ಮೋಲ್ ಬಿಷ್ಣೋಯ್ ಜೊತೆ ಇಂಟರ್​ನೆಟ್ ಕಾಲ್ ಮೂಲ ಸಂಪರ್ಕದಲ್ಲಿ ಇದ್ದರು. ಇಬ್ಬರೂ ಆರೋಪಿಗಳಿಗೆ 1 ಲಕ್ಷ ರೂಪಾಯಿ ಅಡ್ವಾನ್ಸ್ ನೀಡಲಾಗಿತ್ತು. ಕೆಲಸ ಮುಗಿದ ಬಳಿಕ 3 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ಕೊಡಲಾಗಿತ್ತು ಎನ್ನಲಾಗಿದೆ.

ಸಲ್ಲು ಮನೆಯ ಮೇಲೆ ನಾಲ್ಕು ಬಾರಿ ಗುಂಡು ಹಾರಿಸಿ ಬಂಧಿತರು ಅಲ್ಲಿಂದ ಪರಾರಿಯಾಗಿದ್ದರು. ಆಟೋ, ಟ್ರೇನ್, ಕಾರು, ಬಸ್​ ಮೂಲಕ ಗುಜರಾತ್​ನ ಕಚ್ ತಲುಪಿದ್ದರು. ಅಲ್ಲಿಯವರೆಗೆ ಮೊಬೈಲ್​ ಸ್ವಿಚ್​ ಆಫ್ ಮಾಡಿಯೇ ಇಟ್ಟಿದ್ದರು. ಕಚ್​ನ ಭುಜ್​ಗೆ ಹೊಗಿ ಅನ್ಮೋಲ್ ಜೊತೆ ಮಾತನಾಡಲು ಮೊಬೈಲ್ ಸ್ವಿಚ್ ಆನ್ ಮಾಡಿದಾಗ ಇವರು ಸಿಕ್ಕಿ ಬಿದ್ದಿದ್ದಾರೆ.

ಸಲ್ಮಾನ್ ಖಾನ್ ಅವರು ಕೃಷ್ಣ ಮೃಗ ಹತ್ಯೆ ಮಾಡಿರುವ ಆರೋಪ ಹೊತ್ತಿದ್ದಾರೆ. ಬಿಷ್ಣೋಯ್ ಸಮುದಾಯದವರು ಕೃಷ್ಣ ಮೃಗವನ್ನು ದೇವರಂತೆ ನೋಡುತ್ತಾರೆ. ಈ ಕಾರಣಕ್ಕೆ ಸಲ್ಲು ಮೇಲೆ ಲಾರೆನ್ಸ್ ಗ್ಯಾಂಗ್​ನವರು ದ್ವೇಷ ಸಾಧಿಸುತ್ತಿದ್ದಾರೆ‌ ಎಂದು ಈ ಹಿಂದಿನಿಂದಲೂ ಹೇಳಲಾಗುತ್ತಿದೆ. ಸಲ್ಮಾನ್ ಖಾನ್ ವಿರುದ್ಧ ದ್ವೇಷ ಸಾಧಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಸದ್ಯ ಜೈಲಿನಲ್ಲಿದ್ದಾನೆ. ಅಲ್ಲಿಯೇ ಇದ್ದುಕೊಂಡು ಆತ ಸಲ್ಲು ವಿರುದ್ಧ ಸಂಚು ರೂಪಿಸುತ್ತಿದ್ದಾನೆ. ದಾಳಿ ನಂತರ ಸಲ್ಲು ಮನೆಯ ಬಳಿ ಭದ್ರತೆ ಹೆಚ್ಚಿಸಲಾಗಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | 26 ಜನವರಿ,  ಶನಿವಾರ

20 seconds ago

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

12 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

12 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

13 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

14 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

14 hours ago