ಮನರಂಜನೆ

ಸಲ್ಮಾನ್ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿಗೆ ಲಾರೆನ್ಸ್‌ ಗ್ಯಾಂಗ್‌ನಿಂದ 4 ಲಕ್ಷ ರೂ ಸುಪಾರಿ!

ಮುಂಬೈ: ಇದೇ ತಿಂಗಳ 14ರಂದು‌ ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಮನೆ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ಮುಂಬೈ ಕ್ರೈಮ್‌ ಬ್ರ್ಯಾಂಚ್‌ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿದ್ದು, ತನಿಖೆ ಚುರುಕುಗೊಳಿಸಲಾಗಿದೆ.

ಸದ್ಯ ಶಾಕಿಂಗ್ ವಿಚಾರ ಎಂದರೆ ಗುಂಡು ಹಾರಿಸಿದವರಿಗೆ ಲಕ್ಷ ಲಕ್ಷ ರೂಪಾಯಿ ಹಣ ಸಿಕ್ಕಿತ್ತು. ಈ ಪ್ರಕರಣದ ಹಿಂದೆ ಅನ್ಮೋಲ್ ಬಿಷ್ಣೋಯ್ ಕೈವಾಡ ಇದೆ ಎನ್ನಲಾಗಿದೆ. ಬಂಧಿತ ಸಾಗರ್ ಪಾಲ್ ಹಾಗೂ ವಿಕ್ಕಿ ಗುಪ್ತಾ ಅನ್ಮೋಲ್ ಬಿಷ್ಣೋಯ್ ಜೊತೆ ಇಂಟರ್​ನೆಟ್ ಕಾಲ್ ಮೂಲ ಸಂಪರ್ಕದಲ್ಲಿ ಇದ್ದರು. ಇಬ್ಬರೂ ಆರೋಪಿಗಳಿಗೆ 1 ಲಕ್ಷ ರೂಪಾಯಿ ಅಡ್ವಾನ್ಸ್ ನೀಡಲಾಗಿತ್ತು. ಕೆಲಸ ಮುಗಿದ ಬಳಿಕ 3 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ಕೊಡಲಾಗಿತ್ತು ಎನ್ನಲಾಗಿದೆ.

ಸಲ್ಲು ಮನೆಯ ಮೇಲೆ ನಾಲ್ಕು ಬಾರಿ ಗುಂಡು ಹಾರಿಸಿ ಬಂಧಿತರು ಅಲ್ಲಿಂದ ಪರಾರಿಯಾಗಿದ್ದರು. ಆಟೋ, ಟ್ರೇನ್, ಕಾರು, ಬಸ್​ ಮೂಲಕ ಗುಜರಾತ್​ನ ಕಚ್ ತಲುಪಿದ್ದರು. ಅಲ್ಲಿಯವರೆಗೆ ಮೊಬೈಲ್​ ಸ್ವಿಚ್​ ಆಫ್ ಮಾಡಿಯೇ ಇಟ್ಟಿದ್ದರು. ಕಚ್​ನ ಭುಜ್​ಗೆ ಹೊಗಿ ಅನ್ಮೋಲ್ ಜೊತೆ ಮಾತನಾಡಲು ಮೊಬೈಲ್ ಸ್ವಿಚ್ ಆನ್ ಮಾಡಿದಾಗ ಇವರು ಸಿಕ್ಕಿ ಬಿದ್ದಿದ್ದಾರೆ.

ಸಲ್ಮಾನ್ ಖಾನ್ ಅವರು ಕೃಷ್ಣ ಮೃಗ ಹತ್ಯೆ ಮಾಡಿರುವ ಆರೋಪ ಹೊತ್ತಿದ್ದಾರೆ. ಬಿಷ್ಣೋಯ್ ಸಮುದಾಯದವರು ಕೃಷ್ಣ ಮೃಗವನ್ನು ದೇವರಂತೆ ನೋಡುತ್ತಾರೆ. ಈ ಕಾರಣಕ್ಕೆ ಸಲ್ಲು ಮೇಲೆ ಲಾರೆನ್ಸ್ ಗ್ಯಾಂಗ್​ನವರು ದ್ವೇಷ ಸಾಧಿಸುತ್ತಿದ್ದಾರೆ‌ ಎಂದು ಈ ಹಿಂದಿನಿಂದಲೂ ಹೇಳಲಾಗುತ್ತಿದೆ. ಸಲ್ಮಾನ್ ಖಾನ್ ವಿರುದ್ಧ ದ್ವೇಷ ಸಾಧಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಸದ್ಯ ಜೈಲಿನಲ್ಲಿದ್ದಾನೆ. ಅಲ್ಲಿಯೇ ಇದ್ದುಕೊಂಡು ಆತ ಸಲ್ಲು ವಿರುದ್ಧ ಸಂಚು ರೂಪಿಸುತ್ತಿದ್ದಾನೆ. ದಾಳಿ ನಂತರ ಸಲ್ಲು ಮನೆಯ ಬಳಿ ಭದ್ರತೆ ಹೆಚ್ಚಿಸಲಾಗಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

14 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

11 hours ago