ಮನರಂಜನೆ

‘45’ಕ್ಕೆ ಇನ್ನೂ ಏಳು ತಿಂಗಳು ಕಾಯಬೇಕು: ಆಗಸ್ಟ್ 15ಕ್ಕೆ ಬಿಡುಗಡೆ

ಶಿವರಾಜಕುಮಾರ್‍, ಉಪೇಂದ್ರ ಮತ್ತು ರಾಜ್‍ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’, ಈ ವರ್ಷದ ನಿರೀಕ್ಷಿತ ಚಿತ್ರಗಳಲ್ಲೊಂದು. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಈ ಮಧ್ಯೆ, ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಚಿತ್ರವು ಆಗಸ್ಟ್ 15ರಂದು ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಸೂರಜ್‍ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ರಮೇಶ್‍ ರೆಡ್ಡಿ ನಿರ್ಮಾಣದ ಮತ್ತು ಅರ್ಜುನ್‍ ಜನ್ಯ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ‘45’ ಚಿತ್ರದ ಚಿತ್ರೀಕರಣ ಕೆಲವು ತಿಂಗಳುಗಳ ಹಿಂದೆ ಮುಗಿದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿದ್ದವು. ಟೊರೊಂಟೋದ ಖ್ಯಾತ VFX ಸಂಸ್ಥೆಯಾದ MARZನಲ್ಲಿ VFX ಕೆಲಸಗಳು ನಡೆಯುತ್ತಿವೆ. ಹೀಗಿರುವಾಗಲೇ, ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಈ ಬಾರಿ ಶುಕ್ರವಾರದಂದು ಆಗಸ್ಟ್ 15 ಬರಲಿದೆ. ಒಟ್ಟಿಗೆ ಮೂರು ದಿನಗಳ ರಜೆ ಸಿಗುವುದರಿಂದ, ಅಂದು ಚಿತ್ರದ ಬಿಡುಗಡೆ ಮಾಡಲಾಗುತ್ತಿದೆ. ಆದರೆ, ಅದಕ್ಕೆ ಇನ್ನೂ ಏಳು ತಿಂಗಳು ಕಾಯಬೇಕು. ಕನ್ನಡದಲ್ಲಿ ಈ ವರ್ಷದ ಮೊದಲ ಕೆಲವು ತಿಂಗಳುಗಳಲ್ಲಿ ಯಾವುದೇ ನಿರೀಕ್ಷಿತ ಮತ್ತು ದೊಡ್ಡ ಬಜೆಟ್‍ನ ಚಿತ್ರ ಬಿಡುಗಡೆಗಿಲ್ಲ. ಇದ್ದಿದ್ದು ‘45’ ಮತ್ತು ‘ಕೆಡಿ – ದಿ ಡೆವಿಲ್‍’ ಚಿತ್ರಗಳು ಮಾತ್ರ. ಇದೀಗ, ‘45’ ಚಿತ್ರವು ಆಗಸ್ಟ್‍ 15ರಂದು ಬಿಡುಗಡೆ ಎಂದು ಘೋಷಿಸಲಾಗಿದೆ. ಇನ್ನು, ‘ಕೆಡಿ – ದಿ ಡೆವಿಲ್‍’ ಚಿತ್ರ ಯಾವಾಗ ಬರುತ್ತದೋ ಎಂಬ ಕುತೂಹಲ ಎಲ್ಲರಿಗೂ ಇದೆ.

‘45’ ಚಿತ್ರದ ಜೊತೆಗೆ ಆಗಸ್ಟ್ 15ರಂದು ರಜನಿಕಾಂತ್‍ ಅಭಿನಯದ ‘ಕೂಲಿ’, ಹೃತಿಕ್‍ ರೋಶನ್‍ ಮತ್ತು ಜ್ಯೂನಿಯರ್‍ ಎನ್‍.ಟಿ.ಆರ್‍ ಅಭಿನಯದ ‘ವಾರ್‍ 2’ ಮತ್ತು ಸನ್ನಿ ಡಿಯೋಲ್‍ ಅಭಿನಯದ ‘ಲಾಹೋರ್‍ – 1947’ ಚಿತ್ರಗಳು ಸಹ ಬಿಡುಗಡೆಯಾಗಲಿವೆ ಎಂಬ ಸುದ್ದಿ ಇದೆ. ಆದರೆ, ಈ ಮೂರೂ ಚಿತ್ರಗಳ ಬಿಡುಗಡೆ ದಿನಾಂಕವನ್ನು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ.

‘45’ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ, ರಾಜ್‍ ಬಿ ಶೆಟ್ಟಿ ಜೊತೆಗೆ ಕೌಸ್ತುಭ ಮಣಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ಮತ್ತು ಸತ್ಯ ಹೆಗಡೆ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…

3 mins ago

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

21 mins ago

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

5 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

5 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

5 hours ago