ಮನರಂಜನೆ

ಪಕ್ಕದ ರಾಜ್ಯಗಳಿಗೆ ಹೊರಡಲು ‘45’ ಚಿತ್ರತಂಡ ತಯಾರಿ; ಯಾಕೆ?

ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರದ ಟೀಸರ್, ಎರಡು ವಾರಗಳ ಹಿಂದೆ ಯುಗಾದಿ ಹಬ್ಬದ ದಿನ ಬಿಡುಗಡೆಯಾಗಿತ್ತು. ಈ ಟೀಸರ್‍ಗೆ ಸಿಕ್ಕ ಪ್ರತಿಕ್ರಿಯೆಗೆ ಖುಷಿಯಾಗಿರುವ ಚಿತ್ರತಂಡ, ಬೇರೆ ರಾಜ್ಯಗಳ ಜನರಿಗೆ ಥ್ಯಾಂಕ್ಸ್ ಹೇಳುವುದರ ಜೊತೆಗೆ, ಚಿತ್ರದ ಪ್ರಚಾರ ಮಾಡಲು ಸಜ್ಜಾಗಿದೆ.

ಟೀಸರ್‌ಗೆ ದೊರಕಿರುವ ಮೆಚ್ಚುಗೆಗೆ ಖುಷಿಯಾಗಿರುವ ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ, ಏಪ್ರಿಲ್ 15 ಹಾಗೂ 16 ಪಕ್ಕದ ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿ ಪತ್ರಿಕಾಗೋಷ್ಠಿಗಳನ್ನು ನಡೆಸುವ ಮೂಲಕ ಎಲ್ಲಾ ರಾಜ್ಯಗಳ ಅಭಿಮಾನಿಗಳಿಗೆ ಧನ್ಯವಾದ ತಿಳಿಸಲಿದ್ದಾರೆ.

ಏಪ್ರಿಲ್ 15ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮುಂಬೈನ PVR Juhu ನಲ್ಲಿ ಪತ್ರಿಕಾಗೋಷ್ಠಿ ನಡೆಸುವ ಚಿತ್ರತಂಡ, ಅಂದು ಸಂಜೆ 7 ಗಂಟೆಗೆ ಹೈದರಾಬಾದ್‍ನ ಬಂಜಾರ ಹಿಲ್ಸ್ ನಲ್ಲಿರುವ PVR Cineplexನಲ್ಲಿ ಸುದ್ದಿಗೋಷ್ಠಿ ನಡೆಸಲಿದೆ. ಮರುದಿನ ಏಪ್ರಿಲ್ 16 ಬುಧವಾರ ಬೆಳಿಗ್ಗೆ 11 ಗಂಟೆಗೆ ಚೆನ್ನೈನ ಸತ್ಯಂ ಸಿನಿಮಾಸ್ ನಲ್ಲಿ ಹಾಗೂ ಅಂದು ಸಂಜೆ 7 ಗಂಟೆಗೆ ಕೇರಳದ ಕೊಚ್ಚಿ PVR Forumನಲ್ಲಿ ‘45’ ಚಿತ್ರದ ಪತ್ರಿಕಾಗೋಷ್ಠಿ ನಡೆಯಲಿದೆ.

ಈ ಚಿತ್ರದಲ್ಲಿ ಕಮರ್ಷಿಯಲ್ ಅಂಶಗಳ ಮೂಲಕ ಫಿಲಾಸಫಿ ಹೇಳುವ ಪ್ರಯತ್ನ ಮಾಡಲಾಗಿದೆಯಂತೆ. ಚಿತ್ರದಲ್ಲಿ ಶೇ. 40ರಷ್ಟು ಗ್ರಾಫಿಕ್ಸ್ ಇರಲಿದೆ. ಟೊರೊಂಟೋದ ಖ್ಯಾತ VFX ಸಂಸ್ಥೆಯಾದ MARZನಲ್ಲಿ ಗ್ರಾಫಿಕ್ಸ್ ಕೆಲಸ ನಡೆಯುತ್ತಿದ್ದು, ಆಗಸ್ಟ್ 15ರಂದು ಪ್ಯಾನ್‍ ಇಂಡಿಯಾ ಚಿತ್ರವಾಗಿ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಸೂರಜ್‍ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ರಮೇಶ್‍ ರೆಡ್ಡಿ ನಿರ್ಮಾಣದ ‘45’ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ, ರಾಜ್‍ ಬಿ ಶೆಟ್ಟಿ ಜೊತೆಗೆ ಕೌಸ್ತುಭ ಮಣಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ಮತ್ತು ಸತ್ಯ ಹೆಗಡೆ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

9 mins ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

45 mins ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪತ್ನಿ, ಪುತ್ರನಿಗೆ ಎಸ್‌ಐಟಿ ಬುಲಾವ್‌

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…

2 hours ago

ಬೈಕ್‌ ಟ್ಯಾಕ್ಸಿಗೆ ಒಪ್ಪಿಗೆ: ಸುಪ್ರೀಂಕೋರ್ಟ್‌ ಮೊರೆ ಹೋಗಲಿದೆ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್‌ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್‌ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು.…

3 hours ago

ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಮಂಡಿಸಿದೆ: ರೈತ ಹಳ್ಳಿಕೆರೆಹುಂಡಿ ಭಾಗ್ಯರಾಜ್

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್‌ ಆಗಿದೆ…

3 hours ago