ಮನರಂಜನೆ

ಡಿಸೆಂಬರ್ 25ರಂದು ಬಿಡುಗಡೆಯಾಗಲಿದೆ ‘45’

ಗ್ರಾಫಿಕ್ಸ್ ಕೆಲಸಗಳು ವಿಳಂಬವಾಗುತ್ತಿರುವುದರಿಂದ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಬಿಡುಗಡೆ ವಿಳಂಬವಾಗುತ್ತಿದೆ ಎಂದು ಚಿತ್ರಕ್ಕೆ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ MARZ ಸಂಸ್ಥೆಯವರೇ ಹೇಳಿಕೊಂಡಿದ್ದರು. ಹಾಗಾದರೆ, ಚಿತ್ರದ ಬಿಡುಗಡೆ ಯಾವಾಗ? ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಚಿತ್ರವನ್ನು ಡಿ. 25ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತೀರ್ಮಾನಿಸಿದೆ.

ಕೆಲವು ತಿಂಗಳ ಹಿಂದೆ ಚಿತ್ರತಂಡವು, ವಿಶೇಷ ಟೀಸರ್ ಮೂಲಕ ಚಿತ್ರವು ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ ಎಂಬ ವಿಷಯವನ್ನು ಹಂಚಿಕೊಂಡಿತ್ತು. ಕನ್ನಡದ ಮೂರು ಜನ ಹೆಸರಾಂತ ನಾಯಕನಟರ ಅಭಿಮಾನಿಗಳು ಈ ಸುದ್ದಿ ಕೇಳಿ ಸಂತಸಗೊಂಡು, ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದರು. ಆದರೆ, ಅಂದುಕೊಂಡಂತೆ ಚಿತ್ರ ಬಿಡುಗಡೆಯಾಗಲೇ ಇಲ್ಲ. ಅದಕ್ಕೆ ಕಾರಣ ಗ್ರಾಫಿಕ್ಸ್ ಕೆಲಸಗಳು.

ಕೆನಡಾದ ಪ್ರತಿಷ್ಠಿತ MARZ ಸಂಸ್ಥೆ ಈ ಚಿತ್ರಕ್ಕೆ VFX ಕೆಲಸ ಮಾಡುತ್ತಿದ್ದು, ಈ ಸಂಸ್ಥೆ VFX ಮಾಡುತ್ತಿರುವ ಮೊದಲ ಕನ್ನಡ ಚಿತ್ರವಿದು. ಈ ಚಿತ್ರಕ್ಕೆ ಹಾಲಿವುಡ್‍ನ ಖ್ಯಾತ ತಂತ್ರಜ್ಞರಿಂದ ಗ್ರಾಫಿಕ್ಸ್ ಕೆಲಸ ನಡೆಯುತ್ತಿದೆ. ಚಿತ್ರದಲ್ಲಿ ಶೇ. 40ರಷ್ಟು ಗ್ರಾಫಿಕ್ಸ್ ಕೆಲಸವಿದ್ದು, ಅದಿನ್ನೂ ಪೂರ್ತಿಯಾಗಿ ಮುಗಿಯದ ಹಿನ್ನೆಲೆಯಲ್ಲಿ ಚಿತ್ರವು ಅಂದುಕೊಂಡಂತೆ ಬಿಡುಗಡೆಯಾಗಿಲ್ಲ.

ಈ ಕುರಿತು ಮಾತನಾಡಿರುವ MARZ ಸಂಸ್ಥೆಯ ಮುಖ್ಯಸ್ಥ ಹಾಗೂ ತಂತ್ರಜ್ಞ ಯಶ್ ಗೌಡ, ‘ಗ್ರಾಫಿಕ್ಸ್ ಕೆಲಸಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದರಿಂದ ಈ ಚಿತ್ರ ಆಗಸ್ಟ್ 15 ರಂದು ಬಿಡುಗಡೆ ಮಾಡಲು ಆಗಲಿಲ್ಲ. ಸೆಪ್ಟೆಂಬರ್ 16ರ ಒಳಗೆ VFX ಕೆಲಸ ಮುಕ್ತಾಯವಾಗಲಿದೆ. ಆನಂತರ ಇನ್ನೊಂದು ತಿಂಗಳು ಕೆಲವು ಕೆಲಸಗಳಿರುತ್ತವೆ. ಅಕ್ಟೋಬರ್ 16ರ ಒಳಗೆ ಚಿತ್ರ ತೆರೆಗೆ ಬರಲು ಸಿದ್ದವಾಗುತ್ತದೆ. ಚಿತ್ರ ಬಿಡುಗಡೆ ಸ್ವಲ್ಪ ತಡವಾದರೂ ಅತ್ಯುತ್ತಮ ತಂತ್ರಜ್ಞಾನದಿಂದ ಕೂಡಿರುವ ಚಿತ್ರವಾಗಿ ‘45’ ನಿಮ್ಮ ಮುಂದೆ ಬರಲಿದೆ’ ಎಂದು ಹೇಳಿದ್ದಾರೆ.

ಅಕ್ಟೋಬರ್ ತಿಂಗಳಲ್ಲಿ ಚಿತ್ರ ಕೈಗೆ ಸಿಕ್ಕ ನಂತರ ಪ್ರಚಾರ ಮಾಡಿ, ಡಿ. 25ರಂದು ಬಿಡುಗಡೆ ಮಾಡುವುದಾಗಿ ನಿರ್ಮಾಪಕ ರಮೇಶ್‍ ರೆಡ್ಡಿ ಮತ್ತು ನಿರ್ದೇಶಕ ಅರ್ಜುನ್‍ ಜನ್ಯ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

20 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

20 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

21 hours ago