ಮನರಂಜನೆ

ಒಂದೇ ಚಿತ್ರದಲ್ಲಿ 50 ಪಾತ್ರಗಳು; ಹೊಸ ದಾಖಲೆಯತ್ತ ಕಮಲ್‌ ರಾಜ್

ಈ ಹಿಂದೆ ‘ದಿ ಸೂಟ್‍’ ಎಂಬ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದ ಕಮಲ್‍ ರಾಜ್‍, ಈಗ ಒಟ್ಟಿಗೇ ಮೂರು ಚಿತ್ರಗಳನ್ನು ಆರಂಭಿಸಿದ್ದಾರೆ. ‘ಮೊಹಬ್ಬತ್ ಜಿಂದಾಬಾದ್’, ‘ಟಾಸ್ಕ್’ ಹಾಗೂ ‘ನಾಳೆ ನಮ್ಮ ಭರವಸೆ’… ಈ ಮೂರೂ ಚಿತ್ರಗಳಲ್ಲಿ ಅಭಿನಯಿಸುವ ಜೊತೆಗೆ ಕಮಲ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಅವರೇ ಚಿತ್ರ ನಿರ್ಮಾಣ ಸಹ ಮಾಡುತ್ತಿದ್ದಾರೆ.

ಈ ಪೈಕಿ ‘ಮೊಹಬ್ಬತ್ ಜಿಂದಾಬಾದ್’ ಹಿಂದಿ ಚಿತ್ರವಂತೆ. ‘ನಾಳೆ ನಮ್ಮ ಭರವಸೆ’ ಚಿತ್ರವನ್ನು 10 ಜನ ನಿರ್ದೇಶನ ಮಾಡಲಿದ್ದು, ಇದರಲ್ಲಿ ನಾಯಕ ಕಮಲ್‌ ರಾಜ್ 50 ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ ಈ ಮೂರೂ ಚಿತ್ರಗಳ ಶೀರ್ಷಿಕೆ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆದಿದೆ. ಡಾ.ವಿ.ನಾಗೇಂದ್ರ ಪ್ರಸಾದ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಹಿರಿಯ ನಿರ್ದೇಶಕರಾದ ಸಾಯಿ ಪ್ರಕಾಶ್, ರವಿ ಶ್ರೀವತ್ಸ, ನಟಿ ಪ್ರಿಯಾಂಕ ಉಪೇಂದ್ರ ಅತಿಥಿಗಳಾಗಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಕಮಲ್‌ ರಾಜ್, ‘ಈ ಮೊದಲು ‘ದಿ ಸೂಟ್’ ಚಿತ್ರದಲ್ಲಿ ನಟಿಸಿದ್ದೆ. ‘ನಾಳೆ ನಮ್ಮ ಭರವಸೆ’ ಚಿತ್ರದಲ್ಲಿ 50 ಪಾತ್ರಗಳನ್ನು ಮಾಡುತ್ತಿದ್ದೇನೆ. 75 ದೃಶ್ಯಗಳಿರುವ ಈ ಚಿತ್ರವನ್ನು ಹತ್ತು ಜನ ನಿರ್ದೇಶಿಸಲಿದ್ದಾರೆ. ಇನ್ನು, ‘ಮೊಹಬ್ಬತ್ ಜಿಂದಾಬಾದ್’ ಚಿತ್ರದಲ್ಲಿ 14 ಹಾಡುಗಳಿದ್ದು, ಬಾಲಿವುಡ್‌ನ ಹಲವು ಕಲಾವಿದರು ನಟಿಸುತ್ತಿದ್ದಾರೆ. ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಯಲ್ಲಿ ಈ ಚಿತ್ರ ತಯಾರಾಗಲಿದೆ. ಈಗಾಗಲೇ ಮೂರು ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಡಿಸೆಂಬರ್ ವೇಳೆಗೆ ಬಿಡುಗಡೆ ಮಾಡುವ ಯೋಜನೆ ಇದೆ’ ಎಂದರು.

‘ಟಾಸ್ಕ್’ ಚಿತ್ರವನ್ನು ಐದು ಜನ ನಿರ್ದೇಶನ ಮಾಡಲಿದ್ದಾರೆ. ಆ ಪೈಕಿ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಸಹ ಒಂದು ಕಥೆಯನ್ನು ನಿರ್ದೇಶಿಸಲಿದ್ದಾರಂತೆ. ‘ನನ್ನ ‘ಸೆಪ್ಟೆಂಬರ್‍ 10’ ಚಿತ್ರದ ವಿತರಣೆಗೆ ಕಮಲ್ ಕೈಜೋಡಿಸಿದ್ದಾರೆ. ಅವರು ರಿಯಲ್ ಎಸ್ಟೇಟ್‌ನಲ್ಲಿ ಗುರುತಿಸಿಕೊಂಡವರು. ಈಗ ಸಿನಿಮಾದಲ್ಲಿ ಏನಾದರೂ ಮಾಡಲು ಬಂದಿದ್ದಾರೆ. ನಾನು 105 ಚಿತ್ರ ಮಾಡಿದವನಾದರೂ, ಐದು ನಿರ್ದೇಶಕರಲ್ಲಿ ಒಬ್ಬನಾಗಿರಲು ಒಪ್ಪಿದೆ. ಇದು ಕೊಟ್ಟು ತೆಗೆದುಕೊಳ್ಳುವ ಪಾಲಿಸಿ ಅಷ್ಟೇ’ ಎಂದರು.

ಆಂದೋಲನ ಡೆಸ್ಕ್

Recent Posts

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

14 mins ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

48 mins ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

1 hour ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

2 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

2 hours ago

ಕಿಡ್ನಿ ಮರು ಜೋಡಣೆಗೆ ಸಹಾಯ ಹಸ್ತ ಕೋರಿದ ಬಡ ಕುಟುಂಬ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…

2 hours ago