ಮನರಂಜನೆ

90ರ ದಶಕದ ಕಡಲ ತೀರದ ಕಥೆ ‘ಆಸ್ಟಿನ್‍ನ ಮಹಾನ್‍ ಮೌನ’…

ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ 90ರ ದಶಕದ ಹಲವು ಕಥೆಗಳು ತೆರೆಯ ಮೇಲೆ ಬಂದಿದೆ. ‘1990ಸ್‍’, ‘ವಿಷ್ಣುಪ್ರಿಯಾ’ ಮುಂತಾದ ಚಿತ್ರಗಳು 90ರ ದಶಕದ ಕಾಲಘಟ್ಟದ ಕಥೆಗಳನ್ನು ಹೇಳುತ್ತವೆ. ಈ ಸಾಲಿಗೆ ಇದೀಗ ‘ಆಸ್ಟಿನ್‍ನ ಮಹಾನ್‍ ಮೌನ’ ಎಂಬ ಹೊಸ ಚಿತ್ರವೂ ಸೇರಿದೆ.

ವಿನಯ್ ಕುಮಾರ್ ವೈದ್ಯನಾಥನ್ ನಟಿಸಿ, ನಿರ್ಮಿಸುವುದರ ಜೊತೆಗೆ ನಿರ್ದೇಶನ ಮಾಡಿರುವಂತಹ ‘ಆಸ್ಟಿನ್‍ನ ಮಹಾನ್‍ ಮೌನ’ ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬಿಡುಗಡೆ ನಡೆಯಿತು.

ಒಂದಿಷ್ಟು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರವ ವಿನಯ್‍, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಈ ಚಿತ್ರದ ಕುರಿತು ಮಾತನಾಡುವ ವಿನಯ್‍, ‘ನಾನು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಮುಗಿಸಿದ ನಂತರ ಚಿತ್ರರಂಗದ ಬಗೆ ಆಸಕ್ತಿ ಇದ್ದಿದ್ದರಿಂದ, ಹಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದೆ. ಪುನೀತ್ ರಾಜಕುಮಾರ್ ಅಭಿನಯದ ಚಿತ್ರದಲ್ಲೂ ಕೆಲಸ ಮಾಡಿದ್ದೆ. ನಂತರ ಕಿರು ಚಿತ್ರಗಳನ್ನು ನಿರ್ದೇಶನ ಮಾಡುತ್ತಾ ತಾಂತ್ರಿಕ ವಿಭಾಗದಲ್ಲಿ ಹೆಚ್ಚು ಅನುಭವವನ್ನು ಪಡೆದು ಕೊಂಡಿದ್ದೇನೆ. ಸುಮಾರು 13 ವರ್ಷಗಳ ನಂತರ ನನ್ನ ಕನಸು ಈಗ ನನಸಾಗುತ್ತಿದೆ’ ಎಂದರು.

ಈ ಚಿತ್ರದ ಶೀರ್ಷಿಕೆ ಕಥೆಗೆ ಸೂಕ್ತವಾಗಿದ್ದು ಎನ್ನುವ ವಿನಯ್‍, ‘ಹಾಗಾಗಿ ಅದನ್ನೇ ಇಟ್ಟಿದ್ದೇನೆ. ಇದೊಂದು ಎಮೋಷನಲ್, ಲವ್, ಥ್ರಿಲ್ಲಿಂಗ್ ಕಥೆಯನ್ನು ಒಳಗೊಂಡಿದೆ. ಆಸ್ಟಿನ್ ಎನ್ನುವುದು ನಾಯಕನ ಪಾತ್ರದ ಹೆಸರು. ಈ ಚಿತ್ರದಲ್ಲಿ ನನ್ನದು ಎರಡು ಶೇಡ್‍ಗಳಲ್ಲಿ ಬರುವಂತಹ ಪಾತ್ರ. ಈ ಚಿತ್ರದಲ್ಲಿ ಇರುವ ಎಲ್ಲಾ ಪಾತ್ರಗಳು ಕ್ರಿಶ್ಚಿಯನ್ ಧರ್ಮದ್ದಾಗಿದ್ದು, 90ರ ಕಾಲಘಟ್ಟದಲ್ಲಿ ನಡೆಯುವ ಕಡಲ ಭಾಗದ ಒಂದು ಕುಟುಂಬದ ಕಥಾನಕವನ್ನು ಒಳಗೊಂಡಿದೆ. 2023ರಲ್ಲಿ ಆರಂಭಗೊಂಡ ಈ ಚಿತ್ರ ಮೈಸೂರು, ಹೊನ್ನಾವರ ಹಾಗೂ ಚಿಕ್ಕಮಗಳೂರು ಸೇರಿದಂತೆ ಸುಮಾರು 23 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಚಿತ್ರ ಸೆಪ್ಟಂಬರ್ 5ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ’ ಎಂದರು.

ವಿನಯ್‍ಗೆ ನಾಯಕಿಯಾಗಿ ರಿಷಾ ಗೌಡ ಮತ್ತು ಪ್ರಕೃತಿ ಪ್ರಸಾದ್‍ ನಟಿಸಿದ್ದಾರೆ. ವಿಶೇಷವೆಂದರೆ, ಇಬ್ಬರೂ ಮೈಸೂರಿನವರು. ಮಿಕ್ಕಂತೆ ಬಲ ರಾಜವಾಡಿ, ರಾಘು ರಾಮನಕೊಪ್ಪ, ಜಗಪ್ಪ, ಸ್ವಾತಿ ಸೇರಿದಂತೆ ಹಲವಾರು ಕಲಾವಿದರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ರಾಜಕಾಂತ್ ಛಾಯಾಗ್ರಹಣ, ವಿಶ್ವಿ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

1 hour ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

2 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

3 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

3 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

4 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

4 hours ago