asteen mahan mounaasteen mahan mouna
ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ 90ರ ದಶಕದ ಹಲವು ಕಥೆಗಳು ತೆರೆಯ ಮೇಲೆ ಬಂದಿದೆ. ‘1990ಸ್’, ‘ವಿಷ್ಣುಪ್ರಿಯಾ’ ಮುಂತಾದ ಚಿತ್ರಗಳು 90ರ ದಶಕದ ಕಾಲಘಟ್ಟದ ಕಥೆಗಳನ್ನು ಹೇಳುತ್ತವೆ. ಈ ಸಾಲಿಗೆ ಇದೀಗ ‘ಆಸ್ಟಿನ್ನ ಮಹಾನ್ ಮೌನ’ ಎಂಬ ಹೊಸ ಚಿತ್ರವೂ ಸೇರಿದೆ.
ವಿನಯ್ ಕುಮಾರ್ ವೈದ್ಯನಾಥನ್ ನಟಿಸಿ, ನಿರ್ಮಿಸುವುದರ ಜೊತೆಗೆ ನಿರ್ದೇಶನ ಮಾಡಿರುವಂತಹ ‘ಆಸ್ಟಿನ್ನ ಮಹಾನ್ ಮೌನ’ ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬಿಡುಗಡೆ ನಡೆಯಿತು.
ಒಂದಿಷ್ಟು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರವ ವಿನಯ್, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಈ ಚಿತ್ರದ ಕುರಿತು ಮಾತನಾಡುವ ವಿನಯ್, ‘ನಾನು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಮುಗಿಸಿದ ನಂತರ ಚಿತ್ರರಂಗದ ಬಗೆ ಆಸಕ್ತಿ ಇದ್ದಿದ್ದರಿಂದ, ಹಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದೆ. ಪುನೀತ್ ರಾಜಕುಮಾರ್ ಅಭಿನಯದ ಚಿತ್ರದಲ್ಲೂ ಕೆಲಸ ಮಾಡಿದ್ದೆ. ನಂತರ ಕಿರು ಚಿತ್ರಗಳನ್ನು ನಿರ್ದೇಶನ ಮಾಡುತ್ತಾ ತಾಂತ್ರಿಕ ವಿಭಾಗದಲ್ಲಿ ಹೆಚ್ಚು ಅನುಭವವನ್ನು ಪಡೆದು ಕೊಂಡಿದ್ದೇನೆ. ಸುಮಾರು 13 ವರ್ಷಗಳ ನಂತರ ನನ್ನ ಕನಸು ಈಗ ನನಸಾಗುತ್ತಿದೆ’ ಎಂದರು.
ಈ ಚಿತ್ರದ ಶೀರ್ಷಿಕೆ ಕಥೆಗೆ ಸೂಕ್ತವಾಗಿದ್ದು ಎನ್ನುವ ವಿನಯ್, ‘ಹಾಗಾಗಿ ಅದನ್ನೇ ಇಟ್ಟಿದ್ದೇನೆ. ಇದೊಂದು ಎಮೋಷನಲ್, ಲವ್, ಥ್ರಿಲ್ಲಿಂಗ್ ಕಥೆಯನ್ನು ಒಳಗೊಂಡಿದೆ. ಆಸ್ಟಿನ್ ಎನ್ನುವುದು ನಾಯಕನ ಪಾತ್ರದ ಹೆಸರು. ಈ ಚಿತ್ರದಲ್ಲಿ ನನ್ನದು ಎರಡು ಶೇಡ್ಗಳಲ್ಲಿ ಬರುವಂತಹ ಪಾತ್ರ. ಈ ಚಿತ್ರದಲ್ಲಿ ಇರುವ ಎಲ್ಲಾ ಪಾತ್ರಗಳು ಕ್ರಿಶ್ಚಿಯನ್ ಧರ್ಮದ್ದಾಗಿದ್ದು, 90ರ ಕಾಲಘಟ್ಟದಲ್ಲಿ ನಡೆಯುವ ಕಡಲ ಭಾಗದ ಒಂದು ಕುಟುಂಬದ ಕಥಾನಕವನ್ನು ಒಳಗೊಂಡಿದೆ. 2023ರಲ್ಲಿ ಆರಂಭಗೊಂಡ ಈ ಚಿತ್ರ ಮೈಸೂರು, ಹೊನ್ನಾವರ ಹಾಗೂ ಚಿಕ್ಕಮಗಳೂರು ಸೇರಿದಂತೆ ಸುಮಾರು 23 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಚಿತ್ರ ಸೆಪ್ಟಂಬರ್ 5ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ’ ಎಂದರು.
ವಿನಯ್ಗೆ ನಾಯಕಿಯಾಗಿ ರಿಷಾ ಗೌಡ ಮತ್ತು ಪ್ರಕೃತಿ ಪ್ರಸಾದ್ ನಟಿಸಿದ್ದಾರೆ. ವಿಶೇಷವೆಂದರೆ, ಇಬ್ಬರೂ ಮೈಸೂರಿನವರು. ಮಿಕ್ಕಂತೆ ಬಲ ರಾಜವಾಡಿ, ರಾಘು ರಾಮನಕೊಪ್ಪ, ಜಗಪ್ಪ, ಸ್ವಾತಿ ಸೇರಿದಂತೆ ಹಲವಾರು ಕಲಾವಿದರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ರಾಜಕಾಂತ್ ಛಾಯಾಗ್ರಹಣ, ವಿಶ್ವಿ ಸಂಗೀತವಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…