ಮನರಂಜನೆ

ಪೌರಕಾರ್ಮಿಕ ಈಗ ನಾಯಕ: ಇವನೇ ಶ್ರೀನಿವಾಸನಾಗಿ ಬಂದ ಪ್ರತಾಪ್‍

ಕೆಲವು ವರ್ಷಗಳ ಹಿಂದೆ ರಕ್ಷಿತ್‍ ಶೆಟ್ಟಿ, ‘ಅವನೇ ಶ್ರೀಮನ್ನಾರಯಣ’ನಾದರು. ಇದೀಗ ಪ್ರತಾಪ್‍ ಎಂಬ ಹೊಸ ಹೀರೋ, ‘ಇವನೇ ಶ್ರೀನಿವಾಸನಾಗುವುದಕ್ಕೆ ಹೊರಟಿದ್ದಾರೆ. ಇದೊಂದು ಸಾಮಾಜಿಕ ಕಳಕಳಿಯ ಚಿತ್ರವಾಗಿದ್ದು, ಸೋಷಿಯಲ್‍ ಮೀಡಿಯಾದಿಂದ ಆಗುತ್ತಿರುವ ಸಮಸ್ಯೆಗಳ ಸುತ್ತ ಚಿತ್ರ ಸಾಗಲಿದೆ.

‘ಇವನೇ ಶ್ರೀನಿವಾಸ’ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಎಸ್‍. ಕುಮಾರ್‍. ಲಕ್ಷ್ಮಿ ನರಸಿಂಹಸ್ವಾಮಿ ಮೂವಿ ಮೇಕರ್ಸ್ ಹಾಗೂ ಎಲ್.ಎನ್.ಡಿ. ಕ್ರಿಯೇಶನ್ಸ್ ಮೂಲಕ ಪ್ರತಾಪ್ ಎನ್. ಹಾಗೂ ನವೀನ್ ಕುಮಾರ್ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇನ್ನು, ಬೃಹತ್‍ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ಪ್ರತಾಪ್, ಈ ಚಿತ್ರದ ಮೂಲಕ ಹೀರೋ ಆಗುತ್ತಿದ್ದಾರೆ. ಮೊದಲಿಂದಲೂ ಅಭಿನಯ ಎಂದರೆ ಆಸಕ್ತಿ ಹೊಂದಿದ್ದ ಪ್ರತಾಪ್‍, ಈ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ಹೀರೋ ಆಗಿ ಅಭಿನಯಿಸಿದ್ದಾರೆ. ಈ ಚಿತ್ರದ ಟೀಸರನ್ನು ಶಿವರಾಜಕುಮಾರ್‍ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಸೋಷಿಯಲ್ ಮೀಡಿಯಾದಿಂದ ಏನೇನೆಲ್ಲ ತೊಂದರೆ ಆಗುತ್ತಿದೆ ಎಂಬುದರ ಸುತ್ತ ಚಿತ್ರ ಸಾಗುತ್ತದೆ ಎನ್ನುವ ಕುಮಾರ್‍, ‘ಬೆಂಗಳೂರು,‌ ಮೈಸೂರು, ಕೋಲಾರ, ತುಮಕೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಪ್ರತಾಪ್‍ಗೆ ನಾಯಕಿಯಾಗಿ ಆದ್ಯಪ್ರಿಯಾ ನಟಿಸಿದ್ದಾರೆ. ರೋಹಿತ್ ಕುಮಾರ್ ಈ ಕಥೆ ಬರೆದಿದ್ದು, ನಾನು ಡೈಲಾಗ್ ರಚಿಸಿ ನಿರ್ದೇಶನ ಮಾಡಿದ್ದೇನೆ. ಪ್ರತಿದಿನ ಸಾಮಾಜಿಕ‌ ಜಾಲತಾಣಗಳ ಮೂಲಕ ನಡೆಯುತ್ತಿರುವ ಕ್ರೈಮ್, ವಂಚನೆಯ ಬಗ್ಗೆ ‘ಇವನೇ ಶ್ರೀನಿವಾಸ’ ಚಿತ್ರದ ಮೂಲಕ ಹೇಳಹೊರಟಿದ್ದೇವೆ. ಮೋಹನ್ ಜುನೇಜಾ ಅವರು ನಟಿಸಿದ ಕೊನೆಯ ಚಿತ್ರವಿದು. ಚಿಲ್ಲರ್ ಮಂಜು, ಸುಶ್ಮಿತಾ ಮುಂತಾದವರು ನಟಿಸಿದ್ದಾರೆ’ ಎಂದರು.

ನಮ್ಮ ವೈಯಕ್ತಿಕ ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಬಾರದು ಎನ್ನುವ ಕುಮಾರ್‍, ‘ಇದರಿಂದ ನಮ್ಮ ಮಾಹಿತಿ ತಿಳಿದುಕೊಳ್ಳುವ ವಂಚಕರು ಕಿರುಕುಳ, ತೊಂದರೆ ಕೊಡುತ್ತಾರೆ. ನಮ್ಮ ವೈಯಕ್ತಿಕ ವಿಚಾರ ನಮ್ಮಲ್ಲೇ ಇರಬೇಕು. ಅದನ್ನು ಜಾಲತಾಣದಲ್ಲಿ ಹಂಚಿಕೊಳ್ಳಬಾರದು ಎಂಬುದನ್ನು ಚಿತ್ರದ ಮೂಲಕ ಹೇಳಲು ಪ್ರಯತ್ನಿಸಿದ್ದೇವೆ. ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಜನವರಿ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ’ ಎಂದರು.

ನಾಯಕ ಪ್ರತಾಪ್ ಮಾತನಾಡಿ, ‘ನಾನೊಬ್ಬ ಪೌರ ಕಾರ್ಮಿಕ. ಹಿಂದೆ ನಾಟಕಗಳಲ್ಲಿ ನಟಿಸುತ್ತಿದ್ದೆ. ಈ ಚಿತ್ರದ ನಾಯಕನಾಗಿ ನಟಿಸುವ ಮೂಲಕ ಚಿತ್ರರಂಗಕ್ಕೆ ಬಂದಿದ್ದೇನೆ. ಶ್ರೀನಿವಾಸ ಯಾರು, ಎನ್ನುವುದೇ ಈ ಚಿತ್ರದ ಕಥೆ. ನಮ್ಮ ಸಿನಿಮಾದ ಮೂಲಕ ಸಮಾಜಕ್ಕೆ ಒಂದು ಸಂದೇಶ ನೀಡಬೇಕೆನ್ನುವುದು ನಮ್ಮ ಉದ್ದೇಶ’ ಎಂದರು.

ಆಂದೋಲನ ಡೆಸ್ಕ್

Recent Posts

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಣೆ : ರಾಹುಲ್‌ ಗಾಂಧಿ

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…

12 mins ago

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

40 mins ago

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

3 hours ago

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…

3 hours ago

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

3 hours ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

4 hours ago