ಮನರಂಜನೆ

‘ಮ್ಯಾಕ್ಸ್’ ಚಿತ್ರತಂಡದಿಂದ ಬಹುಮುಖ್ಯ ಘೋಷಣೆ; ಡಿ. 25ಕ್ಕೆ ಚಿತ್ರ ಬಿಡುಗಡೆ

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಈ ವರ್ಷ ಬಿಡುಗಡೆಯಾಗುವುದಿಲ್ಲ ಎಂಬ ತೀರ್ಮಾನಕ್ಕೆ ಅವರ ಅಭಿಮಾನಿಗಳು ಬಂದು ಬಿಟ್ಟಿದ್ದರು. ಅದಕ್ಕೆ ಕಾರಣ, ಚಿತ್ರದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಬಿಡುಗಡೆ ಯಾವಾಗ ಎಂದು ಕೇಳಿದಾಗಲೆಲ್ಲ, ಸುದೀಪ್‍ ತಮಗೇ ಮಾಹಿತಿ ಇಲ್ಲ ಎನ್ನುತ್ತಿದ್ದರು. ಹಾಗಾಗಿ, ಅಭಿಮಾನಿಗಳು ಸಹ ಚಿತ್ರದ ಬಗ್ಗೆ ಆಸೆ ಬಿಟ್ಟಿದ್ದರು.

ಹೀಗಿರುವಾಗಲೇ, ನವೆಂಬರ್ 27ಕ್ಕೆ ಒಂದು ಮುಖ್ಯ ಘೋಷಣೆಯನ್ನು ಮಾಡುವುದಾಗಿ ಒಂದು ಪೋಸ್ಟರ್ ಮೂಲಕ ಚಿತ್ರ ತಂಡ ಇತ್ತೀಚೆಗೆ ತಿಳಿಸಿತ್ತು. ಅಂದು ಚಿತ್ರದ ಬಿಡುಗಡೆಯ ದಿನ ಘೋಷಿಸಬಹುದು ಎಂಬ ಅಭಿಮಾನಿಗಳ ನಂಬಿಕೆ ಸುಳ್ಳಾಗಿಲ್ಲ. ಅಂದು ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದ್ದು, ಚಿತ್ರವು ಡಿ. 25ರಂದು ಐದು ಭಾಷೆಗಳಲ್ಲಿ ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆ ಆಗುತ್ತಿದೆ.

ಡಿ. 25ರಂದು ಕ್ರಿಸ್ಮಸ್‍ ರಜೆ ಇದೆ. ಅಂದು ಬುಧವಾರವಾಗಿದ್ದು, ವಾಡಿಕೆಗಿಂತ ಎರಡು ದಿನಗಳು ಮೊದಲೇ ಚಿತ್ರ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಕನ್ನಡ ಚಿತ್ರಗಳು ಶುಕ್ರವಾರ ಬಿಡುಗಡೆಯಾಗುತ್ತವೆ. ಹೆಚ್ಚೆಂದರೆ ಗುರುವಾರ ಬಿಡುಗಡೆಯಾಗುತ್ತವೆ. ಆದರೆ, ಬಹಳ ಅಪರೂಪಕ್ಕೆಂಬಂತೆ ‘ಮ್ಯಾಕ್ಸ್’ ಚಿತ್ರವು ಬುಧವಾರವೇ ಬಿಡುಗಡೆಯಾಗುತ್ತಿದೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಕಳೆದ ವರ್ಷ ಡಿಸೆಂಬರ್‍ನಲ್ಲೇ ಚಿತ್ರೀಕರಣ ಮುಕ್ತಾಯವಾಗಲಿದೆ ಎಂದು ಸುದೀಪ್ ‍ಹೇಳಿಕೊಂಡಿದ್ದರು. ಆದರೆ, ಅಂದುಕೊಂಡಂತೆ ಚಿತ್ರ ಬಿಡುಗಡೆ ಆಗಲೇ ಇಲ್ಲ. ಆ ನಂತರ ಚಿತ್ರದ ಬಗ್ಗೆ ಏನಾದರೂ ಮಾಹಿತಿ ಕೊಡಿ ಎಂದು ಅಭಿಮಾನಿಗಳು ಕೇಳುತ್ತಲೇ ಇದ್ದರು. ಆದರೆ, ಚಿತ್ರತಂಡದವರಿಂದ ಯಾವುದೇ ಅಪ್‍ಡೇಟ್‍ ಇರಲಿಲ್ಲ. ಈಗ ಕೊನೆಗೂ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಆಗಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.

‘ಮ್ಯಾಕ್ಸ್’ ಒಂದು ಮಾಸ್ ಚಿತ್ರವಾಗಿದ್ದು, ವಿಜಯ್ ಕಾರ್ತಿಕೇಯ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸುದೀಪ್ ಜೊತೆಗೆ ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ‘ಉಗ್ರಂ’ ಮಂಜು ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.

‘ಮ್ಯಾಕ್ಸ್’ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಪಕ ಕಲೈಪುಲಿ ಎಸ್ ಧನು ತಮ್ಮ ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಸುದೀಪ್ ತಮ್ಮ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಜೊತೆಯಾಗಿ ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

1 hour ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

1 hour ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

1 hour ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

2 hours ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

2 hours ago