ಮನರಂಜನೆ

‘ಮ್ಯಾಕ್ಸ್’ ಚಿತ್ರತಂಡದಿಂದ ಬಹುಮುಖ್ಯ ಘೋಷಣೆ; ಡಿ. 25ಕ್ಕೆ ಚಿತ್ರ ಬಿಡುಗಡೆ

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಈ ವರ್ಷ ಬಿಡುಗಡೆಯಾಗುವುದಿಲ್ಲ ಎಂಬ ತೀರ್ಮಾನಕ್ಕೆ ಅವರ ಅಭಿಮಾನಿಗಳು ಬಂದು ಬಿಟ್ಟಿದ್ದರು. ಅದಕ್ಕೆ ಕಾರಣ, ಚಿತ್ರದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಬಿಡುಗಡೆ ಯಾವಾಗ ಎಂದು ಕೇಳಿದಾಗಲೆಲ್ಲ, ಸುದೀಪ್‍ ತಮಗೇ ಮಾಹಿತಿ ಇಲ್ಲ ಎನ್ನುತ್ತಿದ್ದರು. ಹಾಗಾಗಿ, ಅಭಿಮಾನಿಗಳು ಸಹ ಚಿತ್ರದ ಬಗ್ಗೆ ಆಸೆ ಬಿಟ್ಟಿದ್ದರು.

ಹೀಗಿರುವಾಗಲೇ, ನವೆಂಬರ್ 27ಕ್ಕೆ ಒಂದು ಮುಖ್ಯ ಘೋಷಣೆಯನ್ನು ಮಾಡುವುದಾಗಿ ಒಂದು ಪೋಸ್ಟರ್ ಮೂಲಕ ಚಿತ್ರ ತಂಡ ಇತ್ತೀಚೆಗೆ ತಿಳಿಸಿತ್ತು. ಅಂದು ಚಿತ್ರದ ಬಿಡುಗಡೆಯ ದಿನ ಘೋಷಿಸಬಹುದು ಎಂಬ ಅಭಿಮಾನಿಗಳ ನಂಬಿಕೆ ಸುಳ್ಳಾಗಿಲ್ಲ. ಅಂದು ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದ್ದು, ಚಿತ್ರವು ಡಿ. 25ರಂದು ಐದು ಭಾಷೆಗಳಲ್ಲಿ ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆ ಆಗುತ್ತಿದೆ.

ಡಿ. 25ರಂದು ಕ್ರಿಸ್ಮಸ್‍ ರಜೆ ಇದೆ. ಅಂದು ಬುಧವಾರವಾಗಿದ್ದು, ವಾಡಿಕೆಗಿಂತ ಎರಡು ದಿನಗಳು ಮೊದಲೇ ಚಿತ್ರ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಕನ್ನಡ ಚಿತ್ರಗಳು ಶುಕ್ರವಾರ ಬಿಡುಗಡೆಯಾಗುತ್ತವೆ. ಹೆಚ್ಚೆಂದರೆ ಗುರುವಾರ ಬಿಡುಗಡೆಯಾಗುತ್ತವೆ. ಆದರೆ, ಬಹಳ ಅಪರೂಪಕ್ಕೆಂಬಂತೆ ‘ಮ್ಯಾಕ್ಸ್’ ಚಿತ್ರವು ಬುಧವಾರವೇ ಬಿಡುಗಡೆಯಾಗುತ್ತಿದೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಕಳೆದ ವರ್ಷ ಡಿಸೆಂಬರ್‍ನಲ್ಲೇ ಚಿತ್ರೀಕರಣ ಮುಕ್ತಾಯವಾಗಲಿದೆ ಎಂದು ಸುದೀಪ್ ‍ಹೇಳಿಕೊಂಡಿದ್ದರು. ಆದರೆ, ಅಂದುಕೊಂಡಂತೆ ಚಿತ್ರ ಬಿಡುಗಡೆ ಆಗಲೇ ಇಲ್ಲ. ಆ ನಂತರ ಚಿತ್ರದ ಬಗ್ಗೆ ಏನಾದರೂ ಮಾಹಿತಿ ಕೊಡಿ ಎಂದು ಅಭಿಮಾನಿಗಳು ಕೇಳುತ್ತಲೇ ಇದ್ದರು. ಆದರೆ, ಚಿತ್ರತಂಡದವರಿಂದ ಯಾವುದೇ ಅಪ್‍ಡೇಟ್‍ ಇರಲಿಲ್ಲ. ಈಗ ಕೊನೆಗೂ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಆಗಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.

‘ಮ್ಯಾಕ್ಸ್’ ಒಂದು ಮಾಸ್ ಚಿತ್ರವಾಗಿದ್ದು, ವಿಜಯ್ ಕಾರ್ತಿಕೇಯ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸುದೀಪ್ ಜೊತೆಗೆ ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ‘ಉಗ್ರಂ’ ಮಂಜು ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.

‘ಮ್ಯಾಕ್ಸ್’ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಪಕ ಕಲೈಪುಲಿ ಎಸ್ ಧನು ತಮ್ಮ ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಸುದೀಪ್ ತಮ್ಮ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಜೊತೆಯಾಗಿ ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

8 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

9 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

10 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

10 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

10 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

10 hours ago