ಮನರಂಜನೆ

‘ಮ್ಯಾಕ್ಸ್’ ಚಿತ್ರತಂಡದಿಂದ ಬಹುಮುಖ್ಯ ಘೋಷಣೆ; ಡಿ. 25ಕ್ಕೆ ಚಿತ್ರ ಬಿಡುಗಡೆ

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಈ ವರ್ಷ ಬಿಡುಗಡೆಯಾಗುವುದಿಲ್ಲ ಎಂಬ ತೀರ್ಮಾನಕ್ಕೆ ಅವರ ಅಭಿಮಾನಿಗಳು ಬಂದು ಬಿಟ್ಟಿದ್ದರು. ಅದಕ್ಕೆ ಕಾರಣ, ಚಿತ್ರದ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಬಿಡುಗಡೆ ಯಾವಾಗ ಎಂದು ಕೇಳಿದಾಗಲೆಲ್ಲ, ಸುದೀಪ್‍ ತಮಗೇ ಮಾಹಿತಿ ಇಲ್ಲ ಎನ್ನುತ್ತಿದ್ದರು. ಹಾಗಾಗಿ, ಅಭಿಮಾನಿಗಳು ಸಹ ಚಿತ್ರದ ಬಗ್ಗೆ ಆಸೆ ಬಿಟ್ಟಿದ್ದರು.

ಹೀಗಿರುವಾಗಲೇ, ನವೆಂಬರ್ 27ಕ್ಕೆ ಒಂದು ಮುಖ್ಯ ಘೋಷಣೆಯನ್ನು ಮಾಡುವುದಾಗಿ ಒಂದು ಪೋಸ್ಟರ್ ಮೂಲಕ ಚಿತ್ರ ತಂಡ ಇತ್ತೀಚೆಗೆ ತಿಳಿಸಿತ್ತು. ಅಂದು ಚಿತ್ರದ ಬಿಡುಗಡೆಯ ದಿನ ಘೋಷಿಸಬಹುದು ಎಂಬ ಅಭಿಮಾನಿಗಳ ನಂಬಿಕೆ ಸುಳ್ಳಾಗಿಲ್ಲ. ಅಂದು ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದ್ದು, ಚಿತ್ರವು ಡಿ. 25ರಂದು ಐದು ಭಾಷೆಗಳಲ್ಲಿ ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆ ಆಗುತ್ತಿದೆ.

ಡಿ. 25ರಂದು ಕ್ರಿಸ್ಮಸ್‍ ರಜೆ ಇದೆ. ಅಂದು ಬುಧವಾರವಾಗಿದ್ದು, ವಾಡಿಕೆಗಿಂತ ಎರಡು ದಿನಗಳು ಮೊದಲೇ ಚಿತ್ರ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಕನ್ನಡ ಚಿತ್ರಗಳು ಶುಕ್ರವಾರ ಬಿಡುಗಡೆಯಾಗುತ್ತವೆ. ಹೆಚ್ಚೆಂದರೆ ಗುರುವಾರ ಬಿಡುಗಡೆಯಾಗುತ್ತವೆ. ಆದರೆ, ಬಹಳ ಅಪರೂಪಕ್ಕೆಂಬಂತೆ ‘ಮ್ಯಾಕ್ಸ್’ ಚಿತ್ರವು ಬುಧವಾರವೇ ಬಿಡುಗಡೆಯಾಗುತ್ತಿದೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಕಳೆದ ವರ್ಷ ಡಿಸೆಂಬರ್‍ನಲ್ಲೇ ಚಿತ್ರೀಕರಣ ಮುಕ್ತಾಯವಾಗಲಿದೆ ಎಂದು ಸುದೀಪ್ ‍ಹೇಳಿಕೊಂಡಿದ್ದರು. ಆದರೆ, ಅಂದುಕೊಂಡಂತೆ ಚಿತ್ರ ಬಿಡುಗಡೆ ಆಗಲೇ ಇಲ್ಲ. ಆ ನಂತರ ಚಿತ್ರದ ಬಗ್ಗೆ ಏನಾದರೂ ಮಾಹಿತಿ ಕೊಡಿ ಎಂದು ಅಭಿಮಾನಿಗಳು ಕೇಳುತ್ತಲೇ ಇದ್ದರು. ಆದರೆ, ಚಿತ್ರತಂಡದವರಿಂದ ಯಾವುದೇ ಅಪ್‍ಡೇಟ್‍ ಇರಲಿಲ್ಲ. ಈಗ ಕೊನೆಗೂ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಆಗಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.

‘ಮ್ಯಾಕ್ಸ್’ ಒಂದು ಮಾಸ್ ಚಿತ್ರವಾಗಿದ್ದು, ವಿಜಯ್ ಕಾರ್ತಿಕೇಯ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸುದೀಪ್ ಜೊತೆಗೆ ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ‘ಉಗ್ರಂ’ ಮಂಜು ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.

‘ಮ್ಯಾಕ್ಸ್’ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಪಕ ಕಲೈಪುಲಿ ಎಸ್ ಧನು ತಮ್ಮ ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಸುದೀಪ್ ತಮ್ಮ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಜೊತೆಯಾಗಿ ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಟಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

2 mins ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

17 mins ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

4 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

7 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

21 hours ago