saalu marada thimakka
ಈ ಹಿಂದೆ ‘ಒರಟ’ದಿಂದ ‘ಕೋರ’ ಚಿತ್ರದವರೆಗೂ ಹಲವು ಕಮರ್ಷಿಯಲ್ ಚಿತ್ರಗಳನ್ನು ನಿರ್ದೇಶಿಸಿರುವ ಮತ್ತು ‘ಒರಟ’ ಶ್ರೀ ಎಂದೇ ಜನಪ್ರಿಯರಾಗಿರುವ ಶ್ರೀ, ಇದೀಗ ಸದ್ದಿಲ್ಲದೆ ಒಂದು ಕಲಾತ್ಮಕ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದಾರೆ. ‘ವೃಕ್ಷಮಾತೆ’ ಎಂದೇ ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ ಜೀವನವನ್ನು ಅವರು ತೆರೆಯ ಮೇಲೆ ತರುವುದಕ್ಕೆ ಸಜ್ಜಾಗಿದ್ದಾರೆ.
ವೃಕ್ಷಗಳನ್ನೇ ಮಕ್ಕಳನ್ನಾಗಿ ಕಂಡು ಲೆಕ್ಕವಿಲ್ಲದಷ್ಟು ಮರಗಳನ್ನು ಬೆಳೆಸಿ ಪೋಷಿಸಿ ಇಡೀ ಜಗತ್ತಿಗೆ ಮಾದರಿಯಾಗಿರುವ ತಿಮ್ಮಕ್ಕನವರ ಕುರಿತು ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರ ‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಎಂಬ ಕೃತಿಯನ್ನು ರಚಿಸಿದ್ದು, ಈ ಚಿತ್ರವು ಆ ಕೃತಿಯನ್ನು ಆಧರಿಸಿದೆ.
ಶ್ರೀ ಲಕ್ಷ್ಮಿ ವೆಂಕಟೇಶ್ವರ ಪಿಚ್ಚರ್ಸ್ ಬ್ಯಾನರ್ ಅಡಿಯಲ್ಲಿ ದಿಲೀಪ್ ಕುಮಾರ್ ಎಚ್.ಆರ್, ಸೌಜನ್ಯ ಡಿ.ವಿ, ಎ. ಸಂತೋಷ್ ಮುರಳಿ ಹಾಗೂ ಶ್ರೀ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅನಾವರಣಗೊಳಿಸಿದ್ದಾರೆ.
ಶ್ರೀ ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಸೌಜನ್ಯ, ತಿಮ್ಮಕ್ಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದಕ್ಕೂ ಮೊದಲು ‘ರಾಜಹುಲಿ’, ‘ಕೋರ’ ಮುಂತಾದ ಹಲವು ಚಿತ್ರಗಳಲ್ಲಿ ನಟಿಸಿದ್ದ ಸೌಜನ್ಯ, ಇದೇ ಮೊದಲ ಬಾರಿಗೆ ತಿಮ್ಮಕ್ಕನಾಗಿ ನಟಿಸುತ್ತಿದ್ದಾರೆ. ನೀನಾಸಂ ಅಶ್ವಥ್, ತಿಮ್ಮಕ್ಕನ ಗಂಡನ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಎಂ.ಕೆ. ಮಠ, ಗಣೇಶ್ ಕೇಸರ್ಕರ್, ಭೂಮಿಕಾ, ಪ್ರಕಾಶ್ ಶೆಟ್ಟಿ, ಮನು ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಈ ಚಿತ್ರಕ್ಕೆ ನಾಗರಾಜ್ ಛಾಯಾಗ್ರಹಣ, ಶ್ಯಾಮ್ ಸಂಗೀತವಿದ್ದು, ಸಂಭಾಷಣೆ ಹಾಗೂ ಸಾಹಿತ್ಯವನ್ನು ನೆಲ್ಲಿಕಟ್ಟೆ ಸಿದ್ದೇಶ್ ಹಾಗೂ ಶ್ರೀ ಜೊತೆಯಾಗಿ ರಚಿಸಿದ್ದಾರೆ.
‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಚಿತ್ರಕ್ಕಾಗಿ ಇತ್ತೀಚೆಗೆ ಚಿತ್ರೀಕರಣ ಪ್ರಾರಂಭವಾಗಿದೆ. ತುಮಕೂರು ಜಿಲ್ಲೆಯ ಹುಲಿಕಲ್ ಹಾಗೂ ಮಧುಗಿರಿಯ ಸುತ್ತಮುತ್ತ ಚಿತ್ರೀಕರಣವಾಗಿದೆ. ಮೊದಲ ಹಂತದ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ.
ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…
ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್…
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…
ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…
ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…