saalu marada thimakka
ಈ ಹಿಂದೆ ‘ಒರಟ’ದಿಂದ ‘ಕೋರ’ ಚಿತ್ರದವರೆಗೂ ಹಲವು ಕಮರ್ಷಿಯಲ್ ಚಿತ್ರಗಳನ್ನು ನಿರ್ದೇಶಿಸಿರುವ ಮತ್ತು ‘ಒರಟ’ ಶ್ರೀ ಎಂದೇ ಜನಪ್ರಿಯರಾಗಿರುವ ಶ್ರೀ, ಇದೀಗ ಸದ್ದಿಲ್ಲದೆ ಒಂದು ಕಲಾತ್ಮಕ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದಾರೆ. ‘ವೃಕ್ಷಮಾತೆ’ ಎಂದೇ ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ ಜೀವನವನ್ನು ಅವರು ತೆರೆಯ ಮೇಲೆ ತರುವುದಕ್ಕೆ ಸಜ್ಜಾಗಿದ್ದಾರೆ.
ವೃಕ್ಷಗಳನ್ನೇ ಮಕ್ಕಳನ್ನಾಗಿ ಕಂಡು ಲೆಕ್ಕವಿಲ್ಲದಷ್ಟು ಮರಗಳನ್ನು ಬೆಳೆಸಿ ಪೋಷಿಸಿ ಇಡೀ ಜಗತ್ತಿಗೆ ಮಾದರಿಯಾಗಿರುವ ತಿಮ್ಮಕ್ಕನವರ ಕುರಿತು ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರ ‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಎಂಬ ಕೃತಿಯನ್ನು ರಚಿಸಿದ್ದು, ಈ ಚಿತ್ರವು ಆ ಕೃತಿಯನ್ನು ಆಧರಿಸಿದೆ.
ಶ್ರೀ ಲಕ್ಷ್ಮಿ ವೆಂಕಟೇಶ್ವರ ಪಿಚ್ಚರ್ಸ್ ಬ್ಯಾನರ್ ಅಡಿಯಲ್ಲಿ ದಿಲೀಪ್ ಕುಮಾರ್ ಎಚ್.ಆರ್, ಸೌಜನ್ಯ ಡಿ.ವಿ, ಎ. ಸಂತೋಷ್ ಮುರಳಿ ಹಾಗೂ ಶ್ರೀ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅನಾವರಣಗೊಳಿಸಿದ್ದಾರೆ.
ಶ್ರೀ ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಸೌಜನ್ಯ, ತಿಮ್ಮಕ್ಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದಕ್ಕೂ ಮೊದಲು ‘ರಾಜಹುಲಿ’, ‘ಕೋರ’ ಮುಂತಾದ ಹಲವು ಚಿತ್ರಗಳಲ್ಲಿ ನಟಿಸಿದ್ದ ಸೌಜನ್ಯ, ಇದೇ ಮೊದಲ ಬಾರಿಗೆ ತಿಮ್ಮಕ್ಕನಾಗಿ ನಟಿಸುತ್ತಿದ್ದಾರೆ. ನೀನಾಸಂ ಅಶ್ವಥ್, ತಿಮ್ಮಕ್ಕನ ಗಂಡನ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಎಂ.ಕೆ. ಮಠ, ಗಣೇಶ್ ಕೇಸರ್ಕರ್, ಭೂಮಿಕಾ, ಪ್ರಕಾಶ್ ಶೆಟ್ಟಿ, ಮನು ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಈ ಚಿತ್ರಕ್ಕೆ ನಾಗರಾಜ್ ಛಾಯಾಗ್ರಹಣ, ಶ್ಯಾಮ್ ಸಂಗೀತವಿದ್ದು, ಸಂಭಾಷಣೆ ಹಾಗೂ ಸಾಹಿತ್ಯವನ್ನು ನೆಲ್ಲಿಕಟ್ಟೆ ಸಿದ್ದೇಶ್ ಹಾಗೂ ಶ್ರೀ ಜೊತೆಯಾಗಿ ರಚಿಸಿದ್ದಾರೆ.
‘ವೃಕ್ಷಮಾತೆ ಸಾಲುಮರದ ತಿಮ್ಮಕ್ಕ’ ಚಿತ್ರಕ್ಕಾಗಿ ಇತ್ತೀಚೆಗೆ ಚಿತ್ರೀಕರಣ ಪ್ರಾರಂಭವಾಗಿದೆ. ತುಮಕೂರು ಜಿಲ್ಲೆಯ ಹುಲಿಕಲ್ ಹಾಗೂ ಮಧುಗಿರಿಯ ಸುತ್ತಮುತ್ತ ಚಿತ್ರೀಕರಣವಾಗಿದೆ. ಮೊದಲ ಹಂತದ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…