ಮನರಂಜನೆ

‘ಕಲ್ಕಿ 2898 AD’ ಚಿತ್ರತಂಡದಿಂದ ಪ್ರೇಕ್ಷಕರಿಗೆ ಹೊಸ ಆಫರ್; ಏನದು ಗೊತ್ತಾ?

ಪ್ರಭಾಸ್‍ ಅಭಿನಯದ ಬಹುನಿರೀಕ್ಷಿತ ಪ್ಯಾನ್‍ ಇಂಡಿಯಾ ಚಿತ್ರ ಬಿಡುಗಡೆಯಾಗಿ ಜಗತ್ತಿನಾದ್ಯಂತ ಭರ್ಜರಿ ಕಲೆಕ್ಷನ್‍ ಮಾಡಿದೆ. ಚಿತ್ರವು ಸಾವಿರ ಕೋಟಿ ರೂ ಕ್ಲಬ್‍ಗೆ ಸೇರಿದ್ದು, ಒಟ್ಟಾರೆ 1100 ಕೋಟಿ ರೂ.ವರೆಗೂ ಸಂಗ್ರಹಿಸಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಸಿಕ್ಕ ಈ ಪ್ರತಿಕ್ರಿಯೆಗೆ ಚಿತ್ರತಂಡ ಬಹಳ ಖುಷಿಯಾಗಿದೆ. ಅಷ್ಟೇ ಅಲ್ಲ, ಇನ್ನಷ್ಟು ಜನರನ್ನು ಸೆಳೆಯುವ ನಿಟ್ಟಿನಲ್ಲಿ ಒಂದು ಹೊಸ ಆಫರ್‍ ನೀಡಿದೆ.

ಏನದು ಆಫರ್‍ ಎಂಬ ಪ್ರಶ್ನೆ ಬರುವುದು ಸಹಜ. ಚಿತ್ರವು ಜಾಗತಿಕವಾಗಿ 1100 ಕೋಟಿ ಗಳಿಕೆ ಮಾಡಿರುವ ಹಿನ್ನೆಲೆಯಲ್ಲಿ ಖುಷಿಯಾಗಿರುವ ಚಿತ್ರತಂಡದವರು, ಚಿತ್ರದ ಟಿಕೆಟ್‍ ದರವನ್ನು ಕಡಿಮೆ ಮಾಡಿದೆ ಇಂದಿನಿಂದ (ಆಗಸ್ಟ್ 02)ಒಂದು ವಾರ ಕಾಲ ಚಿತ್ರದ ಟಿಕೆಟ್‍ ದರವನ್ನು ಕೇವಲ 100 ರೂ.ಗಳಿಗೆ ಇಳಿಸಿದೆ. ಈ ಒಂದು ವಾರದಲ್ಲಿ ಎಲ್ಲಾ ಚಿತ್ರಮಂದಿರಗಳಲ್ಲೂ 100 ರೂ ಕೊಟು ಚಿತ್ರಗಳನ್ನು ನೋಡಬಹುದು. ಈ ವಿಷಯವನ್ನು ಚಿತ್ರ ನಿರ್ಮಿಸಿರುವ ವೈಜಯಂತಿ ಮೂವೀಸ್‍ ಸಂಸ್ಥೆಯೇ ಸೋಷಿಯಲ್‍ ಮೀಡಿಯಾ ಮೂಲಕ ಅಧಿಕೃತವಾಗಿ ಘೋಷಿಸಿದೆ.

‘ಕಲ್ಕಿ 2898 ಎಡಿ’ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರವು ಮೊದಲ ದಿನವೇ 190 ಕೋಟಿ ರೂ ಗಳಿಕೆ ಮಾಡಿತ್ತು. ಇದುವರೆಗೂ 1100 ಕೋಟಿ ರೂ ಗಳಿಕೆ ಮಾಡುವ ಮೂಲಕ 1000 ಕೋಟಿ ಕ್ಲಬ್ ಸೇರುವ ಮೂರನೇ ತೆಲುಗು ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

‘ಕಲ್ಕಿ 2898 AD’ ಚಿತ್ರದಲ್ಲಿ ಪ್ರಭಾಸ್‍, ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್‍ ಬ್ಯಾನರ್‍ ಅಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಭೂಮಿಕಾ

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago