ಮನರಂಜನೆ

‘ಕಲ್ಕಿ 2898 AD’ ಚಿತ್ರತಂಡದಿಂದ ಪ್ರೇಕ್ಷಕರಿಗೆ ಹೊಸ ಆಫರ್; ಏನದು ಗೊತ್ತಾ?

ಪ್ರಭಾಸ್‍ ಅಭಿನಯದ ಬಹುನಿರೀಕ್ಷಿತ ಪ್ಯಾನ್‍ ಇಂಡಿಯಾ ಚಿತ್ರ ಬಿಡುಗಡೆಯಾಗಿ ಜಗತ್ತಿನಾದ್ಯಂತ ಭರ್ಜರಿ ಕಲೆಕ್ಷನ್‍ ಮಾಡಿದೆ. ಚಿತ್ರವು ಸಾವಿರ ಕೋಟಿ ರೂ ಕ್ಲಬ್‍ಗೆ ಸೇರಿದ್ದು, ಒಟ್ಟಾರೆ 1100 ಕೋಟಿ ರೂ.ವರೆಗೂ ಸಂಗ್ರಹಿಸಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಸಿಕ್ಕ ಈ ಪ್ರತಿಕ್ರಿಯೆಗೆ ಚಿತ್ರತಂಡ ಬಹಳ ಖುಷಿಯಾಗಿದೆ. ಅಷ್ಟೇ ಅಲ್ಲ, ಇನ್ನಷ್ಟು ಜನರನ್ನು ಸೆಳೆಯುವ ನಿಟ್ಟಿನಲ್ಲಿ ಒಂದು ಹೊಸ ಆಫರ್‍ ನೀಡಿದೆ.

ಏನದು ಆಫರ್‍ ಎಂಬ ಪ್ರಶ್ನೆ ಬರುವುದು ಸಹಜ. ಚಿತ್ರವು ಜಾಗತಿಕವಾಗಿ 1100 ಕೋಟಿ ಗಳಿಕೆ ಮಾಡಿರುವ ಹಿನ್ನೆಲೆಯಲ್ಲಿ ಖುಷಿಯಾಗಿರುವ ಚಿತ್ರತಂಡದವರು, ಚಿತ್ರದ ಟಿಕೆಟ್‍ ದರವನ್ನು ಕಡಿಮೆ ಮಾಡಿದೆ ಇಂದಿನಿಂದ (ಆಗಸ್ಟ್ 02)ಒಂದು ವಾರ ಕಾಲ ಚಿತ್ರದ ಟಿಕೆಟ್‍ ದರವನ್ನು ಕೇವಲ 100 ರೂ.ಗಳಿಗೆ ಇಳಿಸಿದೆ. ಈ ಒಂದು ವಾರದಲ್ಲಿ ಎಲ್ಲಾ ಚಿತ್ರಮಂದಿರಗಳಲ್ಲೂ 100 ರೂ ಕೊಟು ಚಿತ್ರಗಳನ್ನು ನೋಡಬಹುದು. ಈ ವಿಷಯವನ್ನು ಚಿತ್ರ ನಿರ್ಮಿಸಿರುವ ವೈಜಯಂತಿ ಮೂವೀಸ್‍ ಸಂಸ್ಥೆಯೇ ಸೋಷಿಯಲ್‍ ಮೀಡಿಯಾ ಮೂಲಕ ಅಧಿಕೃತವಾಗಿ ಘೋಷಿಸಿದೆ.

‘ಕಲ್ಕಿ 2898 ಎಡಿ’ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರವು ಮೊದಲ ದಿನವೇ 190 ಕೋಟಿ ರೂ ಗಳಿಕೆ ಮಾಡಿತ್ತು. ಇದುವರೆಗೂ 1100 ಕೋಟಿ ರೂ ಗಳಿಕೆ ಮಾಡುವ ಮೂಲಕ 1000 ಕೋಟಿ ಕ್ಲಬ್ ಸೇರುವ ಮೂರನೇ ತೆಲುಗು ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

‘ಕಲ್ಕಿ 2898 AD’ ಚಿತ್ರದಲ್ಲಿ ಪ್ರಭಾಸ್‍, ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್‍ ಬ್ಯಾನರ್‍ ಅಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಭೂಮಿಕಾ

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

4 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

5 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

6 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

7 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

7 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

8 hours ago