ಮನರಂಜನೆ

‘ಕಲ್ಕಿ 2898 AD’ ಚಿತ್ರತಂಡದಿಂದ ಪ್ರೇಕ್ಷಕರಿಗೆ ಹೊಸ ಆಫರ್; ಏನದು ಗೊತ್ತಾ?

ಪ್ರಭಾಸ್‍ ಅಭಿನಯದ ಬಹುನಿರೀಕ್ಷಿತ ಪ್ಯಾನ್‍ ಇಂಡಿಯಾ ಚಿತ್ರ ಬಿಡುಗಡೆಯಾಗಿ ಜಗತ್ತಿನಾದ್ಯಂತ ಭರ್ಜರಿ ಕಲೆಕ್ಷನ್‍ ಮಾಡಿದೆ. ಚಿತ್ರವು ಸಾವಿರ ಕೋಟಿ ರೂ ಕ್ಲಬ್‍ಗೆ ಸೇರಿದ್ದು, ಒಟ್ಟಾರೆ 1100 ಕೋಟಿ ರೂ.ವರೆಗೂ ಸಂಗ್ರಹಿಸಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಸಿಕ್ಕ ಈ ಪ್ರತಿಕ್ರಿಯೆಗೆ ಚಿತ್ರತಂಡ ಬಹಳ ಖುಷಿಯಾಗಿದೆ. ಅಷ್ಟೇ ಅಲ್ಲ, ಇನ್ನಷ್ಟು ಜನರನ್ನು ಸೆಳೆಯುವ ನಿಟ್ಟಿನಲ್ಲಿ ಒಂದು ಹೊಸ ಆಫರ್‍ ನೀಡಿದೆ.

ಏನದು ಆಫರ್‍ ಎಂಬ ಪ್ರಶ್ನೆ ಬರುವುದು ಸಹಜ. ಚಿತ್ರವು ಜಾಗತಿಕವಾಗಿ 1100 ಕೋಟಿ ಗಳಿಕೆ ಮಾಡಿರುವ ಹಿನ್ನೆಲೆಯಲ್ಲಿ ಖುಷಿಯಾಗಿರುವ ಚಿತ್ರತಂಡದವರು, ಚಿತ್ರದ ಟಿಕೆಟ್‍ ದರವನ್ನು ಕಡಿಮೆ ಮಾಡಿದೆ ಇಂದಿನಿಂದ (ಆಗಸ್ಟ್ 02)ಒಂದು ವಾರ ಕಾಲ ಚಿತ್ರದ ಟಿಕೆಟ್‍ ದರವನ್ನು ಕೇವಲ 100 ರೂ.ಗಳಿಗೆ ಇಳಿಸಿದೆ. ಈ ಒಂದು ವಾರದಲ್ಲಿ ಎಲ್ಲಾ ಚಿತ್ರಮಂದಿರಗಳಲ್ಲೂ 100 ರೂ ಕೊಟು ಚಿತ್ರಗಳನ್ನು ನೋಡಬಹುದು. ಈ ವಿಷಯವನ್ನು ಚಿತ್ರ ನಿರ್ಮಿಸಿರುವ ವೈಜಯಂತಿ ಮೂವೀಸ್‍ ಸಂಸ್ಥೆಯೇ ಸೋಷಿಯಲ್‍ ಮೀಡಿಯಾ ಮೂಲಕ ಅಧಿಕೃತವಾಗಿ ಘೋಷಿಸಿದೆ.

‘ಕಲ್ಕಿ 2898 ಎಡಿ’ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರವು ಮೊದಲ ದಿನವೇ 190 ಕೋಟಿ ರೂ ಗಳಿಕೆ ಮಾಡಿತ್ತು. ಇದುವರೆಗೂ 1100 ಕೋಟಿ ರೂ ಗಳಿಕೆ ಮಾಡುವ ಮೂಲಕ 1000 ಕೋಟಿ ಕ್ಲಬ್ ಸೇರುವ ಮೂರನೇ ತೆಲುಗು ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

‘ಕಲ್ಕಿ 2898 AD’ ಚಿತ್ರದಲ್ಲಿ ಪ್ರಭಾಸ್‍, ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್‍ ಬ್ಯಾನರ್‍ ಅಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಭೂಮಿಕಾ

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

1 hour ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

1 hour ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

2 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

2 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

2 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

2 hours ago