ಮನರಂಜನೆ

‘ಕಲ್ಕಿ 2898 AD’ ಚಿತ್ರತಂಡದಿಂದ ಪ್ರೇಕ್ಷಕರಿಗೆ ಹೊಸ ಆಫರ್; ಏನದು ಗೊತ್ತಾ?

ಪ್ರಭಾಸ್‍ ಅಭಿನಯದ ಬಹುನಿರೀಕ್ಷಿತ ಪ್ಯಾನ್‍ ಇಂಡಿಯಾ ಚಿತ್ರ ಬಿಡುಗಡೆಯಾಗಿ ಜಗತ್ತಿನಾದ್ಯಂತ ಭರ್ಜರಿ ಕಲೆಕ್ಷನ್‍ ಮಾಡಿದೆ. ಚಿತ್ರವು ಸಾವಿರ ಕೋಟಿ ರೂ ಕ್ಲಬ್‍ಗೆ ಸೇರಿದ್ದು, ಒಟ್ಟಾರೆ 1100 ಕೋಟಿ ರೂ.ವರೆಗೂ ಸಂಗ್ರಹಿಸಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಸಿಕ್ಕ ಈ ಪ್ರತಿಕ್ರಿಯೆಗೆ ಚಿತ್ರತಂಡ ಬಹಳ ಖುಷಿಯಾಗಿದೆ. ಅಷ್ಟೇ ಅಲ್ಲ, ಇನ್ನಷ್ಟು ಜನರನ್ನು ಸೆಳೆಯುವ ನಿಟ್ಟಿನಲ್ಲಿ ಒಂದು ಹೊಸ ಆಫರ್‍ ನೀಡಿದೆ.

ಏನದು ಆಫರ್‍ ಎಂಬ ಪ್ರಶ್ನೆ ಬರುವುದು ಸಹಜ. ಚಿತ್ರವು ಜಾಗತಿಕವಾಗಿ 1100 ಕೋಟಿ ಗಳಿಕೆ ಮಾಡಿರುವ ಹಿನ್ನೆಲೆಯಲ್ಲಿ ಖುಷಿಯಾಗಿರುವ ಚಿತ್ರತಂಡದವರು, ಚಿತ್ರದ ಟಿಕೆಟ್‍ ದರವನ್ನು ಕಡಿಮೆ ಮಾಡಿದೆ ಇಂದಿನಿಂದ (ಆಗಸ್ಟ್ 02)ಒಂದು ವಾರ ಕಾಲ ಚಿತ್ರದ ಟಿಕೆಟ್‍ ದರವನ್ನು ಕೇವಲ 100 ರೂ.ಗಳಿಗೆ ಇಳಿಸಿದೆ. ಈ ಒಂದು ವಾರದಲ್ಲಿ ಎಲ್ಲಾ ಚಿತ್ರಮಂದಿರಗಳಲ್ಲೂ 100 ರೂ ಕೊಟು ಚಿತ್ರಗಳನ್ನು ನೋಡಬಹುದು. ಈ ವಿಷಯವನ್ನು ಚಿತ್ರ ನಿರ್ಮಿಸಿರುವ ವೈಜಯಂತಿ ಮೂವೀಸ್‍ ಸಂಸ್ಥೆಯೇ ಸೋಷಿಯಲ್‍ ಮೀಡಿಯಾ ಮೂಲಕ ಅಧಿಕೃತವಾಗಿ ಘೋಷಿಸಿದೆ.

‘ಕಲ್ಕಿ 2898 ಎಡಿ’ ಚಿತ್ರವು ಜೂನ್‍ 27ರಂದು ಜಗತ್ತಿನಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರವು ಮೊದಲ ದಿನವೇ 190 ಕೋಟಿ ರೂ ಗಳಿಕೆ ಮಾಡಿತ್ತು. ಇದುವರೆಗೂ 1100 ಕೋಟಿ ರೂ ಗಳಿಕೆ ಮಾಡುವ ಮೂಲಕ 1000 ಕೋಟಿ ಕ್ಲಬ್ ಸೇರುವ ಮೂರನೇ ತೆಲುಗು ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

‘ಕಲ್ಕಿ 2898 AD’ ಚಿತ್ರದಲ್ಲಿ ಪ್ರಭಾಸ್‍, ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್‍ ಬ್ಯಾನರ್‍ ಅಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಭೂಮಿಕಾ

Recent Posts

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

17 mins ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

48 mins ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

5 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

8 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

8 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

9 hours ago