ಮನರಂಜನೆ

ಮೂರ್ನಾಲ್ಕು ವರ್ಷಗಳ ನಂತರ ಕೃಷ್ಣ ಡ್ಯಾನ್ಸ್ ಮಾಡಿದ ಹಾಡೊಂದು ಬಿಡುಗಡೆ

‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಬ್ರ್ಯಾಟ್‍’ ಚಿತ್ರವು ನವೆಂಬರ್‍.14ರಂದು ಬಿಡಗುಡೆಯಾಗುತ್ತಿದೆ. ಈಗಾಗಲೇ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ಮಧ್ಯೆ, ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ.

ಈಗಾಗಲೇ, ‘ಬ್ರ್ಯಾಟ್‍’ ಚಿತ್ರದ ಒಂದು ಹಾಡು ಹಾಗೂ ಟೀಸರ್‍ ಬಿಡುಗಡೆಯಾಗಿತ್ತು. ಈಗ ಉತ್ತರ ಕರ್ನಾಟಕದ ಪ್ರತಿಭೆ, ಬಾಳು ಬೆಳಗುಂದಿ ಹಾಗೂ ಇಂದು ನಾಗರಾಜ್‍ ಹಾಡಿರುವ ‘ಗಂಗಿ ಗಂಗಿ …’ ಎಂಬ ಐಟಂ ಡ್ಯಾನ್ಸ್ ಬಿಡುಗಡೆಯಾಗಿದೆ. ಈ ಹಾಡಿಗೆ ಬಾಳು ಬೆಳಗುಂದಿ ಅವರೇ ಸಾಹಿತ್ಯ ಬರೆದಿದ್ದು, ಅರ್ಜುನ್‍ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡಿಗೆ ಕೃಷ್ಣ ಮತ್ತು ಅನೈರಾ ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ: Asia cup | ಭಾರತಕ್ಕೆ ಸುಲಭ ಜಯ : ಪಾಕಿಸ್ತಾನಕ್ಕೆ ಮುಖಭಂಗ

ಈ ಹಾಡಿನ ಕುರಿತು ಮಾತನಾಡುವ ಬಾಳು, ‘ಕುರಿಗಾಹಿಯಾಗಿದ್ದ ನಾನು, ಅನೇಕ ಜನಪದ ಗೀತೆಗಳನ್ನು ರಚಿಸಿ ಹಾಡುತ್ತಿದ್ದೆ. ಆನಂತರ ‘ಸರಿಗಮಪ’ ಸ್ಪರ್ಧಿಯಾದೆ. ಆ ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ಅವರು ನಿನ್ನಿಂದ ನನ್ನ ಸಿನಿಮಾವೊಂದರಲ್ಲಿ ಹಾಡಿಸುತ್ತೇನೆ ಅಂತ ಹೇಳಿದ್ದರು. ಈ ಚಿತ್ರದಲ್ಲಿ ಅವಕಾಶ ನೀಡಿದ್ದಾರೆ. ಅವರಿಗೆ, ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ’ ಎಂದು ಧನ್ಯವಾದ ತಿಳಿಸಿದರು.

ಕೃಷ್ಣ ನೃತ್ಯ ಮಾಡಿ ಮೂರ್ನಾಲ್ಕು ವರ್ಷಗಳೇ ಆಗಿತ್ತಂತೆ. ‘ಈ ಹಾಡಿಗೆ ಈ ರೀತಿ ನೃತ್ಯ ಮಾಡಿದ್ದೇನೆ ಅಂದರೆ ಅದಕ್ಕೆ ನಿರ್ದೇಶಕ ಶಶಾಂಕ್ ಅವರೇ ಕಾರಣ. ಈ ಚಿತ್ರದಲ್ಲಿ ನನ್ನ ಲುಕ್ ಕೂಡ ಹೊಸತಾಗಿದೆ‌. ಈ ಎಲ್ಲಾ ಕ್ರೆಡಿಟ್ ನಿರ್ದೇಶಕರಿಗೆ ಸೇರಬೇಕು. ಇನ್ನೂ ‘ಗಂಗಿ ಗಂಗಿ’ ಹಾಡು ಇಷ್ಟು ಅದ್ದೂರಿಯಾಗಿ ಮೂಡಿ ಬರಲು ನಿರ್ಮಾಪಕ ಮಂಜುನಾಥ್ ಕಂದಕೂರ್ ಅವರಿಗಿರುವ ಸಿನಿಮಾ ಪ್ರೀತಿ. ಇಡೀ ಸಿನಿಮಾ ಇಷ್ಟೇ ಅದ್ದೂರಿಯಾಗಿ ಮೂಡಿಬಂದಿದೆ. ಬಾಳು ಬೆಳಗುಂದಿ ಅವರ ಸಾಹಿತ್ಯ, ಗಾಯನ ಹಾಗೂ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಸೊಗಸಾಗಿದೆ’ ಎಂದರು ಕೃಷ್ಣ.

ಈ ಹಿಂದೆ ‘ಫಸ್ಟ್ ರ‍್ಯಾಂಕ್ ರಾಜು’ ನಿರ್ಮಿಸಿದ್ದ ಮಂಜುನಾಥ್‍ ಕುಂದಕೂರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೃಷ್ಣಗೆ ನಾಯಕಿಯಾಗಿ ಮನಿಷಾ ಕುಂದುಕೂರು ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕೃಷ್ಣ ಮತ್ತು ಮನಿಷಾ ಜೊತೆಗೆ ಡ್ರ್ಯಾಗನ್‍ ಮಂಜು, ಅಚ್ಯುತ್‍ ಕುಮಾರ್‍ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ಮತ್ತು ಅಭಿಲಾಷ್‍ ಕಲ್ಲತ್ತಿ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಅಸ್ಸಾಂನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

ಅಸ್ಸಾಂ : ಅಸ್ಸಾಂ ವಿಧಾನಸಭೆ ಚುನಾವಣೆಯ ಫಲಿತಾಂತ ಪ್ರಗತಿಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 80, ಕಾಂಗ್ರೆಸ್‌ 26,…

12 mins ago

ತಮಿಳುನಾಡು: ಮತ ಎಣಿಕೆಯ ಆರಂಭಿಕ ಟ್ರೆಂಡ್‌: ವಿಜಯ್‌ಗೆ ಅಧಿಕಾರ?

ಚೆನ್ನೈ: 234 ಸದಸ್ಯ ಬಲದ ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ತಮಿಳುನಾಡಿನಲ್ಲಿ ಈ ಬಾರಿ ತಮಿಳಗ…

17 mins ago

ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ: ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ದಳಪತಿ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ ಕಮಾಲ್‌ ಮಾಡಿದೆ. ಈಗಿನ…

48 mins ago

ಬಾಗಲಕೋಟೆ ಫಲಿತಾಂಶ ; ಕಾಂಗೆಸ್‌ನ ಉಮೇಶ್‌ ಮೇಟಿಗೆ ಮುನ್ನಡೆ

ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಫಲಿತಾಂಶ ಪ್ರಗತಿಯಲ್ಲಿದ್ದು ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿನ ನವನಗರದ ತೋಟಗಾರಿಕೆ ವಿವಿಯಲ್ಲಿ…

52 mins ago

ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ

ಅಮರಾವತಿ: ಇಂದು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಇದೇ ಹೊತ್ತಿನಲ್ಲಿ ನಟಿ…

1 hour ago

ರಾಜ್ಯ ಕಾಂಗ್ರೆಸ್‌ನಲ್ಲಿ ಶುರುವಾಗಲಿದೆಯೇ ಈ ಅವಧಿಯ ಮೊದಲ ಬಂಡಾಯ?

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ  ಪಂಚರಾಜ್ಯ ಚುನಾವಣೆ, ಉಪಚುನಾವಣೆ ಫಲಿತಾಂಶದ ನಂತರ ಸಿಎಂ ಪಟ್ಟಕ್ಕಾಗಿ ಡಿಕೆಶಿ ತಂತ್ರ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು…

2 hours ago