ಮನರಂಜನೆ

ಯಶ್‍ ಹುಟ್ಟುಹಬ್ಬಕ್ಕೆ ಒಂದು ಸರ್ಪ್ರೈಸ್‌ ; ಏನಿರಬಹುದು ಅದು?

ಯಶ್‍ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು (ಜನವರಿ 08) ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಈ ಬಾರಿ ತಾವು ಊರಿನಲ್ಲಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ, ಅವರ ಹುಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಒಂದು ಆಶ್ಚರ್ಯ ಕಾದಿದೆ.

ಹೌದು, ಯಶ್‍ ಅಭಿನಯದ ‘ಟಾಕ್ಸಿಕ್‍’ ತಂಡದಿಂದ ಜನವರಿ 08ರಂದು ಒಂದು ಆಶ್ಚರ್ಯ ಕಾದಿದಿಯಂತೆ. ಹಾಗಂತ ಸ್ವತಃ ಯಶ್‍ ಘೋಷಿಸಿದ್ದಾರೆ. ಇಂದು ಸೋಷಿಯಲ್‍ ಮೀಡಿಯಾದಲ್ಲಿ ಹೊಸ ಪೋಸ್ಟರ್‍ ಬಿಡುಗಡೆ ಮಾಡಿರುವ ಅವರು, 08ರಂದು ಒಂದು ಆಶ್ಚರ್ಯ ಕಾದಿದೆ ಎಂದು ಹೇಳಿದ್ದಾರೆ. ಆದರೆ, ಆ ಆಶ್ಚರ್ಯವೇನು ಎಂಬುದನ್ನು ಅವರು ಬಹಿರಂಗಗೊಳಿಸಿಲ್ಲ. ‘Unleashing him’ ಎಂದಷ್ಟೇ ಬರೆದುಕೊಂಡಿದ್ದಾರೆ.

ಹಾಗೆಂದರೆ, ಅವನ ಬಿಡುಗಡೆ ಎಂದು ಅರ್ಥ ಮಾಡಿಕೊಳ್ಳಬಹುದು. ಹಾಗಾದರೆ, ಅಂದು ಏನು ಬಿಡುಗಡೆಯಾಗಬಹುದು? ಮೊದಲ ನೋಟ? ಟೀಸರ್‍? ಪೋಸ್ಟರ್? ಅಥವಾ ಇನ್ನೇನಾದರೂ, ಒಟ್ಟಾರೆ ಜನವರಿ ಎಂಟರ ಬುಧವಾರ ಬೆಳಿಗ್ಗೆ 10.25ಕ್ಕೆ ಸೋಷಿಯಲ್‍ ಮೀಡಿಯಾದಲ್ಲಿ ಬಿಡುಗಡೆಯಾಗುತ್ತಿದೆ.

ಕಳೆದ ವರ್ಷದ ಯಶ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಟಾಕ್ಸಿಕ್‍’ ಚಿತರದ ಘೋಷಣೆಯಾಗಿತ್ತು. ಘೋಷಣೆಯ ದಿನದಂದೇ, ಚಿತ್ರದ ಬಿಡುಗಡೆ ದಿನಾಂಕವನ್ನು ಸಹ ಪ್ರಕಟಿಸಲಾಗಿತ್ತು. ಅದರಂತೆ ಚಿತ್ರವು 2025ರ ಏಪ್ರಿಲ್‍ 10ರಂದು ಜಗತ್ತಿನಾದ್ಯಂತ ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರ ಶುರುವಾಗಿದ್ದೇ ಎರಡು ತಿಂಗಳ ಹಿಂದಾದ್ದರಿಂದ, ಅಂದುಕೊಂಡ ಸಮಯದಲ್ಲಿ ಚಿತ್ರವು ಬಿಡುಗಡೆಯಾಗುವುದು ಸಂಶಯ ಎಂಬ ಮಾತು ಕೇಳಿಬಂದಿತ್ತು. ಆದರೆ, ಚಿತ್ರತಂಡ ಈ ಕುರಿತು ಯಾವುದೇ ಸ್ಪಷ್ಟನೆ ಬಂದಿರಲಿಲ್ಲ. ಆದರೆ, ಸಂದರ್ಶನವೊಂದರಲ್ಲಿ ಮಾತನಾಡಿರುವ ಯಶ್‍, ಚಿತ್ರವು ಏಪ್ರಿಲ್‍ 10ಕ್ಕೆ ಬಿಡುಗಡೆ ಆಗುವುದಿಲ್ಲ ಎಂದು ಹೇಳಿದ್ದಾರೆ. ಬಹುಶಃ ನಾಡಿದ್ದು ಬಿಡುಗಡೆಯಾಗುವ ಟೀಸರ್‍ ಅಥವಾ ಮೊದಲ ನೋಟದಲ್ಲಿ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಗುವ ನಿರೀಕ್ಷೆ ಇದೆ.

‘ಟಾಕ್ಸಿಕ್‍’ ಚಿತ್ರಕ್ಕೆ ಗೀತೂ ಮೋಹನ್‍ ದಾಸ್‍ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದರೆ, ಕೆ.ವಿ.ಎನ್. ಪ್ರೊಡಕ್ಷನ್ಸ್ ಮತ್ತು ಮಾನ್‍ಸ್ಟರ್‍ ಮೈಂಡ್‍ ಕ್ರಿಯೇಷಣ್ಸ್ ಬ್ಯಾನರ್‍ ಅಡಿ ಕೋನ ವೆಂಕಟ್‍ನಾರಾಯಣ್‍ ಮತ್ತು ಯಶ್‍ ಜೊತೆಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

‘ಟಾಕ್ಸಿಕ್‍’ ಚಿತ್ರದಲ್ಲಿ ಯಶ್‍, ಕಿಯಾರಾ ಅಡ್ವಾಣಿ, ನಯನತಾರಾ, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್‍, ಅನಿಲ್‍ ಕಪೂರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

12 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

13 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

14 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

14 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

14 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

22 hours ago