ಮನರಂಜನೆ

ಯಶ್‍ ಹುಟ್ಟುಹಬ್ಬಕ್ಕೆ ಒಂದು ಸರ್ಪ್ರೈಸ್‌ ; ಏನಿರಬಹುದು ಅದು?

ಯಶ್‍ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು (ಜನವರಿ 08) ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಈ ಬಾರಿ ತಾವು ಊರಿನಲ್ಲಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ, ಅವರ ಹುಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಒಂದು ಆಶ್ಚರ್ಯ ಕಾದಿದೆ.

ಹೌದು, ಯಶ್‍ ಅಭಿನಯದ ‘ಟಾಕ್ಸಿಕ್‍’ ತಂಡದಿಂದ ಜನವರಿ 08ರಂದು ಒಂದು ಆಶ್ಚರ್ಯ ಕಾದಿದಿಯಂತೆ. ಹಾಗಂತ ಸ್ವತಃ ಯಶ್‍ ಘೋಷಿಸಿದ್ದಾರೆ. ಇಂದು ಸೋಷಿಯಲ್‍ ಮೀಡಿಯಾದಲ್ಲಿ ಹೊಸ ಪೋಸ್ಟರ್‍ ಬಿಡುಗಡೆ ಮಾಡಿರುವ ಅವರು, 08ರಂದು ಒಂದು ಆಶ್ಚರ್ಯ ಕಾದಿದೆ ಎಂದು ಹೇಳಿದ್ದಾರೆ. ಆದರೆ, ಆ ಆಶ್ಚರ್ಯವೇನು ಎಂಬುದನ್ನು ಅವರು ಬಹಿರಂಗಗೊಳಿಸಿಲ್ಲ. ‘Unleashing him’ ಎಂದಷ್ಟೇ ಬರೆದುಕೊಂಡಿದ್ದಾರೆ.

ಹಾಗೆಂದರೆ, ಅವನ ಬಿಡುಗಡೆ ಎಂದು ಅರ್ಥ ಮಾಡಿಕೊಳ್ಳಬಹುದು. ಹಾಗಾದರೆ, ಅಂದು ಏನು ಬಿಡುಗಡೆಯಾಗಬಹುದು? ಮೊದಲ ನೋಟ? ಟೀಸರ್‍? ಪೋಸ್ಟರ್? ಅಥವಾ ಇನ್ನೇನಾದರೂ, ಒಟ್ಟಾರೆ ಜನವರಿ ಎಂಟರ ಬುಧವಾರ ಬೆಳಿಗ್ಗೆ 10.25ಕ್ಕೆ ಸೋಷಿಯಲ್‍ ಮೀಡಿಯಾದಲ್ಲಿ ಬಿಡುಗಡೆಯಾಗುತ್ತಿದೆ.

ಕಳೆದ ವರ್ಷದ ಯಶ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಟಾಕ್ಸಿಕ್‍’ ಚಿತರದ ಘೋಷಣೆಯಾಗಿತ್ತು. ಘೋಷಣೆಯ ದಿನದಂದೇ, ಚಿತ್ರದ ಬಿಡುಗಡೆ ದಿನಾಂಕವನ್ನು ಸಹ ಪ್ರಕಟಿಸಲಾಗಿತ್ತು. ಅದರಂತೆ ಚಿತ್ರವು 2025ರ ಏಪ್ರಿಲ್‍ 10ರಂದು ಜಗತ್ತಿನಾದ್ಯಂತ ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರ ಶುರುವಾಗಿದ್ದೇ ಎರಡು ತಿಂಗಳ ಹಿಂದಾದ್ದರಿಂದ, ಅಂದುಕೊಂಡ ಸಮಯದಲ್ಲಿ ಚಿತ್ರವು ಬಿಡುಗಡೆಯಾಗುವುದು ಸಂಶಯ ಎಂಬ ಮಾತು ಕೇಳಿಬಂದಿತ್ತು. ಆದರೆ, ಚಿತ್ರತಂಡ ಈ ಕುರಿತು ಯಾವುದೇ ಸ್ಪಷ್ಟನೆ ಬಂದಿರಲಿಲ್ಲ. ಆದರೆ, ಸಂದರ್ಶನವೊಂದರಲ್ಲಿ ಮಾತನಾಡಿರುವ ಯಶ್‍, ಚಿತ್ರವು ಏಪ್ರಿಲ್‍ 10ಕ್ಕೆ ಬಿಡುಗಡೆ ಆಗುವುದಿಲ್ಲ ಎಂದು ಹೇಳಿದ್ದಾರೆ. ಬಹುಶಃ ನಾಡಿದ್ದು ಬಿಡುಗಡೆಯಾಗುವ ಟೀಸರ್‍ ಅಥವಾ ಮೊದಲ ನೋಟದಲ್ಲಿ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಗುವ ನಿರೀಕ್ಷೆ ಇದೆ.

‘ಟಾಕ್ಸಿಕ್‍’ ಚಿತ್ರಕ್ಕೆ ಗೀತೂ ಮೋಹನ್‍ ದಾಸ್‍ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದರೆ, ಕೆ.ವಿ.ಎನ್. ಪ್ರೊಡಕ್ಷನ್ಸ್ ಮತ್ತು ಮಾನ್‍ಸ್ಟರ್‍ ಮೈಂಡ್‍ ಕ್ರಿಯೇಷಣ್ಸ್ ಬ್ಯಾನರ್‍ ಅಡಿ ಕೋನ ವೆಂಕಟ್‍ನಾರಾಯಣ್‍ ಮತ್ತು ಯಶ್‍ ಜೊತೆಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

‘ಟಾಕ್ಸಿಕ್‍’ ಚಿತ್ರದಲ್ಲಿ ಯಶ್‍, ಕಿಯಾರಾ ಅಡ್ವಾಣಿ, ನಯನತಾರಾ, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್‍, ಅನಿಲ್‍ ಕಪೂರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

10 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

12 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

15 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

19 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

23 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

23 hours ago