ಮನರಂಜನೆ

ಯಶ್‍ ಹುಟ್ಟುಹಬ್ಬಕ್ಕೆ ಒಂದು ಸರ್ಪ್ರೈಸ್‌ ; ಏನಿರಬಹುದು ಅದು?

ಯಶ್‍ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು (ಜನವರಿ 08) ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಈ ಬಾರಿ ತಾವು ಊರಿನಲ್ಲಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ, ಅವರ ಹುಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಒಂದು ಆಶ್ಚರ್ಯ ಕಾದಿದೆ.

ಹೌದು, ಯಶ್‍ ಅಭಿನಯದ ‘ಟಾಕ್ಸಿಕ್‍’ ತಂಡದಿಂದ ಜನವರಿ 08ರಂದು ಒಂದು ಆಶ್ಚರ್ಯ ಕಾದಿದಿಯಂತೆ. ಹಾಗಂತ ಸ್ವತಃ ಯಶ್‍ ಘೋಷಿಸಿದ್ದಾರೆ. ಇಂದು ಸೋಷಿಯಲ್‍ ಮೀಡಿಯಾದಲ್ಲಿ ಹೊಸ ಪೋಸ್ಟರ್‍ ಬಿಡುಗಡೆ ಮಾಡಿರುವ ಅವರು, 08ರಂದು ಒಂದು ಆಶ್ಚರ್ಯ ಕಾದಿದೆ ಎಂದು ಹೇಳಿದ್ದಾರೆ. ಆದರೆ, ಆ ಆಶ್ಚರ್ಯವೇನು ಎಂಬುದನ್ನು ಅವರು ಬಹಿರಂಗಗೊಳಿಸಿಲ್ಲ. ‘Unleashing him’ ಎಂದಷ್ಟೇ ಬರೆದುಕೊಂಡಿದ್ದಾರೆ.

ಹಾಗೆಂದರೆ, ಅವನ ಬಿಡುಗಡೆ ಎಂದು ಅರ್ಥ ಮಾಡಿಕೊಳ್ಳಬಹುದು. ಹಾಗಾದರೆ, ಅಂದು ಏನು ಬಿಡುಗಡೆಯಾಗಬಹುದು? ಮೊದಲ ನೋಟ? ಟೀಸರ್‍? ಪೋಸ್ಟರ್? ಅಥವಾ ಇನ್ನೇನಾದರೂ, ಒಟ್ಟಾರೆ ಜನವರಿ ಎಂಟರ ಬುಧವಾರ ಬೆಳಿಗ್ಗೆ 10.25ಕ್ಕೆ ಸೋಷಿಯಲ್‍ ಮೀಡಿಯಾದಲ್ಲಿ ಬಿಡುಗಡೆಯಾಗುತ್ತಿದೆ.

ಕಳೆದ ವರ್ಷದ ಯಶ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಟಾಕ್ಸಿಕ್‍’ ಚಿತರದ ಘೋಷಣೆಯಾಗಿತ್ತು. ಘೋಷಣೆಯ ದಿನದಂದೇ, ಚಿತ್ರದ ಬಿಡುಗಡೆ ದಿನಾಂಕವನ್ನು ಸಹ ಪ್ರಕಟಿಸಲಾಗಿತ್ತು. ಅದರಂತೆ ಚಿತ್ರವು 2025ರ ಏಪ್ರಿಲ್‍ 10ರಂದು ಜಗತ್ತಿನಾದ್ಯಂತ ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರ ಶುರುವಾಗಿದ್ದೇ ಎರಡು ತಿಂಗಳ ಹಿಂದಾದ್ದರಿಂದ, ಅಂದುಕೊಂಡ ಸಮಯದಲ್ಲಿ ಚಿತ್ರವು ಬಿಡುಗಡೆಯಾಗುವುದು ಸಂಶಯ ಎಂಬ ಮಾತು ಕೇಳಿಬಂದಿತ್ತು. ಆದರೆ, ಚಿತ್ರತಂಡ ಈ ಕುರಿತು ಯಾವುದೇ ಸ್ಪಷ್ಟನೆ ಬಂದಿರಲಿಲ್ಲ. ಆದರೆ, ಸಂದರ್ಶನವೊಂದರಲ್ಲಿ ಮಾತನಾಡಿರುವ ಯಶ್‍, ಚಿತ್ರವು ಏಪ್ರಿಲ್‍ 10ಕ್ಕೆ ಬಿಡುಗಡೆ ಆಗುವುದಿಲ್ಲ ಎಂದು ಹೇಳಿದ್ದಾರೆ. ಬಹುಶಃ ನಾಡಿದ್ದು ಬಿಡುಗಡೆಯಾಗುವ ಟೀಸರ್‍ ಅಥವಾ ಮೊದಲ ನೋಟದಲ್ಲಿ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಗುವ ನಿರೀಕ್ಷೆ ಇದೆ.

‘ಟಾಕ್ಸಿಕ್‍’ ಚಿತ್ರಕ್ಕೆ ಗೀತೂ ಮೋಹನ್‍ ದಾಸ್‍ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದರೆ, ಕೆ.ವಿ.ಎನ್. ಪ್ರೊಡಕ್ಷನ್ಸ್ ಮತ್ತು ಮಾನ್‍ಸ್ಟರ್‍ ಮೈಂಡ್‍ ಕ್ರಿಯೇಷಣ್ಸ್ ಬ್ಯಾನರ್‍ ಅಡಿ ಕೋನ ವೆಂಕಟ್‍ನಾರಾಯಣ್‍ ಮತ್ತು ಯಶ್‍ ಜೊತೆಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

‘ಟಾಕ್ಸಿಕ್‍’ ಚಿತ್ರದಲ್ಲಿ ಯಶ್‍, ಕಿಯಾರಾ ಅಡ್ವಾಣಿ, ನಯನತಾರಾ, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್‍, ಅನಿಲ್‍ ಕಪೂರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಭೂಮಿಕಾ

Recent Posts

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

1 hour ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

7 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

7 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

8 hours ago

ಲಕ್ನೋ: ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು

ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…

9 hours ago