ಮನರಂಜನೆ

ಅಭಿಮಾನಿಗಳಿಂದಲೇ ಬೆಂಗಳೂರಿನಲ್ಲಿ ವಿಷ್ಣುವರ್ಧನ್‍ ಸ್ಮಾರಕ: ಸೆ.18ಕ್ಕೆ ಅಡಿಗಲ್ಲು

ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‍ ಅವರ ಪುಣ್ಯಭೂಮಿ ನೆಲೆಸಮವಾಗಿ ಮುಂದೇನು ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಬೆಂಗಳೂರಿನಲ್ಲೇ ಇನ್ನೊಂದು ಸ್ಮಾರಕ ಇನ್ನೊಂದು ವರ್ಷದಲ್ಲಿ ತಲೆ ಎತ್ತಲಿದ್ದು, ಅದಕ್ಕೂ ಮೊದಲು ಸೆ.18ರ ವಿಷ್ಣುವರ್ಧನ್‍ ಹುಟ್ಟುಹಬ್ಬದಂದು ಆ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುತ್ತದೆ.

ಅಲ್ಲಿಗೆ, ವಿಷ್ಣುವರ್ಧನ್‍ ಅವರ ಸ್ಮಾರಕಕ್ಕಾಗಿ ಮೈಸೂರಿನವರೆಗೂ ಹೋಗುವುದು ಕಷ್ಟ ಎನ್ನುತ್ತಿದ್ದವರಿಗೆ, ಸ್ಮಾರಕಕ್ಕಾಗಿ ಕೆಂಗೇರಿ ಬಳಿ ಅರ್ಧ ಎಕರೆ ಜಾಗ ಖರೀದಿ ಮಾಡಿದ್ದಾರೆ ನಟ-ನಿರ್ದೇಶಕ ಸುದೀಪ್‍. ಅಲ್ಲಿ 25 ಅಡಿಗಳ ದೊಡ್ಡ ಪ್ರತಿಮೆ ಜೊತೆಗೆ ಗ್ರಂಥಾಲಯ ಸಹ ಇರಲಿದೆಯಂತೆ. ವಿಶೇಷವೆಂದರೆ, ಇಡೀ ಭಾರತದಲ್ಲೇ ದೊಡ್ಡ ನಟರ ಅಭಿಮಾನಿಗಳು, ಯಾರದೇ ಸಹಾಯವಿಲ್ಲದೆ, ತಾವೇ ದುಡ್ಡು ಹಾಕಿ ನಿರ್ಮಾಣ ಮಾಡುತ್ತಿರುವ ಸ್ಮಾರಕ ಇದಾಗಲಿದೆ.

ಸೋಮವಾರ ರಾತ್ರಿ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‍, ‘ಸೆಪ್ಟೆಂಬರ್.2ರಂದು ಸುದೀಪ್ ಅವರ ಹುಟ್ಟುಹಬ್ಬ. ಅಂದೇ ವಿಷ್ಣುವರ್ಧನ್‍ ಅವರ ಸ್ಮಾರಕದ ಬ್ಲೂಪ್ರಿಂಟ್‍ ಅನ್ನು ಸುದೀಪ್‍ ಅನಾವರಣ ಮಾಡಲಿದ್ದಾರೆ. ಆ ನಂತರ ವಿಷ್ಣುವರ್ಧನ್‍ ಅವರ ಹುಟ್ಟುಹಬ್ಬದ ದಿನ, ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುವುದು’ ಎಂದರು.

ಈ ಸ್ಮಾರಕವು ಅಭಿಮಾನ್ ಸ್ಟುಡಿಯೋ ಪುಣ್ಯಭೂಮಿಗೆ ಸಮ ಅಲ್ಲ ಅಥವಾ ಮೈಸೂರಿನಲ್ಲಿರುವ ವಿಷ್ಣುವರ್ಧನ್‍ ಅವರ ಸ್ಮಾರಕಕ್ಕೆ ಪರ್ಯಾಯವೂ ಅಲ್ಲ ಎನ್ನುವ ಅವರು, ‘ಇದು ಸ್ಮಾರಕ ಎನ್ನುವುದಕ್ಕಿಂತ ದರ್ಶನ ಕೇಂದ್ರ ಎನ್ನಬಹುದು. ಅದು ಅರ್ಥಪೂರ್ಣ ಕೆಲಸಕ್ಕೆ ವೇದಿಕೆಯಾಗಲಿದೆ’ ಎಂದರು.

ಡಾ. ವಿಷ್ಣು ಸೇನಾ ಸಮಿತಿಯು ಇದಕ್ಕೂ ಮೊದಲು ಡಾ.ವಿಷ್ಣುವರ್ಧನ್‍ ಅವರ 75ನೇ ಹುಟ್ಟುಹಬ್ಬವನ್ನು ಎರಡು ದಿನಗಳ ಕಾಲ ಅರಮನೆ ಮೈದಾನದಲ್ಲಿ ನಡೆಸುವುದಕ್ಕೆ ತೀರ್ಮಾನಿಸಿತ್ತು. ಈಗ ಆ ಕಾರ್ಯಕ್ರಮವನ್ನು ನಂದಿ ಲಿಂಕ್ಸ್ ಗ್ರೌಂಡ್‍ಗೆ ಸ್ಥಳಾಂತರಿಸಲಾಗಿದೆ. ಈ ಅಮೃತ ಮಹೋತ್ಸವದಲ್ಲಿ ಕನ್ನಡ ಚಿತ್ರರಂಗದ ಹಲವು ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

37 mins ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

1 hour ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

1 hour ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

1 hour ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

1 hour ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

1 hour ago