ಮನರಂಜನೆ

ಅಭಿಮಾನಿಗಳಿಂದಲೇ ಬೆಂಗಳೂರಿನಲ್ಲಿ ವಿಷ್ಣುವರ್ಧನ್‍ ಸ್ಮಾರಕ: ಸೆ.18ಕ್ಕೆ ಅಡಿಗಲ್ಲು

ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‍ ಅವರ ಪುಣ್ಯಭೂಮಿ ನೆಲೆಸಮವಾಗಿ ಮುಂದೇನು ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಬೆಂಗಳೂರಿನಲ್ಲೇ ಇನ್ನೊಂದು ಸ್ಮಾರಕ ಇನ್ನೊಂದು ವರ್ಷದಲ್ಲಿ ತಲೆ ಎತ್ತಲಿದ್ದು, ಅದಕ್ಕೂ ಮೊದಲು ಸೆ.18ರ ವಿಷ್ಣುವರ್ಧನ್‍ ಹುಟ್ಟುಹಬ್ಬದಂದು ಆ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುತ್ತದೆ.

ಅಲ್ಲಿಗೆ, ವಿಷ್ಣುವರ್ಧನ್‍ ಅವರ ಸ್ಮಾರಕಕ್ಕಾಗಿ ಮೈಸೂರಿನವರೆಗೂ ಹೋಗುವುದು ಕಷ್ಟ ಎನ್ನುತ್ತಿದ್ದವರಿಗೆ, ಸ್ಮಾರಕಕ್ಕಾಗಿ ಕೆಂಗೇರಿ ಬಳಿ ಅರ್ಧ ಎಕರೆ ಜಾಗ ಖರೀದಿ ಮಾಡಿದ್ದಾರೆ ನಟ-ನಿರ್ದೇಶಕ ಸುದೀಪ್‍. ಅಲ್ಲಿ 25 ಅಡಿಗಳ ದೊಡ್ಡ ಪ್ರತಿಮೆ ಜೊತೆಗೆ ಗ್ರಂಥಾಲಯ ಸಹ ಇರಲಿದೆಯಂತೆ. ವಿಶೇಷವೆಂದರೆ, ಇಡೀ ಭಾರತದಲ್ಲೇ ದೊಡ್ಡ ನಟರ ಅಭಿಮಾನಿಗಳು, ಯಾರದೇ ಸಹಾಯವಿಲ್ಲದೆ, ತಾವೇ ದುಡ್ಡು ಹಾಕಿ ನಿರ್ಮಾಣ ಮಾಡುತ್ತಿರುವ ಸ್ಮಾರಕ ಇದಾಗಲಿದೆ.

ಸೋಮವಾರ ರಾತ್ರಿ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‍, ‘ಸೆಪ್ಟೆಂಬರ್.2ರಂದು ಸುದೀಪ್ ಅವರ ಹುಟ್ಟುಹಬ್ಬ. ಅಂದೇ ವಿಷ್ಣುವರ್ಧನ್‍ ಅವರ ಸ್ಮಾರಕದ ಬ್ಲೂಪ್ರಿಂಟ್‍ ಅನ್ನು ಸುದೀಪ್‍ ಅನಾವರಣ ಮಾಡಲಿದ್ದಾರೆ. ಆ ನಂತರ ವಿಷ್ಣುವರ್ಧನ್‍ ಅವರ ಹುಟ್ಟುಹಬ್ಬದ ದಿನ, ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುವುದು’ ಎಂದರು.

ಈ ಸ್ಮಾರಕವು ಅಭಿಮಾನ್ ಸ್ಟುಡಿಯೋ ಪುಣ್ಯಭೂಮಿಗೆ ಸಮ ಅಲ್ಲ ಅಥವಾ ಮೈಸೂರಿನಲ್ಲಿರುವ ವಿಷ್ಣುವರ್ಧನ್‍ ಅವರ ಸ್ಮಾರಕಕ್ಕೆ ಪರ್ಯಾಯವೂ ಅಲ್ಲ ಎನ್ನುವ ಅವರು, ‘ಇದು ಸ್ಮಾರಕ ಎನ್ನುವುದಕ್ಕಿಂತ ದರ್ಶನ ಕೇಂದ್ರ ಎನ್ನಬಹುದು. ಅದು ಅರ್ಥಪೂರ್ಣ ಕೆಲಸಕ್ಕೆ ವೇದಿಕೆಯಾಗಲಿದೆ’ ಎಂದರು.

ಡಾ. ವಿಷ್ಣು ಸೇನಾ ಸಮಿತಿಯು ಇದಕ್ಕೂ ಮೊದಲು ಡಾ.ವಿಷ್ಣುವರ್ಧನ್‍ ಅವರ 75ನೇ ಹುಟ್ಟುಹಬ್ಬವನ್ನು ಎರಡು ದಿನಗಳ ಕಾಲ ಅರಮನೆ ಮೈದಾನದಲ್ಲಿ ನಡೆಸುವುದಕ್ಕೆ ತೀರ್ಮಾನಿಸಿತ್ತು. ಈಗ ಆ ಕಾರ್ಯಕ್ರಮವನ್ನು ನಂದಿ ಲಿಂಕ್ಸ್ ಗ್ರೌಂಡ್‍ಗೆ ಸ್ಥಳಾಂತರಿಸಲಾಗಿದೆ. ಈ ಅಮೃತ ಮಹೋತ್ಸವದಲ್ಲಿ ಕನ್ನಡ ಚಿತ್ರರಂಗದ ಹಲವು ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

54 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

55 mins ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

57 mins ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

59 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

1 hour ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago