ಮನರಂಜನೆ

ಅಭಿಮಾನಿಗಳಿಂದಲೇ ಬೆಂಗಳೂರಿನಲ್ಲಿ ವಿಷ್ಣುವರ್ಧನ್‍ ಸ್ಮಾರಕ: ಸೆ.18ಕ್ಕೆ ಅಡಿಗಲ್ಲು

ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‍ ಅವರ ಪುಣ್ಯಭೂಮಿ ನೆಲೆಸಮವಾಗಿ ಮುಂದೇನು ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಬೆಂಗಳೂರಿನಲ್ಲೇ ಇನ್ನೊಂದು ಸ್ಮಾರಕ ಇನ್ನೊಂದು ವರ್ಷದಲ್ಲಿ ತಲೆ ಎತ್ತಲಿದ್ದು, ಅದಕ್ಕೂ ಮೊದಲು ಸೆ.18ರ ವಿಷ್ಣುವರ್ಧನ್‍ ಹುಟ್ಟುಹಬ್ಬದಂದು ಆ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುತ್ತದೆ.

ಅಲ್ಲಿಗೆ, ವಿಷ್ಣುವರ್ಧನ್‍ ಅವರ ಸ್ಮಾರಕಕ್ಕಾಗಿ ಮೈಸೂರಿನವರೆಗೂ ಹೋಗುವುದು ಕಷ್ಟ ಎನ್ನುತ್ತಿದ್ದವರಿಗೆ, ಸ್ಮಾರಕಕ್ಕಾಗಿ ಕೆಂಗೇರಿ ಬಳಿ ಅರ್ಧ ಎಕರೆ ಜಾಗ ಖರೀದಿ ಮಾಡಿದ್ದಾರೆ ನಟ-ನಿರ್ದೇಶಕ ಸುದೀಪ್‍. ಅಲ್ಲಿ 25 ಅಡಿಗಳ ದೊಡ್ಡ ಪ್ರತಿಮೆ ಜೊತೆಗೆ ಗ್ರಂಥಾಲಯ ಸಹ ಇರಲಿದೆಯಂತೆ. ವಿಶೇಷವೆಂದರೆ, ಇಡೀ ಭಾರತದಲ್ಲೇ ದೊಡ್ಡ ನಟರ ಅಭಿಮಾನಿಗಳು, ಯಾರದೇ ಸಹಾಯವಿಲ್ಲದೆ, ತಾವೇ ದುಡ್ಡು ಹಾಕಿ ನಿರ್ಮಾಣ ಮಾಡುತ್ತಿರುವ ಸ್ಮಾರಕ ಇದಾಗಲಿದೆ.

ಸೋಮವಾರ ರಾತ್ರಿ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‍, ‘ಸೆಪ್ಟೆಂಬರ್.2ರಂದು ಸುದೀಪ್ ಅವರ ಹುಟ್ಟುಹಬ್ಬ. ಅಂದೇ ವಿಷ್ಣುವರ್ಧನ್‍ ಅವರ ಸ್ಮಾರಕದ ಬ್ಲೂಪ್ರಿಂಟ್‍ ಅನ್ನು ಸುದೀಪ್‍ ಅನಾವರಣ ಮಾಡಲಿದ್ದಾರೆ. ಆ ನಂತರ ವಿಷ್ಣುವರ್ಧನ್‍ ಅವರ ಹುಟ್ಟುಹಬ್ಬದ ದಿನ, ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುವುದು’ ಎಂದರು.

ಈ ಸ್ಮಾರಕವು ಅಭಿಮಾನ್ ಸ್ಟುಡಿಯೋ ಪುಣ್ಯಭೂಮಿಗೆ ಸಮ ಅಲ್ಲ ಅಥವಾ ಮೈಸೂರಿನಲ್ಲಿರುವ ವಿಷ್ಣುವರ್ಧನ್‍ ಅವರ ಸ್ಮಾರಕಕ್ಕೆ ಪರ್ಯಾಯವೂ ಅಲ್ಲ ಎನ್ನುವ ಅವರು, ‘ಇದು ಸ್ಮಾರಕ ಎನ್ನುವುದಕ್ಕಿಂತ ದರ್ಶನ ಕೇಂದ್ರ ಎನ್ನಬಹುದು. ಅದು ಅರ್ಥಪೂರ್ಣ ಕೆಲಸಕ್ಕೆ ವೇದಿಕೆಯಾಗಲಿದೆ’ ಎಂದರು.

ಡಾ. ವಿಷ್ಣು ಸೇನಾ ಸಮಿತಿಯು ಇದಕ್ಕೂ ಮೊದಲು ಡಾ.ವಿಷ್ಣುವರ್ಧನ್‍ ಅವರ 75ನೇ ಹುಟ್ಟುಹಬ್ಬವನ್ನು ಎರಡು ದಿನಗಳ ಕಾಲ ಅರಮನೆ ಮೈದಾನದಲ್ಲಿ ನಡೆಸುವುದಕ್ಕೆ ತೀರ್ಮಾನಿಸಿತ್ತು. ಈಗ ಆ ಕಾರ್ಯಕ್ರಮವನ್ನು ನಂದಿ ಲಿಂಕ್ಸ್ ಗ್ರೌಂಡ್‍ಗೆ ಸ್ಥಳಾಂತರಿಸಲಾಗಿದೆ. ಈ ಅಮೃತ ಮಹೋತ್ಸವದಲ್ಲಿ ಕನ್ನಡ ಚಿತ್ರರಂಗದ ಹಲವು ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

11 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

12 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

19 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

19 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

24 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

24 hours ago