ಮನರಂಜನೆ

‘ಕೂಲಿ’ ಚಿತ್ರದಲ್ಲಿ ಆಮೀರ್ ಖಾನ್‍?; 30 ವರ್ಷಗಳ ನಂತರ ರಜನಿಕಾಂತ್ ಜೊತೆಗೆ ನಟನೆ

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದ ಚಿತ್ರೀಕರಣ ಕೆಲವು ದಿನಗಳಿಂದ ಹೈದರಾಬಾದ್ನಲ್ಲಿ ಸತತವಾಗಿ ನಡೆಯುತ್ತಿದೆ. ರಜನಿಕಾಂತ್‍ ಅಭಿನಯದ ಹಲವು ಪ್ರಮುಖ ದೃಶ್ಯಗಳನ್ನು ನಿರ್ದೇಶಕ ಲೋಕೇಶ್ ‍ಕನಕರಾಜ್‍ ಸೆರೆಹಿಡಿಯುವಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಚಿತ್ರದಲ್ಲಿ ಬಾಲಿವುಡ್‍ ನಟ ಆಮೀರ್ ಖಾನ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಎಂಬ ಗುಸುಗುಸು ಕೇಳಿಬರುತ್ತಿದೆ.

ಹೌದು, ‘ಕೂಲಿ’ ಚಿತ್ರದ ಒಂದು ಪ್ರಮುಖ ಪಾತ್ರದಲ್ಲಿ ಆಮೀರ್ ಖಾನ್‍ ನಟಿಸುತ್ತಿದ್ದಾರೆ ಎಂಬ ಸುದ್ದಿ ಇದೆ. ಏನು ಪಾತ್ರ, ಯಾವಾಗ ಚಿತ್ರೀಕರಣ … ಮುಂತಾದ ಯಾವ ವಿಷಯದ ಬಗ್ಗೆಯೂ ಚಿತ್ರತಂಡ ಬಾಯಿಬಿಟ್ಟಿಲ್ಲ. ಅಸಲಿಗೆ ಚಿತ್ರದಲ್ಲಿ ಆಮೀರ್‍ ಖಾನ್‍ ನಟಿಸುತ್ತಿದ್ದಾರೋ, ಇಲ್ಲವೋ ಎಂಬುದನ್ನೇ ಬಹಿರಂಗಪಡಿಸಿಲ್ಲ. ಹೀಗಿರುವಾಗಲೇ, ಈ ತರಹದ ಸುದ್ದಿ ಕೇಳಿಬಂದಿದೆ.

ಅದು ನಿಜವೇ ಆದರೆ, ಸುಮಾರು 30 ವರ್ಷಗಳ ನಂತರ ರಜನಿಕಾಂತ್‍ ಮತ್ತು ಆಮೀರ್ ಖಾನ್ ಒಟ್ಟಾಗಿ ನಟಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರಿಬ್ಬರೂ ‘ಆತಂಕ್‍ ಹೀ ಆತಂಕ್‍’ ಎಂಬ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ಈ ಚಿತ್ರ 1995ರಲ್ಲಿ ಬಿಡುಗಡೆಯಾಗಿತ್ತು. ಇದು ರಜನಿಕಾಂತ್‍ ಅವರು ಹಿಂದಿಯಲ್ಲಿ ಕಾಣಿಸಿಕೊಂಡ ಪೂರ್ಣಪ್ರಮಾಣದ ಕೊನೆಯ ಚಿತ್ರ. ಆ ನಂತರ ಅವರು ಒಂದೆರಡು ಚಿತ್ರಗಳಲ್ಲಿ ನಟಿಸಿದರೂ, ಅವೆಲ್ಲವೂ ಅತಿಥಿ ಪಾತ್ರಗಳಾಗಿದ್ದವು.

ರಜನಿಕಾಂತ್ ಇತ್ತೀಚೆಗೆ ಹಲವು ಜನಪ್ರಿಯ ನಟರ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ‘ಜೈಲರ್‍’ ಚಿತ್ರದಲ್ಲಿ ಅವರ ಜೊತೆಗೆ ಶಿವರಾಜಕುಮಾರ್, ಜಾಕಿ ಶ್ರಾಫ್‍ ಹಾಗೂ ಮೋಹನ್ ಲಾಲ್‍ ನಟಿಸಿದ್ದರು. ‘ವೆಟ್ಟಾಯನ್‍’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್‍, ರಾಣಾ ದಗ್ಗುಬಾಟಿ, ಫಹಾದ್‍ ಫಾಸಿಲ್‍ ಮುಂತಾದವರು ನಟಿಸಿದ್ದರು. ಈಗ ‘ಕೂಲಿ’ ಚಿತ್ರದಲ್ಲಿ ಉಪೇಂದ್ರ ನಟಿಸುತ್ತಿದ್ದಾರೆ. ಜೊತೆಗೆ ಆಮೀರ್ ಖಾನ್‍ ಸಹ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್‍ ಜೊತೆಗೆ ಶ್ರುತಿ ಹಾಸನ್, ಉಪೇಂದ್ರ, ಸತ್ಯರಾಜ್‍, ಮಹೇಂದ್ರನ್‍ ಮುಂತಾದವರು ನಟಿಸುತ್ತಿದ್ದು, ಲೋಕೇಶ್‍ ಕನಕರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸನ್‍ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿದೆ.

ಭೂಮಿಕಾ

Recent Posts

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

13 mins ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

2 hours ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

2 hours ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

3 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

3 hours ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

3 hours ago