ಮನರಂಜನೆ

‘ಕೂಲಿ’ ಚಿತ್ರದಲ್ಲಿ ಆಮೀರ್ ಖಾನ್‍?; 30 ವರ್ಷಗಳ ನಂತರ ರಜನಿಕಾಂತ್ ಜೊತೆಗೆ ನಟನೆ

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದ ಚಿತ್ರೀಕರಣ ಕೆಲವು ದಿನಗಳಿಂದ ಹೈದರಾಬಾದ್ನಲ್ಲಿ ಸತತವಾಗಿ ನಡೆಯುತ್ತಿದೆ. ರಜನಿಕಾಂತ್‍ ಅಭಿನಯದ ಹಲವು ಪ್ರಮುಖ ದೃಶ್ಯಗಳನ್ನು ನಿರ್ದೇಶಕ ಲೋಕೇಶ್ ‍ಕನಕರಾಜ್‍ ಸೆರೆಹಿಡಿಯುವಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಚಿತ್ರದಲ್ಲಿ ಬಾಲಿವುಡ್‍ ನಟ ಆಮೀರ್ ಖಾನ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಎಂಬ ಗುಸುಗುಸು ಕೇಳಿಬರುತ್ತಿದೆ.

ಹೌದು, ‘ಕೂಲಿ’ ಚಿತ್ರದ ಒಂದು ಪ್ರಮುಖ ಪಾತ್ರದಲ್ಲಿ ಆಮೀರ್ ಖಾನ್‍ ನಟಿಸುತ್ತಿದ್ದಾರೆ ಎಂಬ ಸುದ್ದಿ ಇದೆ. ಏನು ಪಾತ್ರ, ಯಾವಾಗ ಚಿತ್ರೀಕರಣ … ಮುಂತಾದ ಯಾವ ವಿಷಯದ ಬಗ್ಗೆಯೂ ಚಿತ್ರತಂಡ ಬಾಯಿಬಿಟ್ಟಿಲ್ಲ. ಅಸಲಿಗೆ ಚಿತ್ರದಲ್ಲಿ ಆಮೀರ್‍ ಖಾನ್‍ ನಟಿಸುತ್ತಿದ್ದಾರೋ, ಇಲ್ಲವೋ ಎಂಬುದನ್ನೇ ಬಹಿರಂಗಪಡಿಸಿಲ್ಲ. ಹೀಗಿರುವಾಗಲೇ, ಈ ತರಹದ ಸುದ್ದಿ ಕೇಳಿಬಂದಿದೆ.

ಅದು ನಿಜವೇ ಆದರೆ, ಸುಮಾರು 30 ವರ್ಷಗಳ ನಂತರ ರಜನಿಕಾಂತ್‍ ಮತ್ತು ಆಮೀರ್ ಖಾನ್ ಒಟ್ಟಾಗಿ ನಟಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರಿಬ್ಬರೂ ‘ಆತಂಕ್‍ ಹೀ ಆತಂಕ್‍’ ಎಂಬ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ಈ ಚಿತ್ರ 1995ರಲ್ಲಿ ಬಿಡುಗಡೆಯಾಗಿತ್ತು. ಇದು ರಜನಿಕಾಂತ್‍ ಅವರು ಹಿಂದಿಯಲ್ಲಿ ಕಾಣಿಸಿಕೊಂಡ ಪೂರ್ಣಪ್ರಮಾಣದ ಕೊನೆಯ ಚಿತ್ರ. ಆ ನಂತರ ಅವರು ಒಂದೆರಡು ಚಿತ್ರಗಳಲ್ಲಿ ನಟಿಸಿದರೂ, ಅವೆಲ್ಲವೂ ಅತಿಥಿ ಪಾತ್ರಗಳಾಗಿದ್ದವು.

ರಜನಿಕಾಂತ್ ಇತ್ತೀಚೆಗೆ ಹಲವು ಜನಪ್ರಿಯ ನಟರ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ‘ಜೈಲರ್‍’ ಚಿತ್ರದಲ್ಲಿ ಅವರ ಜೊತೆಗೆ ಶಿವರಾಜಕುಮಾರ್, ಜಾಕಿ ಶ್ರಾಫ್‍ ಹಾಗೂ ಮೋಹನ್ ಲಾಲ್‍ ನಟಿಸಿದ್ದರು. ‘ವೆಟ್ಟಾಯನ್‍’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್‍, ರಾಣಾ ದಗ್ಗುಬಾಟಿ, ಫಹಾದ್‍ ಫಾಸಿಲ್‍ ಮುಂತಾದವರು ನಟಿಸಿದ್ದರು. ಈಗ ‘ಕೂಲಿ’ ಚಿತ್ರದಲ್ಲಿ ಉಪೇಂದ್ರ ನಟಿಸುತ್ತಿದ್ದಾರೆ. ಜೊತೆಗೆ ಆಮೀರ್ ಖಾನ್‍ ಸಹ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್‍ ಜೊತೆಗೆ ಶ್ರುತಿ ಹಾಸನ್, ಉಪೇಂದ್ರ, ಸತ್ಯರಾಜ್‍, ಮಹೇಂದ್ರನ್‍ ಮುಂತಾದವರು ನಟಿಸುತ್ತಿದ್ದು, ಲೋಕೇಶ್‍ ಕನಕರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸನ್‍ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿದೆ.

ಭೂಮಿಕಾ

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago