ಮನರಂಜನೆ

ಅಭಿಮನ್ಯು ಈಗ ‘ಅಭಿಮನ್ಯು S/O ಕಾಶಿನಾಥ್’; ಚಿತ್ರ ಪ್ರಾರಂಭ

ಕನ್ನಡದ ಜನಪ್ರಿಯ ನಟ-ನಿರ್ದೇಶಕ ಕಾಶೀನಾಥ್‍ ಅವರ ಮಗ ಅಭಿಮನ್ಯು ಚಿತ್ರರಂಗಕ್ಕೆ ಬಂದು 15 ವರ್ಷಗಳಾದರೂ ಒಂದೊಳ್ಳೆಯ ಗೆಲುವು ನೋಡುವುದಕ್ಕೆ ಸಾಧ್ಯವಾಗುತ್ತಲೇ ಇಲ್ಲ. ಒಂದು ದೊಡ್ಡ ಬ್ರೇಕ್‍ಗೆ ಕಾಯುತ್ತಿರುವ ಅಭಿಮನ್ಯು, ಇದೀಗ ಸದ್ದಿಲ್ಲದೆ ಹೊಸ ಚಿತ್ರದಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ.

ಅಭಿಮನ್ಯು ಅಭಿನಯದ ಹೊಸ ಚಿತ್ರ ‘ಅಭಿಮನ್ಯು S/O ಕಾಶಿನಾಥ್’. ಈ ಚಿತ್ರದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನ ಸಹಕಾರ ನಗರದ ಛೇರ್ಮನ್ ಕ್ಲಬ್ ನಲ್ಲಿ ನಡೆಯಿತು. ಈ ಚಿತ್ರದ ಮುಹೂರ್ತಕ್ಕೆ ವಿಶೇಷ ಅತಿಥಿಯಾಗಿ ಕೋಮಲ್ ಕುಮಾರ್ ಆಗಮಿಸಿ, ಮೊದಲ ದೃಶ್ಯಕ್ಕೆ ಕ್ಲಾಪ್‍ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಈ ಹಿಂದೆ ಜಗ್ಗೇಶ್‍ ಅಭಿನಯದ ‘8MM’ ಸೇರಿದಂತೆ ಒಂದಿಷ್ಟು ಚಿತ್ರಗಳಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ರಾಜ್ ಮುರಳಿ ಈಗ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಹೆಜ್ಜೆ ಇಡುತ್ತಿದ್ದಾರೆ. ‘ಅಭಿಮನ್ಯು S/O ಕಾಶಿನಾಥ್’ ಚಿತ್ರದ ಮೂಲಕ ರಾಜ್ ಕಾಮಿಡಿ ಡ್ರಾಮಾ ಕಥೆ ಹೇಳೋದಿಕ್ಕೆ ಹೊರಟ್ಟಿದ್ದಾರೆ. ೀ ಚಿತ್ರವನ್ನು ಐಸಿರಿ ಪ್ರೊಡಕ್ಷನ್ ನಡಿ ಮಾರಪ್ಪ ಶ್ರೀನಿವಾಸ್ ನಿರ್ಮಾಣ ಮಾಡುತ್ತಿದ್ದಾರೆ.

‘ಅಭಿಮನ್ಯು S/O ಕಾಶಿನಾಥ್’ ಚಿತ್ರವು ಕಾಶೀನಾಥ್‍ ಶೈಲಿಯ ಚಿತ್ರವಂತೆ. ಈ ಕುರಿತು ಮಾತನಾಡುವ ಅಭಿಮನ್ಯು, ‘ರಾಜ್‌ಮುರಳಿ ಅಪ್ಪನ ಜಾನರ್ ಇಟ್ಕೊಂಡು ಈಗಿನ ಕಾಲದ ಹುಡುಗರಿಗೆ ಚಿತ್ರ ಮಾಡುತ್ತಿದ್ದಾರೆ. ಅಪ್ಪ ಇದ್ದಾಗ ನನಗೆ ಬರುತ್ತಿದ್ದ ಆಫರ್ ಇಂತಹದ್ದೇ. ಅಪ್ಪನ ನಿರ್ದೇಶನದಲ್ಲಿ ನಾನು ನಟನೆ ಮಾಡಬೇಕು ಎಂದು ಪ್ರಯತ್ನಗಳಾದವು. ‘ಅನಂತನ ಅವಾಂತರ – 2’, ‘ಅನುಭವ – 2’ ತರಹದ ಆಫರ್‍ಗಳು ಬರುತ್ತಿದ್ದವು. ಆ ತರಹದ ಪಾತ್ರಗಳು ನನಗೆ ಹೊಂದುವುದಿಲ್ಲ ಎಂದು ಅಪ್ಪನಿಗೂ ಅನಿಸುತ್ತಿತ್ತು. ನನಗೂ ಅದನ್ನು ಮಾಡುತ್ತೇನೆ ಅನ್ನೋ ವಿಶ್ವಾಸ ಇರಲಿಲ್ಲ. ಈಗ ಅಂಥದ್ದೇ ಒಂದು ಪ್ರಯತ್ನ ಮಾಡುತ್ತಿದ್ದೇವೆ’ ಎಂದರು.

‘ಅಭಿಮನ್ಯು S/O ಕಾಶಿನಾಥ್’ ಚಿತ್ರಕ್ಕೆ ‘ಹೊಸ ಅನುಭವ’ ಎಂಬ ಅಡಿಬರಹ ಇದೆ. ಚಿತ್ರದಲ್ಲಿ ಅಭಿಮನ್ಯುಗೆ ಸ್ಪಂದನ ಸೋಮಣ್ಣ, ವಿಜಯಶ್ರೀ ಕಲ್ಬುರ್ಗಿ ನಾಯಕಿಯರಾಗಿ ನಟಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಅಭಿನಂದನ್ ಕಶ್ಯಪ್ ಸಂಗೀತ ಈ ಚಿತ್ರಕ್ಕಿದೆ.

ನವೆಂಬರ್ ತಿಂಗಳಿನಿಂದ ‘ಅಭಿಮನ್ಯು S/O ಕಾಶಿನಾಥ್’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಚಿಕ್ಕಮಗಳೂರು, ಮೈಸೂರು, ಹೈದ್ರಾಬಾದ್ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಭೂಮಿಕಾ

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

11 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

11 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

11 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

11 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

11 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

11 hours ago