ಮನರಂಜನೆ

ಅಭಿಮನ್ಯು ಈಗ ‘ಅಭಿಮನ್ಯು S/O ಕಾಶಿನಾಥ್’; ಚಿತ್ರ ಪ್ರಾರಂಭ

ಕನ್ನಡದ ಜನಪ್ರಿಯ ನಟ-ನಿರ್ದೇಶಕ ಕಾಶೀನಾಥ್‍ ಅವರ ಮಗ ಅಭಿಮನ್ಯು ಚಿತ್ರರಂಗಕ್ಕೆ ಬಂದು 15 ವರ್ಷಗಳಾದರೂ ಒಂದೊಳ್ಳೆಯ ಗೆಲುವು ನೋಡುವುದಕ್ಕೆ ಸಾಧ್ಯವಾಗುತ್ತಲೇ ಇಲ್ಲ. ಒಂದು ದೊಡ್ಡ ಬ್ರೇಕ್‍ಗೆ ಕಾಯುತ್ತಿರುವ ಅಭಿಮನ್ಯು, ಇದೀಗ ಸದ್ದಿಲ್ಲದೆ ಹೊಸ ಚಿತ್ರದಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ.

ಅಭಿಮನ್ಯು ಅಭಿನಯದ ಹೊಸ ಚಿತ್ರ ‘ಅಭಿಮನ್ಯು S/O ಕಾಶಿನಾಥ್’. ಈ ಚಿತ್ರದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನ ಸಹಕಾರ ನಗರದ ಛೇರ್ಮನ್ ಕ್ಲಬ್ ನಲ್ಲಿ ನಡೆಯಿತು. ಈ ಚಿತ್ರದ ಮುಹೂರ್ತಕ್ಕೆ ವಿಶೇಷ ಅತಿಥಿಯಾಗಿ ಕೋಮಲ್ ಕುಮಾರ್ ಆಗಮಿಸಿ, ಮೊದಲ ದೃಶ್ಯಕ್ಕೆ ಕ್ಲಾಪ್‍ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಈ ಹಿಂದೆ ಜಗ್ಗೇಶ್‍ ಅಭಿನಯದ ‘8MM’ ಸೇರಿದಂತೆ ಒಂದಿಷ್ಟು ಚಿತ್ರಗಳಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ರಾಜ್ ಮುರಳಿ ಈಗ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಹೆಜ್ಜೆ ಇಡುತ್ತಿದ್ದಾರೆ. ‘ಅಭಿಮನ್ಯು S/O ಕಾಶಿನಾಥ್’ ಚಿತ್ರದ ಮೂಲಕ ರಾಜ್ ಕಾಮಿಡಿ ಡ್ರಾಮಾ ಕಥೆ ಹೇಳೋದಿಕ್ಕೆ ಹೊರಟ್ಟಿದ್ದಾರೆ. ೀ ಚಿತ್ರವನ್ನು ಐಸಿರಿ ಪ್ರೊಡಕ್ಷನ್ ನಡಿ ಮಾರಪ್ಪ ಶ್ರೀನಿವಾಸ್ ನಿರ್ಮಾಣ ಮಾಡುತ್ತಿದ್ದಾರೆ.

‘ಅಭಿಮನ್ಯು S/O ಕಾಶಿನಾಥ್’ ಚಿತ್ರವು ಕಾಶೀನಾಥ್‍ ಶೈಲಿಯ ಚಿತ್ರವಂತೆ. ಈ ಕುರಿತು ಮಾತನಾಡುವ ಅಭಿಮನ್ಯು, ‘ರಾಜ್‌ಮುರಳಿ ಅಪ್ಪನ ಜಾನರ್ ಇಟ್ಕೊಂಡು ಈಗಿನ ಕಾಲದ ಹುಡುಗರಿಗೆ ಚಿತ್ರ ಮಾಡುತ್ತಿದ್ದಾರೆ. ಅಪ್ಪ ಇದ್ದಾಗ ನನಗೆ ಬರುತ್ತಿದ್ದ ಆಫರ್ ಇಂತಹದ್ದೇ. ಅಪ್ಪನ ನಿರ್ದೇಶನದಲ್ಲಿ ನಾನು ನಟನೆ ಮಾಡಬೇಕು ಎಂದು ಪ್ರಯತ್ನಗಳಾದವು. ‘ಅನಂತನ ಅವಾಂತರ – 2’, ‘ಅನುಭವ – 2’ ತರಹದ ಆಫರ್‍ಗಳು ಬರುತ್ತಿದ್ದವು. ಆ ತರಹದ ಪಾತ್ರಗಳು ನನಗೆ ಹೊಂದುವುದಿಲ್ಲ ಎಂದು ಅಪ್ಪನಿಗೂ ಅನಿಸುತ್ತಿತ್ತು. ನನಗೂ ಅದನ್ನು ಮಾಡುತ್ತೇನೆ ಅನ್ನೋ ವಿಶ್ವಾಸ ಇರಲಿಲ್ಲ. ಈಗ ಅಂಥದ್ದೇ ಒಂದು ಪ್ರಯತ್ನ ಮಾಡುತ್ತಿದ್ದೇವೆ’ ಎಂದರು.

‘ಅಭಿಮನ್ಯು S/O ಕಾಶಿನಾಥ್’ ಚಿತ್ರಕ್ಕೆ ‘ಹೊಸ ಅನುಭವ’ ಎಂಬ ಅಡಿಬರಹ ಇದೆ. ಚಿತ್ರದಲ್ಲಿ ಅಭಿಮನ್ಯುಗೆ ಸ್ಪಂದನ ಸೋಮಣ್ಣ, ವಿಜಯಶ್ರೀ ಕಲ್ಬುರ್ಗಿ ನಾಯಕಿಯರಾಗಿ ನಟಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಅಭಿನಂದನ್ ಕಶ್ಯಪ್ ಸಂಗೀತ ಈ ಚಿತ್ರಕ್ಕಿದೆ.

ನವೆಂಬರ್ ತಿಂಗಳಿನಿಂದ ‘ಅಭಿಮನ್ಯು S/O ಕಾಶಿನಾಥ್’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಚಿಕ್ಕಮಗಳೂರು, ಮೈಸೂರು, ಹೈದ್ರಾಬಾದ್ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಭೂಮಿಕಾ

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago