ಮನರಂಜನೆ

ಅಭಿಮನ್ಯು ಈಗ ‘ಅಭಿಮನ್ಯು S/O ಕಾಶಿನಾಥ್’; ಚಿತ್ರ ಪ್ರಾರಂಭ

ಕನ್ನಡದ ಜನಪ್ರಿಯ ನಟ-ನಿರ್ದೇಶಕ ಕಾಶೀನಾಥ್‍ ಅವರ ಮಗ ಅಭಿಮನ್ಯು ಚಿತ್ರರಂಗಕ್ಕೆ ಬಂದು 15 ವರ್ಷಗಳಾದರೂ ಒಂದೊಳ್ಳೆಯ ಗೆಲುವು ನೋಡುವುದಕ್ಕೆ ಸಾಧ್ಯವಾಗುತ್ತಲೇ ಇಲ್ಲ. ಒಂದು ದೊಡ್ಡ ಬ್ರೇಕ್‍ಗೆ ಕಾಯುತ್ತಿರುವ ಅಭಿಮನ್ಯು, ಇದೀಗ ಸದ್ದಿಲ್ಲದೆ ಹೊಸ ಚಿತ್ರದಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ.

ಅಭಿಮನ್ಯು ಅಭಿನಯದ ಹೊಸ ಚಿತ್ರ ‘ಅಭಿಮನ್ಯು S/O ಕಾಶಿನಾಥ್’. ಈ ಚಿತ್ರದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನ ಸಹಕಾರ ನಗರದ ಛೇರ್ಮನ್ ಕ್ಲಬ್ ನಲ್ಲಿ ನಡೆಯಿತು. ಈ ಚಿತ್ರದ ಮುಹೂರ್ತಕ್ಕೆ ವಿಶೇಷ ಅತಿಥಿಯಾಗಿ ಕೋಮಲ್ ಕುಮಾರ್ ಆಗಮಿಸಿ, ಮೊದಲ ದೃಶ್ಯಕ್ಕೆ ಕ್ಲಾಪ್‍ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಈ ಹಿಂದೆ ಜಗ್ಗೇಶ್‍ ಅಭಿನಯದ ‘8MM’ ಸೇರಿದಂತೆ ಒಂದಿಷ್ಟು ಚಿತ್ರಗಳಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ರಾಜ್ ಮುರಳಿ ಈಗ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಹೆಜ್ಜೆ ಇಡುತ್ತಿದ್ದಾರೆ. ‘ಅಭಿಮನ್ಯು S/O ಕಾಶಿನಾಥ್’ ಚಿತ್ರದ ಮೂಲಕ ರಾಜ್ ಕಾಮಿಡಿ ಡ್ರಾಮಾ ಕಥೆ ಹೇಳೋದಿಕ್ಕೆ ಹೊರಟ್ಟಿದ್ದಾರೆ. ೀ ಚಿತ್ರವನ್ನು ಐಸಿರಿ ಪ್ರೊಡಕ್ಷನ್ ನಡಿ ಮಾರಪ್ಪ ಶ್ರೀನಿವಾಸ್ ನಿರ್ಮಾಣ ಮಾಡುತ್ತಿದ್ದಾರೆ.

‘ಅಭಿಮನ್ಯು S/O ಕಾಶಿನಾಥ್’ ಚಿತ್ರವು ಕಾಶೀನಾಥ್‍ ಶೈಲಿಯ ಚಿತ್ರವಂತೆ. ಈ ಕುರಿತು ಮಾತನಾಡುವ ಅಭಿಮನ್ಯು, ‘ರಾಜ್‌ಮುರಳಿ ಅಪ್ಪನ ಜಾನರ್ ಇಟ್ಕೊಂಡು ಈಗಿನ ಕಾಲದ ಹುಡುಗರಿಗೆ ಚಿತ್ರ ಮಾಡುತ್ತಿದ್ದಾರೆ. ಅಪ್ಪ ಇದ್ದಾಗ ನನಗೆ ಬರುತ್ತಿದ್ದ ಆಫರ್ ಇಂತಹದ್ದೇ. ಅಪ್ಪನ ನಿರ್ದೇಶನದಲ್ಲಿ ನಾನು ನಟನೆ ಮಾಡಬೇಕು ಎಂದು ಪ್ರಯತ್ನಗಳಾದವು. ‘ಅನಂತನ ಅವಾಂತರ – 2’, ‘ಅನುಭವ – 2’ ತರಹದ ಆಫರ್‍ಗಳು ಬರುತ್ತಿದ್ದವು. ಆ ತರಹದ ಪಾತ್ರಗಳು ನನಗೆ ಹೊಂದುವುದಿಲ್ಲ ಎಂದು ಅಪ್ಪನಿಗೂ ಅನಿಸುತ್ತಿತ್ತು. ನನಗೂ ಅದನ್ನು ಮಾಡುತ್ತೇನೆ ಅನ್ನೋ ವಿಶ್ವಾಸ ಇರಲಿಲ್ಲ. ಈಗ ಅಂಥದ್ದೇ ಒಂದು ಪ್ರಯತ್ನ ಮಾಡುತ್ತಿದ್ದೇವೆ’ ಎಂದರು.

‘ಅಭಿಮನ್ಯು S/O ಕಾಶಿನಾಥ್’ ಚಿತ್ರಕ್ಕೆ ‘ಹೊಸ ಅನುಭವ’ ಎಂಬ ಅಡಿಬರಹ ಇದೆ. ಚಿತ್ರದಲ್ಲಿ ಅಭಿಮನ್ಯುಗೆ ಸ್ಪಂದನ ಸೋಮಣ್ಣ, ವಿಜಯಶ್ರೀ ಕಲ್ಬುರ್ಗಿ ನಾಯಕಿಯರಾಗಿ ನಟಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಅಭಿನಂದನ್ ಕಶ್ಯಪ್ ಸಂಗೀತ ಈ ಚಿತ್ರಕ್ಕಿದೆ.

ನವೆಂಬರ್ ತಿಂಗಳಿನಿಂದ ‘ಅಭಿಮನ್ಯು S/O ಕಾಶಿನಾಥ್’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಚಿಕ್ಕಮಗಳೂರು, ಮೈಸೂರು, ಹೈದ್ರಾಬಾದ್ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಭೂಮಿಕಾ

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

1 hour ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

1 hour ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

1 hour ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

1 hour ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago