ಮನರಂಜನೆ

ಶಾರೂಖ್‍ ಖಾನ್‍ ಪಾಲಿಗೆ ವಿಲನ್‍ ಆದ ಅಭಿಷೇಕ್‍ ಬಚ್ಚನ್‍

ಶಾರುಖ್‍ ಖಾನ್‍ ಮತ್ತು ಅಭಿಷೇಕ್‍ ಬಚ್ಚನ್‍ ಒಟ್ಟಿಗೆ ಚಿತ್ರ ಮಾಡುವುದು ವಿಶೇಷವೇನಲ್ಲ. ಈಗಾಗಲೇ ‘ಹ್ಯಾಪಿ ನ್ಯೂ ಇಯರ್’ ಎಂಬ ಚಿತ್ರದಲ್ಲಿ ಇಬ್ಬರೂ ಸ್ನೇಹಿತರಾಗಿ ದರೋಡೆ ಮಾಡಿದ್ದಿದೆ. ಈಗ ಮೊದಲ ಬಾರಿಗೆ ಶಾರುಖ್‍ ಖಾನ್‍ಗೆ ಅಭಿಷೇಕ್‍ ಬಚ್ಚನ್‍ ವಿಲನ್‍ ಆಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ಹೌದು, ಕಳೆದ ವರ್ಷ ಬ್ಯಾಕ್‍ ಟು ಬ್ಯಾಕ್‍ ಮೂರು ಚಿತ್ರಗಳಲ್ಲಿ ಶಾರುಖ್‍ ಖಾನ್ ನಟಿಸಿದ್ದರು. ಆ ನಂತರ ಅವರ ಮುಂದಿನ ಚಿತ್ರ ಯಾವುದು ಎಂಬುದರ ಬಗ್ಗೆ ಮಾಹಿತಿ ಇರಲಿಲ್ಲ. ಈಗ ಶಾರೂಖ್‍ ಖಾನ್, ‘ಕಿಂಗ್‍’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿದ್ಧಾರ್ಥ್‍ ಆನಂದ್‍ ಈ ಚಿತ್ರವನ್ನು ನಿರ್ಮಿಸುತ್ತಿದ್ದ, ಸುಜಯ್‍ ಘೋಷಶ್‍ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಶಾರೂಖ್ ಎದುರು ಅಭಿಷೇಕ್ ‍ವಿಲನ್‍ ಆಗಿ ಕಾಣಿಸಿಕೊಳ್ಳುತ್ತಿದ್ದಾರಂತೆ.

ಹಾಗಂತ ಈ ವಿಷಯವನ್ನು ಅಭಿಷೇಕ್‍ ಎಲ್ಲೂ ಹೇಳಿಕೊಂಡಿಲ್ಲ. ಆದರೆ, ಅವರ ತಂದೆ ಅಮಿತಾಭ್‍ ಸೂಚ್ಯವಾಗಿ ಹೌದು ಎಂದು ಹೇಳಿದ್ದಾರೆ. ಇತ್ತೀಚೆಗೆ ಸೋಷಿಯಲ್‍ ಮೀಡಿಯಾದಲ್ಲಿ ಈ ಸುದ್ದಿ ಕೇಳಿಬಂದಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಅಮಿತಾಭ್‍ ಬಚ್ಚನ್‍, ‘ಒಳ್ಳೆಯದಾಗಲಿ ಅಭಿಷೇಕ್‍. It’s time’ ಎಂದು ಬರೆದುಕೊಂಡಿದ್ದಾರೆ.

ಅಭಿಷೇಕ್‍ ಬಚ್ಚನ್‍ ಇತ್ತೀಚಿನ ವರ್ಷಗಳಲ್ಲಿ ಹಲವು ರೀತಿಯ ಪಾತ್ರಗಳನ್ನು ಪ್ರಯೋಗ ಮಾಡುತ್ತಿದ್ದಾರೆ. ಆದರೆ, ಪೂರ್ಣಪ್ರಮಾಣದ ನೆಗೆಟಿವ್ ಪಾತ್ರದಲ್ಲಿ, ಅದರಲ್ಲೂ ಶಾರೂಖ್‍ ಖಾನ್‍ರಂತಹ ಪಕ್ಕಾ ಕಮರ್ಷಿಯಲ್‍ ಹೀರೋ ಎದರು ವಿಲನ್ ಆಗಿ ಕಾಣಿಸಿಕೊಂಡಿರಲಿಲ್ಲ. ಅಂಥದ್ದೊಂದು ಅವಕಾಶ ಬಂದಾಗ, ಅವರು ತಕ್ಷಣವೇ ಒಪ್ಪಿಕೊಂಡಿದ್ದಾರೆ. ಇನ್ನು, ಅವರನ್ನು ಇದಕ್ಕೂ ಮೊದಲು ನೋಡಿರದಂತೆ ವಿಭಿನ್ನ ರೀತಿಯಲ್ಲಿ ತೋರಿಸುವುದಕ್ಕೆ ಚಿತ್ರತಂಡದವರು ಪ್ರಯತ್ನ ನಡೆಸಿದ್ದಾರಂತೆ.

ಚಿತ್ರಕ್ಕೆ ‘ಕಿಂಗ್‍’ ಎಂಬ ಹೆಸರನ್ನು ಇಟ್ಟಿರುವುದು ಬಿಟ್ಟರೆ, ಮಿಕ್ಕಂತೆ ಚಿತ್ರತಂಡ ಯಾವುದೇ ವಿಷಯವನ್ನೂ ಹೇಳಿಕೊಂಡಿಲ್ಲ. ಸುಮಾರು ಆರು ತಿಂಗಳುಗಳ ಕಾಲ ಈ ಚಿತ್ರದ ಬಗ್ಗೆ ಶಾರೂಖ್‍ ಮತ್ತು ಸುಜಯ್‍ ಚರ್ಚೆ ನಡೆಸಿದ್ದಾರಂತೆ. ಇದುವರೆಗೂ ಭಾರತೀಯ ಚಿತ್ರರಂಗದಲ್ಲಿ ನೋಡಿರದ ಒಂದಿಷ್ಟು ಆ್ಯಕ್ಷನ್‍ ದೃಶ್ಯಗಳು ಈ ಚಿತ್ರದಲ್ಲಿ ಇರಲಿದ್ದು, ಸದ್ಯದಲ್ಲೇ ಈ ಕುರಿತು ಚಿತ್ರತಂಡ ಅಧಿಕೃತ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

50 mins ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

1 hour ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

2 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

3 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

4 hours ago