ಮನರಂಜನೆ

ಶಾರೂಖ್‍ ಖಾನ್‍ ಪಾಲಿಗೆ ವಿಲನ್‍ ಆದ ಅಭಿಷೇಕ್‍ ಬಚ್ಚನ್‍

ಶಾರುಖ್‍ ಖಾನ್‍ ಮತ್ತು ಅಭಿಷೇಕ್‍ ಬಚ್ಚನ್‍ ಒಟ್ಟಿಗೆ ಚಿತ್ರ ಮಾಡುವುದು ವಿಶೇಷವೇನಲ್ಲ. ಈಗಾಗಲೇ ‘ಹ್ಯಾಪಿ ನ್ಯೂ ಇಯರ್’ ಎಂಬ ಚಿತ್ರದಲ್ಲಿ ಇಬ್ಬರೂ ಸ್ನೇಹಿತರಾಗಿ ದರೋಡೆ ಮಾಡಿದ್ದಿದೆ. ಈಗ ಮೊದಲ ಬಾರಿಗೆ ಶಾರುಖ್‍ ಖಾನ್‍ಗೆ ಅಭಿಷೇಕ್‍ ಬಚ್ಚನ್‍ ವಿಲನ್‍ ಆಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ಹೌದು, ಕಳೆದ ವರ್ಷ ಬ್ಯಾಕ್‍ ಟು ಬ್ಯಾಕ್‍ ಮೂರು ಚಿತ್ರಗಳಲ್ಲಿ ಶಾರುಖ್‍ ಖಾನ್ ನಟಿಸಿದ್ದರು. ಆ ನಂತರ ಅವರ ಮುಂದಿನ ಚಿತ್ರ ಯಾವುದು ಎಂಬುದರ ಬಗ್ಗೆ ಮಾಹಿತಿ ಇರಲಿಲ್ಲ. ಈಗ ಶಾರೂಖ್‍ ಖಾನ್, ‘ಕಿಂಗ್‍’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿದ್ಧಾರ್ಥ್‍ ಆನಂದ್‍ ಈ ಚಿತ್ರವನ್ನು ನಿರ್ಮಿಸುತ್ತಿದ್ದ, ಸುಜಯ್‍ ಘೋಷಶ್‍ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಶಾರೂಖ್ ಎದುರು ಅಭಿಷೇಕ್ ‍ವಿಲನ್‍ ಆಗಿ ಕಾಣಿಸಿಕೊಳ್ಳುತ್ತಿದ್ದಾರಂತೆ.

ಹಾಗಂತ ಈ ವಿಷಯವನ್ನು ಅಭಿಷೇಕ್‍ ಎಲ್ಲೂ ಹೇಳಿಕೊಂಡಿಲ್ಲ. ಆದರೆ, ಅವರ ತಂದೆ ಅಮಿತಾಭ್‍ ಸೂಚ್ಯವಾಗಿ ಹೌದು ಎಂದು ಹೇಳಿದ್ದಾರೆ. ಇತ್ತೀಚೆಗೆ ಸೋಷಿಯಲ್‍ ಮೀಡಿಯಾದಲ್ಲಿ ಈ ಸುದ್ದಿ ಕೇಳಿಬಂದಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಅಮಿತಾಭ್‍ ಬಚ್ಚನ್‍, ‘ಒಳ್ಳೆಯದಾಗಲಿ ಅಭಿಷೇಕ್‍. It’s time’ ಎಂದು ಬರೆದುಕೊಂಡಿದ್ದಾರೆ.

ಅಭಿಷೇಕ್‍ ಬಚ್ಚನ್‍ ಇತ್ತೀಚಿನ ವರ್ಷಗಳಲ್ಲಿ ಹಲವು ರೀತಿಯ ಪಾತ್ರಗಳನ್ನು ಪ್ರಯೋಗ ಮಾಡುತ್ತಿದ್ದಾರೆ. ಆದರೆ, ಪೂರ್ಣಪ್ರಮಾಣದ ನೆಗೆಟಿವ್ ಪಾತ್ರದಲ್ಲಿ, ಅದರಲ್ಲೂ ಶಾರೂಖ್‍ ಖಾನ್‍ರಂತಹ ಪಕ್ಕಾ ಕಮರ್ಷಿಯಲ್‍ ಹೀರೋ ಎದರು ವಿಲನ್ ಆಗಿ ಕಾಣಿಸಿಕೊಂಡಿರಲಿಲ್ಲ. ಅಂಥದ್ದೊಂದು ಅವಕಾಶ ಬಂದಾಗ, ಅವರು ತಕ್ಷಣವೇ ಒಪ್ಪಿಕೊಂಡಿದ್ದಾರೆ. ಇನ್ನು, ಅವರನ್ನು ಇದಕ್ಕೂ ಮೊದಲು ನೋಡಿರದಂತೆ ವಿಭಿನ್ನ ರೀತಿಯಲ್ಲಿ ತೋರಿಸುವುದಕ್ಕೆ ಚಿತ್ರತಂಡದವರು ಪ್ರಯತ್ನ ನಡೆಸಿದ್ದಾರಂತೆ.

ಚಿತ್ರಕ್ಕೆ ‘ಕಿಂಗ್‍’ ಎಂಬ ಹೆಸರನ್ನು ಇಟ್ಟಿರುವುದು ಬಿಟ್ಟರೆ, ಮಿಕ್ಕಂತೆ ಚಿತ್ರತಂಡ ಯಾವುದೇ ವಿಷಯವನ್ನೂ ಹೇಳಿಕೊಂಡಿಲ್ಲ. ಸುಮಾರು ಆರು ತಿಂಗಳುಗಳ ಕಾಲ ಈ ಚಿತ್ರದ ಬಗ್ಗೆ ಶಾರೂಖ್‍ ಮತ್ತು ಸುಜಯ್‍ ಚರ್ಚೆ ನಡೆಸಿದ್ದಾರಂತೆ. ಇದುವರೆಗೂ ಭಾರತೀಯ ಚಿತ್ರರಂಗದಲ್ಲಿ ನೋಡಿರದ ಒಂದಿಷ್ಟು ಆ್ಯಕ್ಷನ್‍ ದೃಶ್ಯಗಳು ಈ ಚಿತ್ರದಲ್ಲಿ ಇರಲಿದ್ದು, ಸದ್ಯದಲ್ಲೇ ಈ ಕುರಿತು ಚಿತ್ರತಂಡ ಅಧಿಕೃತ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

14 mins ago

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

49 mins ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

2 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

3 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

3 hours ago