ಶಾರುಖ್ ಖಾನ್ ಮತ್ತು ಅಭಿಷೇಕ್ ಬಚ್ಚನ್ ಒಟ್ಟಿಗೆ ಚಿತ್ರ ಮಾಡುವುದು ವಿಶೇಷವೇನಲ್ಲ. ಈಗಾಗಲೇ ‘ಹ್ಯಾಪಿ ನ್ಯೂ ಇಯರ್’ ಎಂಬ ಚಿತ್ರದಲ್ಲಿ ಇಬ್ಬರೂ ಸ್ನೇಹಿತರಾಗಿ ದರೋಡೆ ಮಾಡಿದ್ದಿದೆ. ಈಗ ಮೊದಲ ಬಾರಿಗೆ ಶಾರುಖ್ ಖಾನ್ಗೆ ಅಭಿಷೇಕ್ ಬಚ್ಚನ್ ವಿಲನ್ ಆಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.
ಹೌದು, ಕಳೆದ ವರ್ಷ ಬ್ಯಾಕ್ ಟು ಬ್ಯಾಕ್ ಮೂರು ಚಿತ್ರಗಳಲ್ಲಿ ಶಾರುಖ್ ಖಾನ್ ನಟಿಸಿದ್ದರು. ಆ ನಂತರ ಅವರ ಮುಂದಿನ ಚಿತ್ರ ಯಾವುದು ಎಂಬುದರ ಬಗ್ಗೆ ಮಾಹಿತಿ ಇರಲಿಲ್ಲ. ಈಗ ಶಾರೂಖ್ ಖಾನ್, ‘ಕಿಂಗ್’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ಮಿಸುತ್ತಿದ್ದ, ಸುಜಯ್ ಘೋಷಶ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಶಾರೂಖ್ ಎದುರು ಅಭಿಷೇಕ್ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರಂತೆ.
ಹಾಗಂತ ಈ ವಿಷಯವನ್ನು ಅಭಿಷೇಕ್ ಎಲ್ಲೂ ಹೇಳಿಕೊಂಡಿಲ್ಲ. ಆದರೆ, ಅವರ ತಂದೆ ಅಮಿತಾಭ್ ಸೂಚ್ಯವಾಗಿ ಹೌದು ಎಂದು ಹೇಳಿದ್ದಾರೆ. ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಈ ಸುದ್ದಿ ಕೇಳಿಬಂದಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಅಮಿತಾಭ್ ಬಚ್ಚನ್, ‘ಒಳ್ಳೆಯದಾಗಲಿ ಅಭಿಷೇಕ್. It’s time’ ಎಂದು ಬರೆದುಕೊಂಡಿದ್ದಾರೆ.
ಅಭಿಷೇಕ್ ಬಚ್ಚನ್ ಇತ್ತೀಚಿನ ವರ್ಷಗಳಲ್ಲಿ ಹಲವು ರೀತಿಯ ಪಾತ್ರಗಳನ್ನು ಪ್ರಯೋಗ ಮಾಡುತ್ತಿದ್ದಾರೆ. ಆದರೆ, ಪೂರ್ಣಪ್ರಮಾಣದ ನೆಗೆಟಿವ್ ಪಾತ್ರದಲ್ಲಿ, ಅದರಲ್ಲೂ ಶಾರೂಖ್ ಖಾನ್ರಂತಹ ಪಕ್ಕಾ ಕಮರ್ಷಿಯಲ್ ಹೀರೋ ಎದರು ವಿಲನ್ ಆಗಿ ಕಾಣಿಸಿಕೊಂಡಿರಲಿಲ್ಲ. ಅಂಥದ್ದೊಂದು ಅವಕಾಶ ಬಂದಾಗ, ಅವರು ತಕ್ಷಣವೇ ಒಪ್ಪಿಕೊಂಡಿದ್ದಾರೆ. ಇನ್ನು, ಅವರನ್ನು ಇದಕ್ಕೂ ಮೊದಲು ನೋಡಿರದಂತೆ ವಿಭಿನ್ನ ರೀತಿಯಲ್ಲಿ ತೋರಿಸುವುದಕ್ಕೆ ಚಿತ್ರತಂಡದವರು ಪ್ರಯತ್ನ ನಡೆಸಿದ್ದಾರಂತೆ.
ಚಿತ್ರಕ್ಕೆ ‘ಕಿಂಗ್’ ಎಂಬ ಹೆಸರನ್ನು ಇಟ್ಟಿರುವುದು ಬಿಟ್ಟರೆ, ಮಿಕ್ಕಂತೆ ಚಿತ್ರತಂಡ ಯಾವುದೇ ವಿಷಯವನ್ನೂ ಹೇಳಿಕೊಂಡಿಲ್ಲ. ಸುಮಾರು ಆರು ತಿಂಗಳುಗಳ ಕಾಲ ಈ ಚಿತ್ರದ ಬಗ್ಗೆ ಶಾರೂಖ್ ಮತ್ತು ಸುಜಯ್ ಚರ್ಚೆ ನಡೆಸಿದ್ದಾರಂತೆ. ಇದುವರೆಗೂ ಭಾರತೀಯ ಚಿತ್ರರಂಗದಲ್ಲಿ ನೋಡಿರದ ಒಂದಿಷ್ಟು ಆ್ಯಕ್ಷನ್ ದೃಶ್ಯಗಳು ಈ ಚಿತ್ರದಲ್ಲಿ ಇರಲಿದ್ದು, ಸದ್ಯದಲ್ಲೇ ಈ ಕುರಿತು ಚಿತ್ರತಂಡ ಅಧಿಕೃತ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…