ಮನರಂಜನೆ

ಎಸಿಪಿಯಾದ ತಿಲಕ್‍: ‘ವರ್ಣತರಂಗ’ ಹಾಡುಗಳ ಬಿಡುಗಡೆ

ಪೊಲೀಸ್‍ ಪಾತ್ರದಲ್ಲಿ ತಿಲಕ್‍ ಅಭಿನಯದ ‘ಉಸಿರು’ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈಗ ಮತ್ತೊಮ್ಮೆ ಅವರು ಖಾಕಿ ಯೂನಿಫಾರ್ಮ್‍ ತೊಟ್ಟಿದ್ದಾರೆ. ಅವರೀಗ ‘ವರ್ಣತರಂಗ’ ಎಂಬ ಚಿತ್ರದಲ್ಲಿ ಎಸಿಪಿಯಾಗಿ ನಟಿಸಿದ್ದಾರೆ.

ಶ್ರೀ ಪಾಷನಾಮೂರ್ತಿ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಬೆಳ್ತಂಗಡಿ ಉದ್ಯಮಿ ಬಿ.ಶಿವಕುಮಾರ್ ನಿರ್ಮಿಸುತ್ತಿರುವ ‘ವರ್ಣತರಂಗ’ ಚಿತ್ರಕ್ಕೆ ತೀರ್ಥೆಶ್ ಕೊರಮೇರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ The Last Face ಎಂಬ ಅಡಿಬರಹ ಇದೆ.

ಈ ಚಿತ್ರದಲ್ಲಿ ನಾಯಕಿಯರಾಗಿ ಜೀವಿತಾ ಮತ್ತು ಸಾಕ್ಷಿ ಮೇಘನಾ ನಟಿಸಿದ್ದು, ಮಿಕ್ಕಂತೆ ವರ್ಧನ್, ಹೇಮಂತ್, ರಮೇಶ್ ಪಂಡಿತ್, ಬಲ ರಾಜವಾಡಿ, ಟೆನ್ನಿಸ್‌ ಕೃಷ್ಣ, ಜಯರಾಮ್, ಬಿರಾದಾರ್, ಭಗತ್, ಸುಂದರ್‌ ಭಟ್ ಮುಂತಾದವರು ನಟಿಸಿದ್ದಾರೆ.

ಇದನ್ನು ಓದು : ʻಗಾರ್ಡನ್ʼಗೆ ಹೊರಟ ಮನೋಜ್‍: ಕಸ ವಿಲೇವಾರಿ ಮಾಫಿಯಾದ ಸುತ್ತ

‘ವರ್ಣತರಂಗ’ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ತೀರ್ಥೇಶ್‍, ‘ವರ್ಣತರಂಗ’ ಅಂದರೆ ಬಣ್ಣಗಳ ಅಲೆಗಳು ಎಂದರ್ಥ. ಒಬ್ಬ ವ್ಯಕ್ತಿ ಕಲರ್ ಫುಲ್ ಆಗಿ ನಿಜ ಜೀವನದಲ್ಲಿ ಹೇಗಿರುತ್ತಾನೆ? ಆತ ನಕರಾತ್ಮಕವಾಗಿ ಚಿಂತನೆ ಮಾಡುತ್ತಾ, ಯಾವ ರೀತಿಯಲ್ಲಿ ಸೇಡು ತೀರಿಸಿಕೊಳ್ಳುತ್ತಾನೆ? ಸಿನಿಮಾದಲ್ಲಿ ಸಾಕಷ್ಟು ಕುತೂಹಲಗಳು ಇರುವುದರಿಂದ ಇಷ್ಟನ್ನು ಮಾತ್ರ ಹೇಳಬಹುದು. ಬೆಂಗಳೂರು, ಮಂಗಳೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ವಿಎಫ್‌ಎಕ್ಸ್ ಶೇಕಡ 25ರಷ್ಟು ಬರುತ್ತದೆ’ ಎಂದರು

ನಾನು ಈಗಾಗಲೇ ಎಸಿಪಿಯಾಗಿ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ಮಾತು ಶುರು ಮಾಡಿದ ತಿಲಕ್‍, ‘ಇದರಲ್ಲೂ ಅದೇ ಪಾತ್ರವಿದ್ದರೂ ಕೇಸ್ ಬೇರೆಯದೆ ಆಗಿರುತ್ತದೆ. ಅದರಿಂದ ನೋಡುಗರಿಗೆ ಬೋರ್ ಅನಿಸುವುದಿಲ್ಲ’ ಎಂದರು.

‘ವರ್ಣರಂಜಿತ’ ಚಿತ್ರಕ್ಕೆ ಆಕಾಶ್‍ ರೆಡ್ಡಿ ಮತ್ತು ಯಶವಂತ್‍ ಭೂಪತಿ ಸಂಗೀತ, ಮನು ಗೌಡ ಛಾಯಾಗ್ರಹಣವಿದ್ದು, ’ಸುಕ್ಕ ಸುಕ್ಕ …’ ಎಂಬ ಹಾಡಿಗೆ ಚಂದನ್‌ ಶೆಟ್ಟಿ ಧ್ವನಿಯಾಗಿದ್ದಾರೆ. ಇನ್ನರೆಡು ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

32 mins ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

34 mins ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

36 mins ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

38 mins ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

42 mins ago

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

1 hour ago