ಮನರಂಜನೆ

ಎಸಿಪಿಯಾದ ತಿಲಕ್‍: ‘ವರ್ಣತರಂಗ’ ಹಾಡುಗಳ ಬಿಡುಗಡೆ

ಪೊಲೀಸ್‍ ಪಾತ್ರದಲ್ಲಿ ತಿಲಕ್‍ ಅಭಿನಯದ ‘ಉಸಿರು’ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈಗ ಮತ್ತೊಮ್ಮೆ ಅವರು ಖಾಕಿ ಯೂನಿಫಾರ್ಮ್‍ ತೊಟ್ಟಿದ್ದಾರೆ. ಅವರೀಗ ‘ವರ್ಣತರಂಗ’ ಎಂಬ ಚಿತ್ರದಲ್ಲಿ ಎಸಿಪಿಯಾಗಿ ನಟಿಸಿದ್ದಾರೆ.

ಶ್ರೀ ಪಾಷನಾಮೂರ್ತಿ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಬೆಳ್ತಂಗಡಿ ಉದ್ಯಮಿ ಬಿ.ಶಿವಕುಮಾರ್ ನಿರ್ಮಿಸುತ್ತಿರುವ ‘ವರ್ಣತರಂಗ’ ಚಿತ್ರಕ್ಕೆ ತೀರ್ಥೆಶ್ ಕೊರಮೇರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ The Last Face ಎಂಬ ಅಡಿಬರಹ ಇದೆ.

ಈ ಚಿತ್ರದಲ್ಲಿ ನಾಯಕಿಯರಾಗಿ ಜೀವಿತಾ ಮತ್ತು ಸಾಕ್ಷಿ ಮೇಘನಾ ನಟಿಸಿದ್ದು, ಮಿಕ್ಕಂತೆ ವರ್ಧನ್, ಹೇಮಂತ್, ರಮೇಶ್ ಪಂಡಿತ್, ಬಲ ರಾಜವಾಡಿ, ಟೆನ್ನಿಸ್‌ ಕೃಷ್ಣ, ಜಯರಾಮ್, ಬಿರಾದಾರ್, ಭಗತ್, ಸುಂದರ್‌ ಭಟ್ ಮುಂತಾದವರು ನಟಿಸಿದ್ದಾರೆ.

ಇದನ್ನು ಓದು : ʻಗಾರ್ಡನ್ʼಗೆ ಹೊರಟ ಮನೋಜ್‍: ಕಸ ವಿಲೇವಾರಿ ಮಾಫಿಯಾದ ಸುತ್ತ

‘ವರ್ಣತರಂಗ’ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ತೀರ್ಥೇಶ್‍, ‘ವರ್ಣತರಂಗ’ ಅಂದರೆ ಬಣ್ಣಗಳ ಅಲೆಗಳು ಎಂದರ್ಥ. ಒಬ್ಬ ವ್ಯಕ್ತಿ ಕಲರ್ ಫುಲ್ ಆಗಿ ನಿಜ ಜೀವನದಲ್ಲಿ ಹೇಗಿರುತ್ತಾನೆ? ಆತ ನಕರಾತ್ಮಕವಾಗಿ ಚಿಂತನೆ ಮಾಡುತ್ತಾ, ಯಾವ ರೀತಿಯಲ್ಲಿ ಸೇಡು ತೀರಿಸಿಕೊಳ್ಳುತ್ತಾನೆ? ಸಿನಿಮಾದಲ್ಲಿ ಸಾಕಷ್ಟು ಕುತೂಹಲಗಳು ಇರುವುದರಿಂದ ಇಷ್ಟನ್ನು ಮಾತ್ರ ಹೇಳಬಹುದು. ಬೆಂಗಳೂರು, ಮಂಗಳೂರು ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ವಿಎಫ್‌ಎಕ್ಸ್ ಶೇಕಡ 25ರಷ್ಟು ಬರುತ್ತದೆ’ ಎಂದರು

ನಾನು ಈಗಾಗಲೇ ಎಸಿಪಿಯಾಗಿ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ಮಾತು ಶುರು ಮಾಡಿದ ತಿಲಕ್‍, ‘ಇದರಲ್ಲೂ ಅದೇ ಪಾತ್ರವಿದ್ದರೂ ಕೇಸ್ ಬೇರೆಯದೆ ಆಗಿರುತ್ತದೆ. ಅದರಿಂದ ನೋಡುಗರಿಗೆ ಬೋರ್ ಅನಿಸುವುದಿಲ್ಲ’ ಎಂದರು.

‘ವರ್ಣರಂಜಿತ’ ಚಿತ್ರಕ್ಕೆ ಆಕಾಶ್‍ ರೆಡ್ಡಿ ಮತ್ತು ಯಶವಂತ್‍ ಭೂಪತಿ ಸಂಗೀತ, ಮನು ಗೌಡ ಛಾಯಾಗ್ರಹಣವಿದ್ದು, ’ಸುಕ್ಕ ಸುಕ್ಕ …’ ಎಂಬ ಹಾಡಿಗೆ ಚಂದನ್‌ ಶೆಟ್ಟಿ ಧ್ವನಿಯಾಗಿದ್ದಾರೆ. ಇನ್ನರೆಡು ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

7 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

7 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

7 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

7 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

7 hours ago