ಮನರಂಜನೆ

‘ನಾಯಕ‌ ನಾನೇ’ ಎಂದ ಭರತ್: ‘ಮೆಜೆಸ್ಟಿಕ್‍ 2’ ಚಿತ್ರದ ಹಾಡು ಬಿಡುಗಡೆ

‘ಮೆಜೆಸ್ಟಿಕ್ 2’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಚಿತ್ರದ ಇತರೆ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ ‘ನಾಯಕ ನಾನೇ’ ಎಂಬ ಮೊದಲ ಹಾಡು ಬಿಡುಗಡೆಯಾಗಿದೆ.

ಈ ಚಿತ್ರಕ್ಕೆ ರಾಮು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದರೆ, ಚಿತ್ರದುರ್ಗದ ಆನಂದಪ್ಪ ನಿರ್ಮಾಣ ಮಾಡಿದ್ದಾರೆ. ಭರತ್ ಕುಮಾರ್, ಸಂಹಿತಾ ವಿನ್ಯಾ ನಾಯಕ ಅವರು ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ, ನಟಿ ಶ್ರುತಿ ನಾಯಕನ ತಾಯಿಯಾಗಿ ಕಾಣಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ‘ಭರತ್ ನಾಯಕನ ಜವಾಬ್ದಾರಿಯನ್ನು ತುಂಬಾ ಶ್ರದ್ಧೆಯಿಂದ ನಿಭಾಯಿಸಿದ್ದಾರೆ. ಆತನ ತಾಯಿಯಾಗಿ ನಾನು ಅಭಿನಯಿಸಿದ್ದೇನೆ. ನಿರ್ದೇಶಕ ರಾಮು ಹೃದಯಕ್ಕೆ ಹತ್ತಿರವಾಗುವ ಸಂಭಾಷಣೆಗಳನ್ನು ಬರೆದಿದ್ದಾರೆ. ಈ ಶೀರ್ಷಿಕೆಗೆ ದೊಡ್ಡ ಇತಿಹಾಸವಿದೆ. ಅದು ಈ ಸಿನಿಮಾದಿಂದ ಮತ್ತೊಮ್ಮೆ ಮರುಕಳಿಸಲಿ’ ಎಂದರು.

ನಿರ್ದೇಶಕ ರಾಮು ಮಾತನಾಡಿ, ‘20-30 ವರ್ಷ ತುಂಬಾ ಕಷ್ಟಪಟ್ಟಿದ್ದೇನೆ. ಒಬ್ಬ ನಿರ್ಮಾಪಕನಿಗೆ ಕಥೆ ಒಪ್ಪಿಸೋದು ಸುಲಭವಲ್ಲ. ನನ್ನ ಕಥೆ ಕೇಳಿ ಅವಕಾಶ ಕೊಡುವುದರ ಜೊತೆಗೆ ಕೇಳಿದ್ದೆಲ್ಲವನ್ನೂ ಒದಗಿಸಿಕೊಟ್ಟು ಸಹಕರಿಸಿದ್ದಾರೆ’ ಎಂದರು.

ನಾಯಕ ಭರತ್ ಮಾತನಾಡಿ, ‘ಈಗ ಬೆಂಗಳೂರಲ್ಲಿ ಏನೇನೆಲ್ಲ ನಡೀತಿದೆ ಅದನ್ನು ಚಿತ್ರದಲ್ಲಿ ತೋರಿಸಿದ್ದೇವೆ. ಈ ಹಾಡನ್ನು ಏಳು ಗಾಯಕರು ಹಾಡಿದ್ದಾರೆ. ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಇದು ಮೆಜೆಸ್ಟಿಕ್‍ನಲ್ಲೇ ಹುಟ್ಟಿ ಬೆಳೆದ ಹುಡುಗನ‌ ಕಥೆ. ನನ್ನ ಪಾತ್ರಕ್ಕೆ ಎರಡು ಶೇಡ್ಸ್ ಇದೆ. ಮೆಜೆಸ್ಟಿಕ್ ಅಂಡರ್ ಪಾಸ್, ಬಸ್ ಸ್ಟಾಪ್‍ನಲ್ಲೂ ಚಿತ್ರೀಕರಣ ಮಾಡಿದ್ದೇವೆ’ ಎಂದರು.

‘ಮೆಜೆಸ್ಟಿಕ್‍ 2’ ಚಿತ್ರಕ್ಕೆ ವಿನು ಮನಸು ಸಂಗೀತ, ವೀನಸ್‍ ಮೂರ್ತಿ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

1 hour ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

1 hour ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

1 hour ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

2 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

2 hours ago

ಮಂಡ್ಯಕ್ಕೆ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ ಘೋಷಣೆ

ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…

2 hours ago