ಮನರಂಜನೆ

‘ನಾಯಕ‌ ನಾನೇ’ ಎಂದ ಭರತ್: ‘ಮೆಜೆಸ್ಟಿಕ್‍ 2’ ಚಿತ್ರದ ಹಾಡು ಬಿಡುಗಡೆ

‘ಮೆಜೆಸ್ಟಿಕ್ 2’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಚಿತ್ರದ ಇತರೆ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ ‘ನಾಯಕ ನಾನೇ’ ಎಂಬ ಮೊದಲ ಹಾಡು ಬಿಡುಗಡೆಯಾಗಿದೆ.

ಈ ಚಿತ್ರಕ್ಕೆ ರಾಮು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದರೆ, ಚಿತ್ರದುರ್ಗದ ಆನಂದಪ್ಪ ನಿರ್ಮಾಣ ಮಾಡಿದ್ದಾರೆ. ಭರತ್ ಕುಮಾರ್, ಸಂಹಿತಾ ವಿನ್ಯಾ ನಾಯಕ ಅವರು ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ, ನಟಿ ಶ್ರುತಿ ನಾಯಕನ ತಾಯಿಯಾಗಿ ಕಾಣಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ‘ಭರತ್ ನಾಯಕನ ಜವಾಬ್ದಾರಿಯನ್ನು ತುಂಬಾ ಶ್ರದ್ಧೆಯಿಂದ ನಿಭಾಯಿಸಿದ್ದಾರೆ. ಆತನ ತಾಯಿಯಾಗಿ ನಾನು ಅಭಿನಯಿಸಿದ್ದೇನೆ. ನಿರ್ದೇಶಕ ರಾಮು ಹೃದಯಕ್ಕೆ ಹತ್ತಿರವಾಗುವ ಸಂಭಾಷಣೆಗಳನ್ನು ಬರೆದಿದ್ದಾರೆ. ಈ ಶೀರ್ಷಿಕೆಗೆ ದೊಡ್ಡ ಇತಿಹಾಸವಿದೆ. ಅದು ಈ ಸಿನಿಮಾದಿಂದ ಮತ್ತೊಮ್ಮೆ ಮರುಕಳಿಸಲಿ’ ಎಂದರು.

ನಿರ್ದೇಶಕ ರಾಮು ಮಾತನಾಡಿ, ‘20-30 ವರ್ಷ ತುಂಬಾ ಕಷ್ಟಪಟ್ಟಿದ್ದೇನೆ. ಒಬ್ಬ ನಿರ್ಮಾಪಕನಿಗೆ ಕಥೆ ಒಪ್ಪಿಸೋದು ಸುಲಭವಲ್ಲ. ನನ್ನ ಕಥೆ ಕೇಳಿ ಅವಕಾಶ ಕೊಡುವುದರ ಜೊತೆಗೆ ಕೇಳಿದ್ದೆಲ್ಲವನ್ನೂ ಒದಗಿಸಿಕೊಟ್ಟು ಸಹಕರಿಸಿದ್ದಾರೆ’ ಎಂದರು.

ನಾಯಕ ಭರತ್ ಮಾತನಾಡಿ, ‘ಈಗ ಬೆಂಗಳೂರಲ್ಲಿ ಏನೇನೆಲ್ಲ ನಡೀತಿದೆ ಅದನ್ನು ಚಿತ್ರದಲ್ಲಿ ತೋರಿಸಿದ್ದೇವೆ. ಈ ಹಾಡನ್ನು ಏಳು ಗಾಯಕರು ಹಾಡಿದ್ದಾರೆ. ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಇದು ಮೆಜೆಸ್ಟಿಕ್‍ನಲ್ಲೇ ಹುಟ್ಟಿ ಬೆಳೆದ ಹುಡುಗನ‌ ಕಥೆ. ನನ್ನ ಪಾತ್ರಕ್ಕೆ ಎರಡು ಶೇಡ್ಸ್ ಇದೆ. ಮೆಜೆಸ್ಟಿಕ್ ಅಂಡರ್ ಪಾಸ್, ಬಸ್ ಸ್ಟಾಪ್‍ನಲ್ಲೂ ಚಿತ್ರೀಕರಣ ಮಾಡಿದ್ದೇವೆ’ ಎಂದರು.

‘ಮೆಜೆಸ್ಟಿಕ್‍ 2’ ಚಿತ್ರಕ್ಕೆ ವಿನು ಮನಸು ಸಂಗೀತ, ವೀನಸ್‍ ಮೂರ್ತಿ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

3 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

3 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…

3 hours ago

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

5 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

5 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

5 hours ago