ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಕೊಲೆ ಆರೋಪಿ ನಟ ದರ್ಶನ್ ಸ್ನೇಹಿತರಾಗಿರುವ ಹಾಸ್ಯನಟ ಚಿಕ್ಕಣ್ಣ ಅವರನ್ನು ಅನ್ನಪೂರ್ಣೆಶ್ವರಿ ಠಾಣಾ ಪೊಲೀಸರು ತನಿಖೆ ಒಳಪಡಿಸಿದ್ದರು.
ಕೊಲೆ ಸಂಬಂಧ ಆರ್ಆರ್ ನಗರದಲ್ಲಿರುವ ಸ್ಟೋನಿ ಬ್ರೂಕ್ ಆಂಡ್ ಬಾರ್ ರೆಸ್ಟೋರೆಂಟ್ ಸ್ಥಳ ಮಹಜರಿಗೆ ತೆರಳುವ ಸಂಬಂಧ ನಟ ಚಿಕ್ಕಣ್ಣಗೆ ನೋಟಿಸ್ ನೀಡಲಾಗಿತ್ತು. ತಮ್ಮದೇ ಕಾರಿನಲ್ಲಿ ಠಾಣೆಗೆ ಬಂದ ಚಿಕ್ಕಣ್ಣರನ್ನು ತಪಾಸಣೆಗೆ ಒಳಪಡಿಸಿದ ಬಳಿಕ ಸ್ಥಳ ಮಹಜರು ನಡೆಸಲಾಯಿತು.
ಪೊಲೀಸರ ತನಿಖೆ ನಂತರ ಹಲವು ವಿಚಾರಗಳನ್ನು ಪೊಲೀಸರು ಕಲೆ ಹಾಕಿದರು ಎನ್ನಲಾಗಿದೆ. ಇತ್ತ ಹತ್ಯೆ ನಡೆದ ದಿನವೇ ದರ್ಶನ್ ಜತೆ ಸ್ಟೋನಿ ಬ್ರೂಕ್ ಪಬ್ ಪಾರ್ಟಿಯಲ್ಲಿ ಚಿಕ್ಕಣ್ಣ ಕಾಣಿಸಿಕೊಂಡಿದ್ದು, ಹಾಗಾಗಿ ಚಿಕ್ಕಣ್ಣ ಅವರನ್ನು ತನಿಖೆಗೆ ಒಳಪಡಿಸಲಾಗಿದೆ. ಈ ಸಂಬಂಧ ತಾವು ದರ್ಶನ್ ಅವರನ್ನು ಭೇಟಿಯಾಗಿದ್ದು ಯಾಕೆ ಎಂಬುದನ್ನು ಸ್ವತಃ ಚಿಕ್ಕಣ್ಣ ಹೇಳಿದ್ದಾರೆ.
ದರ್ಶನ್ ಅವರು ನನಗೆ ಕರೆ ಮಾಡಿ ಊಟಕ್ಕೆ ಬರುವಂತೆ ಹೇಳಿದರು ಹೀಗಾಗಿ ಊಟಕ್ಕಾಗಿ ಅಲ್ಲಿದೆ ಹೋದೆ. ದರ್ಶನ್ ಮತ್ತು ನಾನು ಸ್ನೇಹಿತರು. ಅವಾಗವಾಗ ಅಲ್ಲಲ್ಲಿ ಸೇರುತ್ತಿರುತ್ತೇವೆ. ಅವತ್ತು ಕೂಡಾ ಊಟಕ್ಕೆ ಕರೆದಿದ್ದರು ಹಾಗಾಗಿ ಹೋದೆ. ಬಳಿಕ ಅಲ್ಲಿ ಏನಾಯ್ತು ಎಂಬ ಮಾಹಿತಿ ನನಗಿಲ್ಲ. ರೇಣುಕಾಸ್ವಾಮಿ ಹಾಗೂ ಇತರೇ ಯಾವುದೇ ವಿಚಾರದ ಬಗ್ಗೆಯೂ ನನಗೆ ಮಾಹಿತಿಲ್ಲ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾದ ಮೇಲೆಯೇ ನನಗೆ ತಿಳಿದಿದ್ದು, ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಚಿಕ್ಕಣ್ಣ ಸ್ಪಷ್ಟನೆ ನೀಡಿದ್ದಾರೆ.
ದರ್ಶನ್ ಗ್ಯಾಂಗ್ನ ಕೆಲ ಆರೋಪಿಗಳು ವಿಚಾರಣೆ ಸಮಯದಲ್ಲಿ ಚಿಕ್ಕಣ್ಣ ಹೆಸರು ಹೇಳಿದ್ದರು ಎನ್ನಲಾಗಿದ್ದು, ಹೀಗಾಗಿ ವಿಚಾರಣೆಗೆ ಚಿಕ್ಕಣ್ಣಗೆ ಪೊಲೀಸರು ನೋಟಿಸ್ ನೀಡಿದ್ದರು ಎಂದು ತನಿಖಾ ಮೂಲಗಳು ಹೇಳಿವೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…