ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸ್ಥಳ ಮಹಜರಿನ ಬಳಿಕ ಹಾಸ್ಯನಟ ಚಿಕ್ಕಣ್ಣ ಹೇಳಿದ್ದಿಷ್ಟು!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಕೊಲೆ ಆರೋಪಿ ನಟ ದರ್ಶನ್‌ ಸ್ನೇಹಿತರಾಗಿರುವ ಹಾಸ್ಯನಟ ಚಿಕ್ಕಣ್ಣ ಅವರನ್ನು ಅನ್ನಪೂರ್ಣೆಶ್ವರಿ ಠಾಣಾ ಪೊಲೀಸರು ತನಿಖೆ ಒಳಪಡಿಸಿದ್ದರು.

ಕೊಲೆ ಸಂಬಂಧ ಆರ್‌ಆರ್‌ ನಗರದಲ್ಲಿರುವ ಸ್ಟೋನಿ ಬ್ರೂಕ್‌ ಆಂಡ್‌ ಬಾರ್‌ ರೆಸ್ಟೋರೆಂಟ್‌ ಸ್ಥಳ ಮಹಜರಿಗೆ ತೆರಳುವ ಸಂಬಂಧ ನಟ ಚಿಕ್ಕಣ್ಣಗೆ ನೋಟಿಸ್‌ ನೀಡಲಾಗಿತ್ತು. ತಮ್ಮದೇ ಕಾರಿನಲ್ಲಿ ಠಾಣೆಗೆ ಬಂದ ಚಿಕ್ಕಣ್ಣರನ್ನು ತಪಾಸಣೆಗೆ ಒಳಪಡಿಸಿದ ಬಳಿಕ ಸ್ಥಳ ಮಹಜರು ನಡೆಸಲಾಯಿತು.

ಪೊಲೀಸರ ತನಿಖೆ ನಂತರ ಹಲವು ವಿಚಾರಗಳನ್ನು ಪೊಲೀಸರು ಕಲೆ ಹಾಕಿದರು ಎನ್ನಲಾಗಿದೆ. ಇತ್ತ ಹತ್ಯೆ ನಡೆದ ದಿನವೇ ದರ್ಶನ್‌ ಜತೆ ಸ್ಟೋನಿ ಬ್ರೂಕ್‌ ಪಬ್‌ ಪಾರ್ಟಿಯಲ್ಲಿ ಚಿಕ್ಕಣ್ಣ ಕಾಣಿಸಿಕೊಂಡಿದ್ದು, ಹಾಗಾಗಿ ಚಿಕ್ಕಣ್ಣ ಅವರನ್ನು ತನಿಖೆಗೆ ಒಳಪಡಿಸಲಾಗಿದೆ. ಈ ಸಂಬಂಧ ತಾವು ದರ್ಶನ್‌ ಅವರನ್ನು ಭೇಟಿಯಾಗಿದ್ದು ಯಾಕೆ ಎಂಬುದನ್ನು ಸ್ವತಃ ಚಿಕ್ಕಣ್ಣ ಹೇಳಿದ್ದಾರೆ.

ದರ್ಶನ್‌ ಅವರು ನನಗೆ ಕರೆ ಮಾಡಿ ಊಟಕ್ಕೆ ಬರುವಂತೆ ಹೇಳಿದರು ಹೀಗಾಗಿ ಊಟಕ್ಕಾಗಿ ಅಲ್ಲಿದೆ ಹೋದೆ. ದರ್ಶನ್‌ ಮತ್ತು ನಾನು ಸ್ನೇಹಿತರು. ಅವಾಗವಾಗ ಅಲ್ಲಲ್ಲಿ ಸೇರುತ್ತಿರುತ್ತೇವೆ. ಅವತ್ತು ಕೂಡಾ ಊಟಕ್ಕೆ ಕರೆದಿದ್ದರು ಹಾಗಾಗಿ ಹೋದೆ. ಬಳಿಕ ಅಲ್ಲಿ ಏನಾಯ್ತು ಎಂಬ ಮಾಹಿತಿ ನನಗಿಲ್ಲ. ರೇಣುಕಾಸ್ವಾಮಿ ಹಾಗೂ ಇತರೇ ಯಾವುದೇ ವಿಚಾರದ ಬಗ್ಗೆಯೂ ನನಗೆ ಮಾಹಿತಿಲ್ಲ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾದ ಮೇಲೆಯೇ ನನಗೆ ತಿಳಿದಿದ್ದು, ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಚಿಕ್ಕಣ್ಣ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್‌ ಗ್ಯಾಂಗ್‌ನ ಕೆಲ ಆರೋಪಿಗಳು ವಿಚಾರಣೆ ಸಮಯದಲ್ಲಿ ಚಿಕ್ಕಣ್ಣ ಹೆಸರು ಹೇಳಿದ್ದರು ಎನ್ನಲಾಗಿದ್ದು, ಹೀಗಾಗಿ ವಿಚಾರಣೆಗೆ ಚಿಕ್ಕಣ್ಣಗೆ ಪೊಲೀಸರು ನೋಟಿಸ್‌ ನೀಡಿದ್ದರು ಎಂದು ತನಿಖಾ ಮೂಲಗಳು ಹೇಳಿವೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

5 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

6 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

6 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

6 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

6 hours ago