ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸ್ಥಳ ಮಹಜರಿನ ಬಳಿಕ ಹಾಸ್ಯನಟ ಚಿಕ್ಕಣ್ಣ ಹೇಳಿದ್ದಿಷ್ಟು!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಕೊಲೆ ಆರೋಪಿ ನಟ ದರ್ಶನ್‌ ಸ್ನೇಹಿತರಾಗಿರುವ ಹಾಸ್ಯನಟ ಚಿಕ್ಕಣ್ಣ ಅವರನ್ನು ಅನ್ನಪೂರ್ಣೆಶ್ವರಿ ಠಾಣಾ ಪೊಲೀಸರು ತನಿಖೆ ಒಳಪಡಿಸಿದ್ದರು.

ಕೊಲೆ ಸಂಬಂಧ ಆರ್‌ಆರ್‌ ನಗರದಲ್ಲಿರುವ ಸ್ಟೋನಿ ಬ್ರೂಕ್‌ ಆಂಡ್‌ ಬಾರ್‌ ರೆಸ್ಟೋರೆಂಟ್‌ ಸ್ಥಳ ಮಹಜರಿಗೆ ತೆರಳುವ ಸಂಬಂಧ ನಟ ಚಿಕ್ಕಣ್ಣಗೆ ನೋಟಿಸ್‌ ನೀಡಲಾಗಿತ್ತು. ತಮ್ಮದೇ ಕಾರಿನಲ್ಲಿ ಠಾಣೆಗೆ ಬಂದ ಚಿಕ್ಕಣ್ಣರನ್ನು ತಪಾಸಣೆಗೆ ಒಳಪಡಿಸಿದ ಬಳಿಕ ಸ್ಥಳ ಮಹಜರು ನಡೆಸಲಾಯಿತು.

ಪೊಲೀಸರ ತನಿಖೆ ನಂತರ ಹಲವು ವಿಚಾರಗಳನ್ನು ಪೊಲೀಸರು ಕಲೆ ಹಾಕಿದರು ಎನ್ನಲಾಗಿದೆ. ಇತ್ತ ಹತ್ಯೆ ನಡೆದ ದಿನವೇ ದರ್ಶನ್‌ ಜತೆ ಸ್ಟೋನಿ ಬ್ರೂಕ್‌ ಪಬ್‌ ಪಾರ್ಟಿಯಲ್ಲಿ ಚಿಕ್ಕಣ್ಣ ಕಾಣಿಸಿಕೊಂಡಿದ್ದು, ಹಾಗಾಗಿ ಚಿಕ್ಕಣ್ಣ ಅವರನ್ನು ತನಿಖೆಗೆ ಒಳಪಡಿಸಲಾಗಿದೆ. ಈ ಸಂಬಂಧ ತಾವು ದರ್ಶನ್‌ ಅವರನ್ನು ಭೇಟಿಯಾಗಿದ್ದು ಯಾಕೆ ಎಂಬುದನ್ನು ಸ್ವತಃ ಚಿಕ್ಕಣ್ಣ ಹೇಳಿದ್ದಾರೆ.

ದರ್ಶನ್‌ ಅವರು ನನಗೆ ಕರೆ ಮಾಡಿ ಊಟಕ್ಕೆ ಬರುವಂತೆ ಹೇಳಿದರು ಹೀಗಾಗಿ ಊಟಕ್ಕಾಗಿ ಅಲ್ಲಿದೆ ಹೋದೆ. ದರ್ಶನ್‌ ಮತ್ತು ನಾನು ಸ್ನೇಹಿತರು. ಅವಾಗವಾಗ ಅಲ್ಲಲ್ಲಿ ಸೇರುತ್ತಿರುತ್ತೇವೆ. ಅವತ್ತು ಕೂಡಾ ಊಟಕ್ಕೆ ಕರೆದಿದ್ದರು ಹಾಗಾಗಿ ಹೋದೆ. ಬಳಿಕ ಅಲ್ಲಿ ಏನಾಯ್ತು ಎಂಬ ಮಾಹಿತಿ ನನಗಿಲ್ಲ. ರೇಣುಕಾಸ್ವಾಮಿ ಹಾಗೂ ಇತರೇ ಯಾವುದೇ ವಿಚಾರದ ಬಗ್ಗೆಯೂ ನನಗೆ ಮಾಹಿತಿಲ್ಲ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾದ ಮೇಲೆಯೇ ನನಗೆ ತಿಳಿದಿದ್ದು, ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಚಿಕ್ಕಣ್ಣ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್‌ ಗ್ಯಾಂಗ್‌ನ ಕೆಲ ಆರೋಪಿಗಳು ವಿಚಾರಣೆ ಸಮಯದಲ್ಲಿ ಚಿಕ್ಕಣ್ಣ ಹೆಸರು ಹೇಳಿದ್ದರು ಎನ್ನಲಾಗಿದ್ದು, ಹೀಗಾಗಿ ವಿಚಾರಣೆಗೆ ಚಿಕ್ಕಣ್ಣಗೆ ಪೊಲೀಸರು ನೋಟಿಸ್‌ ನೀಡಿದ್ದರು ಎಂದು ತನಿಖಾ ಮೂಲಗಳು ಹೇಳಿವೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

7 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

10 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

11 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

11 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

13 hours ago