ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಕೊಲೆ ಆರೋಪಿ ನಟ ದರ್ಶನ್ ಸ್ನೇಹಿತರಾಗಿರುವ ಹಾಸ್ಯನಟ ಚಿಕ್ಕಣ್ಣ ಅವರನ್ನು ಅನ್ನಪೂರ್ಣೆಶ್ವರಿ ಠಾಣಾ ಪೊಲೀಸರು ತನಿಖೆ ಒಳಪಡಿಸಿದ್ದರು.
ಕೊಲೆ ಸಂಬಂಧ ಆರ್ಆರ್ ನಗರದಲ್ಲಿರುವ ಸ್ಟೋನಿ ಬ್ರೂಕ್ ಆಂಡ್ ಬಾರ್ ರೆಸ್ಟೋರೆಂಟ್ ಸ್ಥಳ ಮಹಜರಿಗೆ ತೆರಳುವ ಸಂಬಂಧ ನಟ ಚಿಕ್ಕಣ್ಣಗೆ ನೋಟಿಸ್ ನೀಡಲಾಗಿತ್ತು. ತಮ್ಮದೇ ಕಾರಿನಲ್ಲಿ ಠಾಣೆಗೆ ಬಂದ ಚಿಕ್ಕಣ್ಣರನ್ನು ತಪಾಸಣೆಗೆ ಒಳಪಡಿಸಿದ ಬಳಿಕ ಸ್ಥಳ ಮಹಜರು ನಡೆಸಲಾಯಿತು.
ಪೊಲೀಸರ ತನಿಖೆ ನಂತರ ಹಲವು ವಿಚಾರಗಳನ್ನು ಪೊಲೀಸರು ಕಲೆ ಹಾಕಿದರು ಎನ್ನಲಾಗಿದೆ. ಇತ್ತ ಹತ್ಯೆ ನಡೆದ ದಿನವೇ ದರ್ಶನ್ ಜತೆ ಸ್ಟೋನಿ ಬ್ರೂಕ್ ಪಬ್ ಪಾರ್ಟಿಯಲ್ಲಿ ಚಿಕ್ಕಣ್ಣ ಕಾಣಿಸಿಕೊಂಡಿದ್ದು, ಹಾಗಾಗಿ ಚಿಕ್ಕಣ್ಣ ಅವರನ್ನು ತನಿಖೆಗೆ ಒಳಪಡಿಸಲಾಗಿದೆ. ಈ ಸಂಬಂಧ ತಾವು ದರ್ಶನ್ ಅವರನ್ನು ಭೇಟಿಯಾಗಿದ್ದು ಯಾಕೆ ಎಂಬುದನ್ನು ಸ್ವತಃ ಚಿಕ್ಕಣ್ಣ ಹೇಳಿದ್ದಾರೆ.
ದರ್ಶನ್ ಅವರು ನನಗೆ ಕರೆ ಮಾಡಿ ಊಟಕ್ಕೆ ಬರುವಂತೆ ಹೇಳಿದರು ಹೀಗಾಗಿ ಊಟಕ್ಕಾಗಿ ಅಲ್ಲಿದೆ ಹೋದೆ. ದರ್ಶನ್ ಮತ್ತು ನಾನು ಸ್ನೇಹಿತರು. ಅವಾಗವಾಗ ಅಲ್ಲಲ್ಲಿ ಸೇರುತ್ತಿರುತ್ತೇವೆ. ಅವತ್ತು ಕೂಡಾ ಊಟಕ್ಕೆ ಕರೆದಿದ್ದರು ಹಾಗಾಗಿ ಹೋದೆ. ಬಳಿಕ ಅಲ್ಲಿ ಏನಾಯ್ತು ಎಂಬ ಮಾಹಿತಿ ನನಗಿಲ್ಲ. ರೇಣುಕಾಸ್ವಾಮಿ ಹಾಗೂ ಇತರೇ ಯಾವುದೇ ವಿಚಾರದ ಬಗ್ಗೆಯೂ ನನಗೆ ಮಾಹಿತಿಲ್ಲ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾದ ಮೇಲೆಯೇ ನನಗೆ ತಿಳಿದಿದ್ದು, ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಚಿಕ್ಕಣ್ಣ ಸ್ಪಷ್ಟನೆ ನೀಡಿದ್ದಾರೆ.
ದರ್ಶನ್ ಗ್ಯಾಂಗ್ನ ಕೆಲ ಆರೋಪಿಗಳು ವಿಚಾರಣೆ ಸಮಯದಲ್ಲಿ ಚಿಕ್ಕಣ್ಣ ಹೆಸರು ಹೇಳಿದ್ದರು ಎನ್ನಲಾಗಿದ್ದು, ಹೀಗಾಗಿ ವಿಚಾರಣೆಗೆ ಚಿಕ್ಕಣ್ಣಗೆ ಪೊಲೀಸರು ನೋಟಿಸ್ ನೀಡಿದ್ದರು ಎಂದು ತನಿಖಾ ಮೂಲಗಳು ಹೇಳಿವೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…