ಮನರಂಜನೆ

ಚೆಲುವಣ್ಣನ ಸಹಾಯ 7 ಜನ್ಮವಾದರು ತೀರಿಸಲು ಆಗುವುದಿಲ್ಲ: ನಟ ದರ್ಶನ್‌

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ಈ ಬಾರಿ ಜೆಡಿಎಸ್‌ ನೇರ ಸ್ಪರ್ಧೇ ಮಾಡದೇ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದೆ. ಇತ್ತ ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ್ದು, ಬಲಿಷ್ಠ ಅಭ್ಯರ್ಥಿಯನ್ನೇ ನೇಮಿಸಿದೆ.

ಇತ್ತ ಬಿಜೆಪಿಯಿಂದ ಟಿಕೆಟ್‌ ಸಿಗುವ ಭರವಸೆ ಹೊಂದಿದ್ದ ಸಂಸದೆ ಸುಮಲತಾ ಅಂಬರೀಶ್‌ಗೆ ಬಿಜೆಪಿ ಶಾಕ್‌ ನೀಡಿತ್ತು. ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯನ್ನಾಗಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿತು.

ಇದರ ಬೆನ್ನಲ್ಲೇ ಸುಮಲತಾ ಪಕ್ಷ ಹೇಳಿದರೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು. ಇವರ ಮಾತಿಗೆ ಧನಿ ಗೂಡಿಸಿದ್ದ ದಾಸ, ಅಮ್ಮ ಬಾವಿಗೆ ಬೀಳು ಎಂದರೂ ಬೀಳಲು ಸಿದ್ದನಾಗಿರುವೆ ಎಂದು ಹೇಳಿಕೆ ನೀಡಿದ್ದರು.

ಈ ಎಲ್ಲಾ ಪ್ರಕರಣಗಳಿಂದ ಈ ಬಾರಿ ಮಂಡ್ಯದಲ್ಲಿ ದರ್ಶನ್‌, ಎಚ್‌ಡಿಕೆ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಡಿಬಾಸ್‌ ಏಕಾಏಕಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಮತ ಶಿಕಾರಿಗೆ ಸಜ್ಜಾಗಿಬಿಟ್ಟಿದ್ದರು.

ಇದು ಎಚ್‌ಡಿಕೆ ಹಾಗೂ ಮೈತ್ರಿ ಪಕ್ಷದ ದ್ವಂದ್ವಕ್ಕೆ ಕಾರಣವಾಗಿತ್ತು. ಇದಕ್ಕೆ ಸುಮಲತಾ ಹಾಗೂ ಡಿ ಬಾಸ್‌ ಇಬ್ಬರು ಸ್ಪಷ್ಟನೆ ಕೂಡಾ ನೀಡದ್ದಾರೆ. ಸುಮಲತಾ ಪ್ರಚಾರದ ಬಗ್ಗೆ ಮಾತನಾಡಿ, ಅದು ಅವರ ವಯಕ್ತಿಕ ಎಲ್ಲದಕ್ಕೂ ನಮ್ಮನ್ನೇ ಕೇಳಿ ಎನ್ನವುದು ಸರಿಯಲ್ಲ ಎಂದರೆ, ಡಿಬಾಸ್‌ ನಾನು ಪಕ್ಷದ ಪರವಾಗಿ ಬಂದಿಲ್ಲ ವ್ಯಕ್ತಿಗಾಗಿ ಬಂದಿದ್ದೇನೆ ಎಂದಿದ್ದರು.

ಇವತ್ತು (ಏ.23, ಮಂಗಳವಾರ) ಒಂದು ಹೆಜ್ಜೆ ಮುಂದೆ ಹೋಗಿ ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರನ್ನು ಕೊಂಡಾಡಿದ್ದಾರೆ. ಇದು ಎಲ್ಲರಲ್ಲಿಯೂ ಅಚ್ಚರಿಗೆ ಕಾರಣವಾಗಿದೆ.

ಜಿಲ್ಲೆಯ ನಾಗಮಂಗಲ ಕ್ಷೇತ್ರದ ಬೆಳ್ಳೂರು ಗ್ರಾಮದಲ್ಲಿ ಮತ ಯಾಚಿಸಿ ರೋಡ್‌ ಶೋ ನಡೆಸುವ ಸಂದರ್ಭದಲ್ಲಿ ಮಾತನಾಡಿರುವ ನಟ ದರ್ಶನ್‌, ಮಂಡ್ಯದಲ್ಲಿ ಚೆಲುವರಾಯಸ್ವಾಮಿ ಅವರ ಕೈ ಬಲಪಡಿಸಲು ಸ್ಟಾರ್‌ ಚಂದ್ರು ಬೆಂಬಲಿಸುವಂತೆ ಮನವಿ ಮಾಡಿದರು.

ನಾನು ಇವತ್ತು ಕಾಂಗ್ರೆಸ್‌ ಪರ ಮತ ಯಾಚಿಸಲು ಒಂದು ನಿರ್ಧಿಷ್ಟ ಕಾರಣವಿದೆ. 2019ರ ಚುನಾವಣೆ ವೇಳೆ ಚೆಲುವಣ್ಣ ನಮಗೆ ಸಹಾಯ ಮಾಡಿದರು. ಈ ಸಹಾಯವನ್ನು ನಾನು 7 ಜನ್ಮ ಎತ್ತಿದರು ತೀರಿಸಲು ಆಗವುದಿಲ್ಲ. ಹಾಗಾಗಿ ನಾನು ಕಾಂಗ್ರೆಸ್‌ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಅಸಲಿ ಕಾರಣವನ್ನು ವಿವರಿಸಿದರು.

2019 ರಲ್ಲಿ ಮೊದಲ ಬಾರಿಗೆ ಸಂಸದೆ ಸುಮಲತಾ ಅಂಬರೀಶ್‌ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ರು. ಈ ವೇಳೆ ನಟ ದರ್ಶನ್‌ ಹಾಗೂ ಯಶ್‌ ಜಿಲ್ಲೆಯಾದ್ಯಂತ ಪ್ರಚಾರ ಮಾಡಿ, ಸುಮಲತಾ ಗೆಲುವಿಗೆ ಬೆನ್ನೆಲುಬಾಗಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

17 mins ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

40 mins ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

54 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

1 hour ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

2 hours ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago