ಮನರಂಜನೆ

ಚೆಲುವಣ್ಣನ ಸಹಾಯ 7 ಜನ್ಮವಾದರು ತೀರಿಸಲು ಆಗುವುದಿಲ್ಲ: ನಟ ದರ್ಶನ್‌

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ಈ ಬಾರಿ ಜೆಡಿಎಸ್‌ ನೇರ ಸ್ಪರ್ಧೇ ಮಾಡದೇ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದೆ. ಇತ್ತ ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ್ದು, ಬಲಿಷ್ಠ ಅಭ್ಯರ್ಥಿಯನ್ನೇ ನೇಮಿಸಿದೆ.

ಇತ್ತ ಬಿಜೆಪಿಯಿಂದ ಟಿಕೆಟ್‌ ಸಿಗುವ ಭರವಸೆ ಹೊಂದಿದ್ದ ಸಂಸದೆ ಸುಮಲತಾ ಅಂಬರೀಶ್‌ಗೆ ಬಿಜೆಪಿ ಶಾಕ್‌ ನೀಡಿತ್ತು. ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯನ್ನಾಗಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿತು.

ಇದರ ಬೆನ್ನಲ್ಲೇ ಸುಮಲತಾ ಪಕ್ಷ ಹೇಳಿದರೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು. ಇವರ ಮಾತಿಗೆ ಧನಿ ಗೂಡಿಸಿದ್ದ ದಾಸ, ಅಮ್ಮ ಬಾವಿಗೆ ಬೀಳು ಎಂದರೂ ಬೀಳಲು ಸಿದ್ದನಾಗಿರುವೆ ಎಂದು ಹೇಳಿಕೆ ನೀಡಿದ್ದರು.

ಈ ಎಲ್ಲಾ ಪ್ರಕರಣಗಳಿಂದ ಈ ಬಾರಿ ಮಂಡ್ಯದಲ್ಲಿ ದರ್ಶನ್‌, ಎಚ್‌ಡಿಕೆ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಡಿಬಾಸ್‌ ಏಕಾಏಕಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಮತ ಶಿಕಾರಿಗೆ ಸಜ್ಜಾಗಿಬಿಟ್ಟಿದ್ದರು.

ಇದು ಎಚ್‌ಡಿಕೆ ಹಾಗೂ ಮೈತ್ರಿ ಪಕ್ಷದ ದ್ವಂದ್ವಕ್ಕೆ ಕಾರಣವಾಗಿತ್ತು. ಇದಕ್ಕೆ ಸುಮಲತಾ ಹಾಗೂ ಡಿ ಬಾಸ್‌ ಇಬ್ಬರು ಸ್ಪಷ್ಟನೆ ಕೂಡಾ ನೀಡದ್ದಾರೆ. ಸುಮಲತಾ ಪ್ರಚಾರದ ಬಗ್ಗೆ ಮಾತನಾಡಿ, ಅದು ಅವರ ವಯಕ್ತಿಕ ಎಲ್ಲದಕ್ಕೂ ನಮ್ಮನ್ನೇ ಕೇಳಿ ಎನ್ನವುದು ಸರಿಯಲ್ಲ ಎಂದರೆ, ಡಿಬಾಸ್‌ ನಾನು ಪಕ್ಷದ ಪರವಾಗಿ ಬಂದಿಲ್ಲ ವ್ಯಕ್ತಿಗಾಗಿ ಬಂದಿದ್ದೇನೆ ಎಂದಿದ್ದರು.

ಇವತ್ತು (ಏ.23, ಮಂಗಳವಾರ) ಒಂದು ಹೆಜ್ಜೆ ಮುಂದೆ ಹೋಗಿ ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರನ್ನು ಕೊಂಡಾಡಿದ್ದಾರೆ. ಇದು ಎಲ್ಲರಲ್ಲಿಯೂ ಅಚ್ಚರಿಗೆ ಕಾರಣವಾಗಿದೆ.

ಜಿಲ್ಲೆಯ ನಾಗಮಂಗಲ ಕ್ಷೇತ್ರದ ಬೆಳ್ಳೂರು ಗ್ರಾಮದಲ್ಲಿ ಮತ ಯಾಚಿಸಿ ರೋಡ್‌ ಶೋ ನಡೆಸುವ ಸಂದರ್ಭದಲ್ಲಿ ಮಾತನಾಡಿರುವ ನಟ ದರ್ಶನ್‌, ಮಂಡ್ಯದಲ್ಲಿ ಚೆಲುವರಾಯಸ್ವಾಮಿ ಅವರ ಕೈ ಬಲಪಡಿಸಲು ಸ್ಟಾರ್‌ ಚಂದ್ರು ಬೆಂಬಲಿಸುವಂತೆ ಮನವಿ ಮಾಡಿದರು.

ನಾನು ಇವತ್ತು ಕಾಂಗ್ರೆಸ್‌ ಪರ ಮತ ಯಾಚಿಸಲು ಒಂದು ನಿರ್ಧಿಷ್ಟ ಕಾರಣವಿದೆ. 2019ರ ಚುನಾವಣೆ ವೇಳೆ ಚೆಲುವಣ್ಣ ನಮಗೆ ಸಹಾಯ ಮಾಡಿದರು. ಈ ಸಹಾಯವನ್ನು ನಾನು 7 ಜನ್ಮ ಎತ್ತಿದರು ತೀರಿಸಲು ಆಗವುದಿಲ್ಲ. ಹಾಗಾಗಿ ನಾನು ಕಾಂಗ್ರೆಸ್‌ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಅಸಲಿ ಕಾರಣವನ್ನು ವಿವರಿಸಿದರು.

2019 ರಲ್ಲಿ ಮೊದಲ ಬಾರಿಗೆ ಸಂಸದೆ ಸುಮಲತಾ ಅಂಬರೀಶ್‌ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ರು. ಈ ವೇಳೆ ನಟ ದರ್ಶನ್‌ ಹಾಗೂ ಯಶ್‌ ಜಿಲ್ಲೆಯಾದ್ಯಂತ ಪ್ರಚಾರ ಮಾಡಿ, ಸುಮಲತಾ ಗೆಲುವಿಗೆ ಬೆನ್ನೆಲುಬಾಗಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

2 mins ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

4 mins ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

7 mins ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

8 mins ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

12 mins ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

18 mins ago